<p><strong>ಕೆಂಗೇರಿ: </strong>‘ದೇಶದ ಕಾನೂನಿನಡಿ ಪ್ರತಿಯೊಬ್ಬರೂ ನೆಮ್ಮದಿಯಿಂದ ಸ್ವಾತಂತ್ರ್ಯ ಪೂರ್ವಕವಾಗಿ ಜೀವನ ನಡೆಸುವ ಹಕ್ಕು ಹೊಂದಿದ್ದಾರೆ. ಈ ಸವಲತ್ತನ್ನು ಬಳಸಿಕೊಂಡು ಮತ್ತೊಬ್ಬರ ಖಾಸಗಿ ಬದುಕಿಗೆ, ಜೀವನದ ಹಕ್ಕುಗಳಿಗೆ ಭಂಗವನ್ನುಂಟು ಮಾಡುವುದಕ್ಕೆ ಯಾರಿಗೂ ಅವಕಾಶವಿಲ್ಲ’ ಎಂದು ರಾಜ್ಯ ಗ್ರಾಹಕರ ವ್ಯಾಜ್ಯಗಳಪರಿಹಾರ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಹುಲುವಾಡಿ ಜಿ. ರಮೇಶ್ ತಿಳಿಸಿದರು.</p>.<p>ರಾಜ್ಯ ಎನ್ಎಸ್ಎಸ್ ಘಟಕ, ಕೇಂದ್ರ ಸರ್ಕಾರದ ಪ್ರಾಂತೀಯ ಎನ್ಎಸ್ಎಸ್ ಘಟಕದ ವತಿಯಿಂದ ರಾಷ್ಟ್ರೀಯ ಏಕತಾ ಶಿಬಿರದ ಅಂಗವಾಗಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಏಕ್ ಭಾರತ್ ಶ್ರೇಷ್ಠ್ ಭಾರತ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ನ್ಯಾಯಮೂರ್ತಿ ಆರ್. ನಟರಾಜ್ ಮಾತನಾಡಿ, ‘ಧಾರ್ಮಿಕ ಆಚರಣೆಗಳು ಸಹಜ. ಅವುಗಳು ಮನೆಯೊಳಗೆ ಸಾಂಗವಾಗಿ ನೆರವೇರಲಿ. ಅದರಿಂದೀಚೆಗೆ ನಾವೆಲ್ಲರೂ ಒಂದೇ. ಭಾರತೀಯರೆಂಬ ಭಾವನಮ್ಮಲ್ಲಿ ಏಕತೆಯನ್ನು ತರಲಿ’ ಎಂದು ತಿಳಿಸಿದರು.</p>.<p>ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಆರ್.ವೇಣುಗೋಪಾಲ್, ‘5ನೇ ಶತಮಾನದಲ್ಲೇ ಭೂಮಿ ದುಂಡಗಿದೆ ಎಂದು ಭಾರತದ ಖಗೋಳಶಾಸ್ತ್ರಜ್ಞರು ಹೇಳಿದ್ದರು. ಇಂತಹ ಪ್ರಬುದ್ಧ ವಿದ್ವಾಂಸರನ್ನು ಹೊಂದಿದ್ದ ದೇಶ ಇಂದುಬೌದ್ಧಿಕ ದಿವಾಳಿತನ ಎದುರಿಸುತ್ತಿರು ವುದು ದುರ್ದೈವ’ ಎಂದು ಹೇಳಿದರು.</p>.<p>ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಜಿ.ಕಲ್ಪನಾ, ಕೆ.ವಿ.ಖಾದ್ರಿ ನರಸಿಂಹಯ್ಯ, ಎನ್ಎಸ್ಎಸ್ ರಾಜ್ಯ ಸಂಯೋಜನಾಧಿಕಾರಿಡಾ. ಗಣನಾಥ ಶೆಟ್ಟಿ ಎಕ್ಕಾರು, ಬೆಂಗಳೂರು ವಿವಿಯ ಕುಲಸಚಿವ ಡಾ.ಬಿ.ಕೆ.