ಸದಾಶಿವನಗರದಲ್ಲಿರುವ ಸುರೇಶ್ ನಿವಾಸಕ್ಕೆ ಬಂದ ಸೋಮಶೇಖರ್ ಮತ್ತು ಹೆಬ್ಬಾರ್ ಕೆಲಹೊತ್ತು ಮಾತುಕತೆ ನಡೆಸಿದರು. ಸಚಿವ ಜಮೀರ್ ಅಹಮದ್ ಖಾನ್, ಚಿತ್ರದುರ್ಗ ಪರಾಜಿತ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ, ಸಚಿವ ಎನ್. ಚಲುವರಾಯಸ್ವಾಮಿ, ಶಾಸಕರಾದ ಪಿ.ಎಂ. ನರೇಂದ್ರ ಸ್ವಾಮಿ, ರವಿ ಗಣಿಗ, ರಮೇಶ್ ಬಂಡಿಸಿದ್ದೇಗೌಡ ಕೂಡಾ ಸುರೇಶ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು.