ಮುಂದುವರಿದು, ಸಂಸದ ಪ್ರತಾಪ ಸಿಂಹ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ್ದ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದಾಗ ಸಂಸದರ ಹೀನ ವರ್ತನೆಯನ್ನು ಖಂಡಿಸಲಿಲ್ಲವೇಕೆ?, ಮೈಸೂರಿನ ಬಿಜೆಪಿ ನಾಯಕ ರಾಮ್ ದಾಸ್ ಮಹಿಳೆಯೊಬ್ಬರನ್ನು ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಆರೋಪ ಕೇಳಿಬಂದಾಗ ಮೌನವಹಿಸಿದ್ದೇಕೆ? ಆರಗ ಜ್ಞಾನೇಂದ್ರ ಅತ್ಯಾಚಾರ ಸಂತ್ರಸ್ತೆಯ ಬಗ್ಗೆ ಕ್ಷುಲ್ಲಕವಾಗಿ ಮಾತಾಡಿದಾಗ ಬಾಯಿ ಮುಚ್ಚಿಕೊಂಡಿದ್ದೀಕೆ? ಎಂದು ಬಿಜೆಪಿ ವಿರುದ್ಧ ಟೀಕಾ ಪ್ರಹಾರ ನಡೆಸಿದೆ.