<p><strong>ಬೆಂಗಳೂರು</strong>: ‘ದೊಡ್ಡಬಳ್ಳಾಪುರಕ್ಕೆ ಮೆಟ್ರೊ ರೈಲು ಸಂಪರ್ಕ ಕಲ್ಪಿಸುವ ಸಂಬಂಧ ಸಾಧ್ಯಾಸಾಧ್ಯತೆ ಕುರಿತು ವರದಿ ನೀಡಲು ಸಮಗ್ರ ಚಲನಶೀಲತೆ ಯೋಜನೆಯ (ಸಿಎಂಪಿ) ತಜ್ಞರ ಸಮಿತಿಗೆ ರಾಜ್ಯ ಸರ್ಕಾರದಿಂದ ಶಿಫಾರಸು ಮಾಡಲಾಗುವುದು’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.</p><p>ವಿಧಾನಸಭೆಯಲ್ಲಿ ಬಿಜೆಪಿಯ ಧೀರಜ್ ಮುನಿರಾಜು ಕೇಳಿದ ಪ್ರಶ್ನೆಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪರವಾಗಿ ಕೃಷ್ಣ ಬೈರೇಗೌಡ ಉತ್ತರಿಸಿದರು.</p><p>‘ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ನಮ್ಮ ಮೆಟ್ರೊ 2ಎ ಮತ್ತು 2ಬಿ ಮಾರ್ಗದ ಕಾಮಗಾರಿ ಪ್ರಗತಿಯಲ್ಲಿದೆ. ಅದು 2027ರ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ. ಜೊತೆಗೆ, 3 ಮತ್ತು 3ಎ ಹಂತಕ್ಕೂ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಎರಡರಲ್ಲೂ ದೊಡ್ಡಬಳ್ಳಾಪುರಕ್ಕೆ ಮೆಟ್ರೊ ರೈಲು ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ್ರಸ್ತಾವ ಇಲ್ಲ’ ಎಂದರು.</p><p>‘ಬೆಂಗಳೂರು ನಗರದಲ್ಲಿ ಮೆಟ್ರೊ ರೈಲು ಮಾರ್ಗ ಯೋಜಿಸಲು ಸಿಎಂಪಿ ಸಮಿತಿಯಿದ್ದು, ಅದು ಯಾವ ಮಾರ್ಗ ನಿರ್ಮಾಣ ಮಾಡಬೇಕು ಎಂದು ಯೋಜಿಸಲಿದೆ. ಆದರೂ, ಭವಿಷ್ಯದ ಮೆಟ್ರೊ ರೈಲು ವ್ಯವಸ್ಥೆ ಒದಗಿಸಲು ಯಲಹಂಕ- ರಾಜಾನುಕುಂಟೆ- ದೊಡ್ಡಬಳ್ಳಾಪುರ ಸೇರಿದಂತೆ 26 ಕಿ.ಮೀ ಮೆಟ್ರೊ ಕಾರಿಡಾರ್ ನಿರ್ಮಾಣಕ್ಕೆ ಈ ಹಿಂದೆ ತಾತ್ಕಾಲಿಕ ಮಾಸ್ಟರ್ ಪ್ಲ್ಯಾನ್ ಮಾಡಲಾಗಿತ್ತು. ಆದರೆ, ಅದನ್ನು ಮುಂದುವರಿಸಿರಲಿಲ್ಲ. ಇದೀಗ ಪ್ರಸ್ತಾವವನ್ನು, ಸಿಎಂಪಿ ತಜ್ಞರ ಸಮಿತಿಗೆ ಶಿಫಾರಸು ಮಾಡಲಾಗುವುದು’ ಎಂದರು</p>.<p><strong>‘ರಸ್ತೆ ಅಗಲ 45 ಮೀಟರ್ಗೆ ಇಳಿಕೆ’</strong></p><p>ಬೆಂಗಳೂರು: ‘ನಗರದ ಮಧುರೆಯಿಂದ ರಾಜಾನುಕುಂಟೆ ಮಾರ್ಗವಾಗಿ ದೇವನಹಳ್ಳಿ ರಸ್ತೆವರೆಗೆ ನಿರ್ಮಿಸಲಾಗುತ್ತಿರುವ 21.38 ಕಿಮೀ ರಸ್ತೆಯ ಅಗಲವನ್ನು 90 ಮೀಟರ್ನಿಂದ 45 ಮೀಟರ್ಗೆ ಇಳಿಸಲು ಹೊಸದಾಗಿ ಆದೇಶ ಹೊರಡಿಸಲಾಗುವುದು’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.