<p><strong>ಬೆಂಗಳೂರು</strong>: ನ್ಯೂಜೆರ್ಸಿಯ ಫ್ರಾಂಕ್ಲಿನ್ ಟೌನ್ಶಿಪ್ನಲ್ಲಿ 20 ಎಕರೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಆದಿ ಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕನ್ನಡಿಗರು ಮತ್ತು ಆದಿಚುಂಚನಗಿರಿ ಮಠದ ಭಕ್ತರು ಭೈರವನಾಥ ಪೀಠ ಸ್ಥಾಪನೆಗೆ ಆರ್ಥಿಕ ಸಹಾಯ ಮಾಡುವಂತೆ ಮನವಿ ಮಾಡಿದ್ದಾರೆ.</p>.<p>‘ಬಾಲಗಂಗಾಧರನಾಥ ಸ್ವಾಮೀಜಿ ಮಹಾರಾಷ್ಟ್ರದಲ್ಲಿ ಸ್ಥಾಪಿಸಿದ್ದ ಭೈರವನಾಥ ದೇವಾಲಯಕ್ಕೆ ಹಿಂದೆ ನಾನು ಭೇಟಿ ನೀಡಿದ್ದೆ. ಅತ್ಯಂತ ಶಕ್ತಿಶಾಲಿಯಾದ ದೇವಸ್ಥಾನವನ್ನು ನ್ಯೂಜೆರ್ಸಿಯಲ್ಲಿ ಸ್ಥಾಪಿಸಲು ಅಮೆರಿಕ ಸರ್ಕಾರ ಅನುಮತಿ ನೀಡಿರುವುದೇ ವಿಸ್ಮಯ’ ಎಂದಿದ್ದಾರೆ.</p>.<p>‘ನಿರ್ಮಲಾನಂದನಾಥ ಸ್ವಾಮೀಜಿಯವರ ನೇತೃತ್ವದಲ್ಲಿ ಈ ಕನಸು ಈಡೇರುತ್ತಿದೆ. ಆಧ್ಯಾತ್ಮದ ಪರಂಪರೆಯನ್ನು ರಕ್ಷಿಸಿ, ಉತ್ತೇಜನ ನೀಡಲು ಅವರ ಮಾರ್ಗದರ್ಶನದಲ್ಲಿ ಈ ಯೋಜನೆ ಪ್ರಗತಿ ಸಾಧಿಸುತ್ತಿದೆ. ಇದರ ಶಂಕುಸ್ಥಾಪನೆಗೆ ನನ್ನನ್ನು ಆಹ್ವಾನಿಸಿದ್ದರು’ ಎಂದರು.</p>.<p>ದಕ್ಷಿಣ ಭಾರತದ ದೇವಾಲಯಗಳ ವಾಸ್ತುಶಿಲ್ಪವಾಗಿರುವ ಆಗಮ ಶಾಸ್ತ್ರದಂತೆ ಈ ಮಠವನ್ನು ನಿರ್ಮಾಣ ಮಾಡಲಾಗುತ್ತಿದ್ದು, ಯೋಜನೆ ಕುರಿತು ಮುಖ್ಯ ವಾಸ್ತುಶಿಲ್ಪಿ ಬಾಬು ಕೀಲಾರ ಅವರು ಶಿವಕುಮಾರ್ಗೆ ಮಾಹಿತಿ ನೀಡಿದರು. ಆದಿ ಚುಂಚನಗಿರಿ ಸ್ಥಳೀಯ ಮಠದ ಶ್ರೀಶೈಲನಾಥ ಸ್ವಾಮೀಜಿ, ದಯಾಶಂಕರ್ ಅಡಪ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನ್ಯೂಜೆರ್ಸಿಯ ಫ್ರಾಂಕ್ಲಿನ್ ಟೌನ್ಶಿಪ್ನಲ್ಲಿ 20 ಎಕರೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಆದಿ ಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕನ್ನಡಿಗರು ಮತ್ತು ಆದಿಚುಂಚನಗಿರಿ ಮಠದ ಭಕ್ತರು ಭೈರವನಾಥ ಪೀಠ ಸ್ಥಾಪನೆಗೆ ಆರ್ಥಿಕ ಸಹಾಯ ಮಾಡುವಂತೆ ಮನವಿ ಮಾಡಿದ್ದಾರೆ.</p>.<p>‘ಬಾಲಗಂಗಾಧರನಾಥ ಸ್ವಾಮೀಜಿ ಮಹಾರಾಷ್ಟ್ರದಲ್ಲಿ ಸ್ಥಾಪಿಸಿದ್ದ ಭೈರವನಾಥ ದೇವಾಲಯಕ್ಕೆ ಹಿಂದೆ ನಾನು ಭೇಟಿ ನೀಡಿದ್ದೆ. ಅತ್ಯಂತ ಶಕ್ತಿಶಾಲಿಯಾದ ದೇವಸ್ಥಾನವನ್ನು ನ್ಯೂಜೆರ್ಸಿಯಲ್ಲಿ ಸ್ಥಾಪಿಸಲು ಅಮೆರಿಕ ಸರ್ಕಾರ ಅನುಮತಿ ನೀಡಿರುವುದೇ ವಿಸ್ಮಯ’ ಎಂದಿದ್ದಾರೆ.</p>.<p>‘ನಿರ್ಮಲಾನಂದನಾಥ ಸ್ವಾಮೀಜಿಯವರ ನೇತೃತ್ವದಲ್ಲಿ ಈ ಕನಸು ಈಡೇರುತ್ತಿದೆ. ಆಧ್ಯಾತ್ಮದ ಪರಂಪರೆಯನ್ನು ರಕ್ಷಿಸಿ, ಉತ್ತೇಜನ ನೀಡಲು ಅವರ ಮಾರ್ಗದರ್ಶನದಲ್ಲಿ ಈ ಯೋಜನೆ ಪ್ರಗತಿ ಸಾಧಿಸುತ್ತಿದೆ. ಇದರ ಶಂಕುಸ್ಥಾಪನೆಗೆ ನನ್ನನ್ನು ಆಹ್ವಾನಿಸಿದ್ದರು’ ಎಂದರು.</p>.<p>ದಕ್ಷಿಣ ಭಾರತದ ದೇವಾಲಯಗಳ ವಾಸ್ತುಶಿಲ್ಪವಾಗಿರುವ ಆಗಮ ಶಾಸ್ತ್ರದಂತೆ ಈ ಮಠವನ್ನು ನಿರ್ಮಾಣ ಮಾಡಲಾಗುತ್ತಿದ್ದು, ಯೋಜನೆ ಕುರಿತು ಮುಖ್ಯ ವಾಸ್ತುಶಿಲ್ಪಿ ಬಾಬು ಕೀಲಾರ ಅವರು ಶಿವಕುಮಾರ್ಗೆ ಮಾಹಿತಿ ನೀಡಿದರು. ಆದಿ ಚುಂಚನಗಿರಿ ಸ್ಥಳೀಯ ಮಠದ ಶ್ರೀಶೈಲನಾಥ ಸ್ವಾಮೀಜಿ, ದಯಾಶಂಕರ್ ಅಡಪ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>