ನಂತರ 'ಪ್ರಜಾವಾಣಿ'ಯೊಂದಿಗೆ ಮಾತನಾಡಿದ ಸಿಇಒ ಡಾ. ಗಿರೀಶ್ ಬದೋಲೆ, 'ಪ್ರತಿ ಹುಣ್ಣಿಮೆ ಸಂದರ್ಭದಲ್ಲಿ ಇಲ್ಲಿ ವೃದ್ದರನ್ನು ಬಿಟ್ಟು ಹೋಗುವ ರೂಢಿ ಇದೆ. ಅಂಥವರ ವಿರುದ್ಧ ಪ್ರಕರಣ ದಾಖಲಿಸುವಂತೆ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಗಾಣಗಾಪುರದಲ್ಲಿ ಕತ್ತಲು ಇರುವ ಬೀದಿಗಳಲ್ಲಿ ಒಂದು ವಾರದಲ್ಲಿ ಸೋಲಾರ್ ಬೀದಿ ದೀಪ ಹಾಗೂ ಅಲ್ಲಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಸೂಚಿಸಿದ್ದೇನೆ. ವೃದ್ದರನ್ನು ಸರ್ಕಾರಿ ವೃದ್ಧಾಶ್ರಮದಲ್ಲಿ ದಾಖಲಿಸಬಹುದಾಗಿದೆ. ವೃದ್ಧಾಶ್ರಮದ ಸಹಾಯವಾಣಿಯ ಫಲಕವನ್ನು ಅಲ್ಲಲ್ಲಿ ಅಳವಡಿಸಲಾಗುವುದು. ಬೀದಿನಾಯಿಗಳು ವೃದ್ದೆಯ ದೇಹ ತಿಂದ ಪ್ರಕರಣದ ತನಿಖೆ ನಡೆಯುತ್ತಿದೆ' ಎಂದರು.