</p><p>ವಿಧಾನಸಭೆಯಲ್ಲಿ ಬಿಜೆಪಿಯ ಎಸ್.ಆರ್. ವಿಶ್ವನಾಥ್ ಕೇಳಿದ ಪ್ರಶ್ನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪರವಾಗಿ ಕೃಷ್ಣ ಬೈರೇಗೌಡ ಉತ್ತರಿಸಿದರು. ‘ಮಧುರೆಯಿಂದ ರಾಜಾನುಕುಂಟೆ ಮಾರ್ಗವಾಗಿ ದೇವನಹಳ್ಳಿ<br>ರಸ್ತೆವರೆಗೆ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದಿಂದ (ಕೆಆರ್ಡಿಸಿಎಲ್) 21.38 ಕಿಮೀ ಉದ್ದದ ಚತುಷ್ಪಥ ರಸ್ತೆ ನಿರ್ಮಿಸಲಾಗುತ್ತಿದೆ. ಈ ರಸ್ತೆ ಕಾಮಗಾರಿಯಲ್ಲಿ ಈಗಾಗಲೇ 8.04 ಕಿಮೀ ರಸ್ತೆ ಕಾಮಗಾರಿ ಪೂರ್ಣಗೊಳಿಸಲಾಗಿದೆ.ಇನ್ನು 13.34 ಕಿಮೀ ಉದ್ದದ ರಸ್ತೆ ನಿರ್ಮಾಣ ಮಾಡಬೇಕಿದ್ದು, ಕಾಮಗಾರಿಗೆ ಅಗತ್ಯವಿರುವ ಭೂ ಸ್ವಾಧೀನಪಡಿಸಿಕೊಳ್ಳಬೇಕಿದೆ. ಅದಕ್ಕಾಗಿ ರಸ್ತೆಯ ಅಗಲ ಕಡಿಮೆ ಮಾಡಲು ಆದೇಶ ಹೊರಡಿಸಲಾಗುವುದು’ ಎಂದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ದೊಡ್ಡಬಳ್ಳಾಪುರಕ್ಕೆ ಮೆಟ್ರೊ ರೈಲು ಸಂಪರ್ಕ ಕಲ್ಪಿಸುವ ಸಂಬಂಧ ಸಾಧ್ಯಾಸಾಧ್ಯತೆ ಕುರಿತು ವರದಿ ನೀಡಲು ಸಮಗ್ರ ಚಲನಶೀಲತೆ ಯೋಜನೆಯ (ಸಿಎಂಪಿ) ತಜ್ಞರ ಸಮಿತಿಗೆ ರಾಜ್ಯ ಸರ್ಕಾರದಿಂದ ಶಿಫಾರಸು ಮಾಡಲಾಗುವುದು’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.</p><p>ವಿಧಾನಸಭೆಯಲ್ಲಿ ಬಿಜೆಪಿಯ ಧೀರಜ್ ಮುನಿರಾಜು ಕೇಳಿದ ಪ್ರಶ್ನೆಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪರವಾಗಿ ಕೃಷ್ಣ ಬೈರೇಗೌಡ ಉತ್ತರಿಸಿದರು.</p><p>‘ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ನಮ್ಮ ಮೆಟ್ರೊ 2ಎ ಮತ್ತು 2ಬಿ ಮಾರ್ಗದ ಕಾಮಗಾರಿ ಪ್ರಗತಿಯಲ್ಲಿದೆ. ಅದು 2027ರ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ. ಜೊತೆಗೆ, 3 ಮತ್ತು 3ಎ ಹಂತಕ್ಕೂ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಎರಡರಲ್ಲೂ ದೊಡ್ಡಬಳ್ಳಾಪುರಕ್ಕೆ ಮೆಟ್ರೊ ರೈಲು ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ್ರಸ್ತಾವ ಇಲ್ಲ’ ಎಂದರು.