<p><strong>ಬೆಂಗಳೂರು:</strong> ‘ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ಕಡಿತ ಮಾಡಬಾರದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.</p>.<p>ಹಾಲು ಉತ್ಪಾದನೆ ಹೆಚ್ಚಳವಾದ ಕಾರಣ ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟ (ಬಮೂಲ್) ದರ ಕಡಿತ ಮಾಡಿದೆ ಎಂದು ವರದಿಯಾಗಿತ್ತು. ಹೀಗಾಗಿ ಮುಖ್ಯಮಂತ್ರಿ ಈ ಸೂಚನೆ ನೀಡಿದ್ದಾರೆ.</p>.<p>ಕರ್ನಾಟಕ ಹಾಲು ಮಹಾ ಮಂಡಳದ (ಕೆಎಂಎಫ್) ವ್ಯವಸ್ಥಾಪಕ ನಿರ್ದೇಶಕರ ಜೊತೆ ಮಾತನಾಡಿದ ಮುಖ್ಯಮಂತ್ರಿ, ‘ಏಕಾಏಕಿ ದರ ಕಡಿತ ಮಾಡುವಂತಿಲ್ಲ. ಈ ಕುರಿತು ಸರ್ಕಾರದ ಜೊತೆ ಚರ್ಚಿಸಬೇಕು’ ಎಂದು ಸೂಚಿಸಿದ್ದಾರೆ.</p>.<p>‘ದರ ಕಡಿತ ಮಾಡಿದರೆ ರೈತರಿಗೆ ತೊಂದರೆಯಾಗುತ್ತದೆ. ಈ ಅಂಶವನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು’ ಎಂದೂ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.</p>.<p>ಬೇಸಿಗೆ ಸಮಯದಲ್ಲಿ ಹಾಲಿನ ಉತ್ಪಾದನೆ ಕಡಿಮೆಯಾದ್ದರಿಂದ ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟ (ಬಮೂಲ್) ಏಪ್ರಿಲ್ 1ರಿಂದ ಮೇ 31ರವರೆಗೆ ಪ್ರತಿ ಲೀಟರ್ ಹಾಲಿಗೆ ₹2.85 ವಿಶೇಷ ಪ್ರೋತ್ಸಾಹ ಧನ ಘೋಷಿಸಿತ್ತು. ಇದೀಗ ಒಕ್ಕೂಟದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿ ಹಸಿರು ಮೇವು ಲಭ್ಯವಾಗಿದ್ದು, ಹಾಲಿ ಉತ್ಪಾದನೆ ಹೆಚ್ಚಳವಾಗಿದೆ. ಈ ಕಾರಣಕ್ಕೆ ಪ್ರೋತ್ಸಾಹಧನದಲ್ಲಿ ₹1.50 ಕಡಿತಗೊಳಿಸಿ ಆದೇಶ ಹೊರಡಿಸಲಾಗಿತ್ತು.</p>.<p>undefined undefined</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ಕಡಿತ ಮಾಡಬಾರದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.</p>.<p>ಹಾಲು ಉತ್ಪಾದನೆ ಹೆಚ್ಚಳವಾದ ಕಾರಣ ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟ (ಬಮೂಲ್) ದರ ಕಡಿತ ಮಾಡಿದೆ ಎಂದು ವರದಿಯಾಗಿತ್ತು. ಹೀಗಾಗಿ ಮುಖ್ಯಮಂತ್ರಿ ಈ ಸೂಚನೆ ನೀಡಿದ್ದಾರೆ.</p>.<p>ಕರ್ನಾಟಕ ಹಾಲು ಮಹಾ ಮಂಡಳದ (ಕೆಎಂಎಫ್) ವ್ಯವಸ್ಥಾಪಕ ನಿರ್ದೇಶಕರ ಜೊತೆ ಮಾತನಾಡಿದ ಮುಖ್ಯಮಂತ್ರಿ, ‘ಏಕಾಏಕಿ ದರ ಕಡಿತ ಮಾಡುವಂತಿಲ್ಲ. ಈ ಕುರಿತು ಸರ್ಕಾರದ ಜೊತೆ ಚರ್ಚಿಸಬೇಕು’ ಎಂದು ಸೂಚಿಸಿದ್ದಾರೆ.</p>.<p>‘ದರ ಕಡಿತ ಮಾಡಿದರೆ ರೈತರಿಗೆ ತೊಂದರೆಯಾಗುತ್ತದೆ. ಈ ಅಂಶವನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು’ ಎಂದೂ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.</p>.<p>ಬೇಸಿಗೆ ಸಮಯದಲ್ಲಿ ಹಾಲಿನ ಉತ್ಪಾದನೆ ಕಡಿಮೆಯಾದ್ದರಿಂದ ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟ (ಬಮೂಲ್) ಏಪ್ರಿಲ್ 1ರಿಂದ ಮೇ 31ರವರೆಗೆ ಪ್ರತಿ ಲೀಟರ್ ಹಾಲಿಗೆ ₹2.85 ವಿಶೇಷ ಪ್ರೋತ್ಸಾಹ ಧನ ಘೋಷಿಸಿತ್ತು. ಇದೀಗ ಒಕ್ಕೂಟದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿ ಹಸಿರು ಮೇವು ಲಭ್ಯವಾಗಿದ್ದು, ಹಾಲಿ ಉತ್ಪಾದನೆ ಹೆಚ್ಚಳವಾಗಿದೆ. ಈ ಕಾರಣಕ್ಕೆ ಪ್ರೋತ್ಸಾಹಧನದಲ್ಲಿ ₹1.50 ಕಡಿತಗೊಳಿಸಿ ಆದೇಶ ಹೊರಡಿಸಲಾಗಿತ್ತು.</p>.<p>undefined undefined</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>