ಹಗರಣದ ವಿಷಯ ತಿಳಿದೂ ಸಹ ಪ್ರಜ್ವಲ್ ರೇವಣ್ಣನನ್ನು ಬಿಜೆಪಿ ಬೆಂಬಲಿಸಿದೆ ಎಂದಾದರೆ ರಾಜ್ಯದ ಮಹಿಳೆಯರ ಘನತೆಯ ಬಗ್ಗೆ ಬಿಜೆಪಿಗೆ ಕಾಳಜಿ ಇಲ್ಲ ಎಂದರ್ಥವಲ್ಲವೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಕಾಂಗ್ರೆಸ್ ಪಕ್ಷವು ಬಿಜೆಪಿ ಮುಖಂಡ ದೇವರಾಜೇಗೌಡರು, ಪ್ರಜ್ವಲ್ ರೇವಣ್ಣನ ಕರ್ಮಕಾಂಡದ ಬಗ್ಗೆ 2023ರ ಡಿಸೆಂಬರ್ 8ನೇ ತಾರೀಖಿನಂದೇ ಬಿಜೆಪಿ ನಾಯಕರ ಗಮನ ಸೆಳೆದಿದ್ದಾರೆ ಎಂದು ಪೋಸ್ಟ್ ನಲ್ಲಿ ಬರೆದುಕೊಂಡಿದೆ. ಎಲ್ಲಾ ಸಂಗತಿಗಳು ತಿಳಿದ ನಂತರವೂ ಮೋದಿಯವರು ಡಿಸೆಂಬರ್ 21ರಂದು ಆರೋಪಿಗಳಾದ ಪ್ರಜ್ವಲ್ ರೇವಣ್ಣ ಮತ್ತು ರೇವಣ್ಣರನ್ನು ಪ್ರಧಾನಿ ಕಚೇರಿಗೆ ಕರೆಸಿಕೊಂಡು ಮೋದಿ ಪರಿವಾರಕ್ಕೆ ಸೇರಿಸಿಕೊಂಡರು ಎಂದು ಆರೋಪಿಸಿದೆ