ರವಿ, ಬೆಂಗಳೂರು ವಿಶ್ವವಿದ್ಯಾಲಯದ ಎನ್ಎಸ್ಎಸ್ ಸಂಯೋಜನಾಧಿಕಾರಿ ಡಾ. ಎನ್. ಸತೀಶ್ ಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಗೇರಿ: </strong>‘ದೇಶದ ಕಾನೂನಿನಡಿ ಪ್ರತಿಯೊಬ್ಬರೂ ನೆಮ್ಮದಿಯಿಂದ ಸ್ವಾತಂತ್ರ್ಯ ಪೂರ್ವಕವಾಗಿ ಜೀವನ ನಡೆಸುವ ಹಕ್ಕು ಹೊಂದಿದ್ದಾರೆ. ಈ ಸವಲತ್ತನ್ನು ಬಳಸಿಕೊಂಡು ಮತ್ತೊಬ್ಬರ ಖಾಸಗಿ ಬದುಕಿಗೆ, ಜೀವನದ ಹಕ್ಕುಗಳಿಗೆ ಭಂಗವನ್ನುಂಟು ಮಾಡುವುದಕ್ಕೆ ಯಾರಿಗೂ ಅವಕಾಶವಿಲ್ಲ’ ಎಂದು ರಾಜ್ಯ ಗ್ರಾಹಕರ ವ್ಯಾಜ್ಯಗಳಪರಿಹಾರ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಹುಲುವಾಡಿ ಜಿ. ರಮೇಶ್ ತಿಳಿಸಿದರು.</p>.<p>ರಾಜ್ಯ ಎನ್ಎಸ್ಎಸ್ ಘಟಕ, ಕೇಂದ್ರ ಸರ್ಕಾರದ ಪ್ರಾಂತೀಯ ಎನ್ಎಸ್ಎಸ್ ಘಟಕದ ವತಿಯಿಂದ ರಾಷ್ಟ್ರೀಯ ಏಕತಾ ಶಿಬಿರದ ಅಂಗವಾಗಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಏಕ್ ಭಾರತ್ ಶ್ರೇಷ್ಠ್ ಭಾರತ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ನ್ಯಾಯಮೂರ್ತಿ ಆರ್. ನಟರಾಜ್ ಮಾತನಾಡಿ, ‘ಧಾರ್ಮಿಕ ಆಚರಣೆಗಳು ಸಹಜ. ಅವುಗಳು ಮನೆಯೊಳಗೆ ಸಾಂಗವಾಗಿ ನೆರವೇರಲಿ. ಅದರಿಂದೀಚೆಗೆ ನಾವೆಲ್ಲರೂ ಒಂದೇ. ಭಾರತೀಯರೆಂಬ ಭಾವನಮ್ಮಲ್ಲಿ ಏಕತೆಯನ್ನು ತರಲಿ’ ಎಂದು ತಿಳಿಸಿದರು.</p>.<p>ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಆರ್.ವೇಣುಗೋಪಾಲ್, ‘5ನೇ ಶತಮಾನದಲ್ಲೇ ಭೂಮಿ ದುಂಡಗಿದೆ ಎಂದು ಭಾರತದ ಖಗೋಳಶಾಸ್ತ್ರಜ್ಞರು ಹೇಳಿದ್ದರು. ಇಂತಹ ಪ್ರಬುದ್ಧ ವಿದ್ವಾಂಸರನ್ನು ಹೊಂದಿದ್ದ ದೇಶ ಇಂದುಬೌದ್ಧಿಕ ದಿವಾಳಿತನ ಎದುರಿಸುತ್ತಿರು ವುದು ದುರ್ದೈವ’ ಎಂದು ಹೇಳಿದರು.</p>.<p>ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಜಿ.ಕಲ್ಪನಾ, ಕೆ.ವಿ.ಖಾದ್ರಿ ನರಸಿಂಹಯ್ಯ, ಎನ್ಎಸ್ಎಸ್ ರಾಜ್ಯ ಸಂಯೋಜನಾಧಿಕಾರಿಡಾ. ಗಣನಾಥ ಶೆಟ್ಟಿ ಎಕ್ಕಾರು, ಬೆಂಗಳೂರು ವಿವಿಯ ಕುಲಸಚಿವ ಡಾ.ಬಿ.ಕೆ.ರವಿ, ಬೆಂಗಳೂರು ವಿಶ್ವವಿದ್ಯಾಲಯದ ಎನ್ಎಸ್ಎಸ್ ಸಂಯೋಜನಾಧಿಕಾರಿ ಡಾ. ಎನ್. ಸತೀಶ್ ಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>