</p><p>‘ಬೆಂಗಳೂರು ನಗರದಲ್ಲಿ ಮೆಟ್ರೊ ರೈಲು ಮಾರ್ಗ ಯೋಜಿಸಲು ಸಿಎಂಪಿ ಸಮಿತಿಯಿದ್ದು, ಅದು ಯಾವ ಮಾರ್ಗ ನಿರ್ಮಾಣ ಮಾಡಬೇಕು ಎಂದು ಯೋಜಿಸಲಿದೆ. ಆದರೂ, ಭವಿಷ್ಯದ ಮೆಟ್ರೊ ರೈಲು ವ್ಯವಸ್ಥೆ ಒದಗಿಸಲು ಯಲಹಂಕ- ರಾಜಾನುಕುಂಟೆ- ದೊಡ್ಡಬಳ್ಳಾಪುರ ಸೇರಿದಂತೆ 26 ಕಿ.ಮೀ ಮೆಟ್ರೊ ಕಾರಿಡಾರ್ ನಿರ್ಮಾಣಕ್ಕೆ ಈ ಹಿಂದೆ ತಾತ್ಕಾಲಿಕ ಮಾಸ್ಟರ್ ಪ್ಲ್ಯಾನ್ ಮಾಡಲಾಗಿತ್ತು. ಆದರೆ, ಅದನ್ನು ಮುಂದುವರಿಸಿರಲಿಲ್ಲ. ಇದೀಗ ಪ್ರಸ್ತಾವವನ್ನು, ಸಿಎಂಪಿ ತಜ್ಞರ ಸಮಿತಿಗೆ ಶಿಫಾರಸು ಮಾಡಲಾಗುವುದು’ ಎಂದರು</p>.<p><strong>‘ರಸ್ತೆ ಅಗಲ 45 ಮೀಟರ್ಗೆ ಇಳಿಕೆ’</strong></p><p>ಬೆಂಗಳೂರು: ‘ನಗರದ ಮಧುರೆಯಿಂದ ರಾಜಾನುಕುಂಟೆ ಮಾರ್ಗವಾಗಿ ದೇವನಹಳ್ಳಿ ರಸ್ತೆವರೆಗೆ ನಿರ್ಮಿಸಲಾಗುತ್ತಿರುವ 21.38 ಕಿಮೀ ರಸ್ತೆಯ ಅಗಲವನ್ನು 90 ಮೀಟರ್ನಿಂದ 45 ಮೀಟರ್ಗೆ ಇಳಿಸಲು ಹೊಸದಾಗಿ ಆದೇಶ ಹೊರಡಿಸಲಾಗುವುದು’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.</p><p>ವಿಧಾನಸಭೆಯಲ್ಲಿ ಬಿಜೆಪಿಯ ಎಸ್.ಆರ್. ವಿಶ್ವನಾಥ್ ಕೇಳಿದ ಪ್ರಶ್ನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪರವಾಗಿ ಕೃಷ್ಣ ಬೈರೇಗೌಡ ಉತ್ತರಿಸಿದರು. ‘ಮಧುರೆಯಿಂದ ರಾಜಾನುಕುಂಟೆ ಮಾರ್ಗವಾಗಿ ದೇವನಹಳ್ಳಿ<br>ರಸ್ತೆವರೆಗೆ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದಿಂದ (ಕೆಆರ್ಡಿಸಿಎಲ್) 21.38 ಕಿಮೀ ಉದ್ದದ ಚತುಷ್ಪಥ ರಸ್ತೆ ನಿರ್ಮಿಸಲಾಗುತ್ತಿದೆ. ಈ ರಸ್ತೆ ಕಾಮಗಾರಿಯಲ್ಲಿ ಈಗಾಗಲೇ 8.04 ಕಿಮೀ ರಸ್ತೆ ಕಾಮಗಾರಿ ಪೂರ್ಣಗೊಳಿಸಲಾಗಿದೆ.ಇನ್ನು 13.34 ಕಿಮೀ ಉದ್ದದ ರಸ್ತೆ ನಿರ್ಮಾಣ ಮಾಡಬೇಕಿದ್ದು, ಕಾಮಗಾರಿಗೆ ಅಗತ್ಯವಿರುವ ಭೂ ಸ್ವಾಧೀನಪಡಿಸಿಕೊಳ್ಳಬೇಕಿದೆ. ಅದಕ್ಕಾಗಿ ರಸ್ತೆಯ ಅಗಲ ಕಡಿಮೆ ಮಾಡಲು ಆದೇಶ ಹೊರಡಿಸಲಾಗುವುದು’ ಎಂದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>