ಅಭ್ಯರ್ಥಿಗಳಾದ ನಿರ್ಮಲಾ ಸೀತಾರಾಮನ್, ಜಗ್ಗೇಶ್ ಮತ್ತು ಲಹರ್ ಸಿಂಗ್ ಅವರಿಗೆ ಮತ ಹಾಕಿಸಲು ಸಚಿವರಾದ ಆರ್.ಅಶೋಕ, ವಿ.ಸುನಿಲ್ ಕುಮಾರ್ ಮತ್ತು ಬಿ.ಸಿ.ನಾಗೇಶ್ ಅವರನ್ನು ಒಳಗೊಂಡ ಮೂರು ತಂಡಗಳನ್ನು ರಚಿಸಲಾಗಿದೆ. ಆ ತಂಡದ ಮೂಲಕವೇ ಶಾಸಕರು ಮತ ಚಲಾಯಿಸಬೇಕಾಗುತ್ತದೆ ಎಂದು ಬಿಜೆಪಿ ಮುಖಂಡರೊಬ್ಬರು ತಿಳಿಸಿದರು.