<p><strong>ಹುಬ್ಬಳ್ಳಿ:</strong> ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲ್ಲೂಕಿನ ಮಿಣಜಗಿ ಹತ್ತಿರ ಡೋಣಿ ನದಿಯಲ್ಲಿ ಸೋಮವಾರ ಸಂಜೆ ಇದ್ದಕ್ಕಿದ್ದಂತೆ ಪ್ರವಾಹ ಉಂಟಾಗಿದ್ದು, 350ಕ್ಕೂ ಹೆಚ್ಚು ಕುರಿಗಳು, ಮೂವರು ಕುರಿಗಾಹಿಗಳು ನದಿ ನಡುವಿನ ಗಡ್ಡೆಯಲ್ಲಿ ಸಿಲುಕಿಕೊಂಡಿದ್ದಾರೆ.</p>.<p>ಡೋಣಿ ನದಿ ನಡುಗಡ್ಡೆಯಲ್ಲಿ ಸೊಂಪಾದ ಹುಲ್ಲು ಬೆಳೆದಿದ್ದು, ನೀರಿನ ಹರಿವು ಕಡಿಮೆ ಇರುವುದರಿಂದ ಮಂದೆ ಮೇಯಿಸಲು ಕುರಿಗಾಹಿಗಳು ಅಲ್ಲಿಗೆ ತೆರಳಿದ್ದರು. ಸಂಜೆ ಮನೆಗೆ ಬರುವ ಸಮಯದಲ್ಲಿ ಪ್ರವಾಹ ಉಂಟಾ<br />ಗಿದ್ದು, ಮೊಬೈಲ್ ಫೋನ್ ಮೂಲಕ ಕುಟುಂಬಗಳನ್ನು ಸಂಪರ್ಕಿಸಿದ್ದಾರೆ.</p>.<p>ಪೊಲೀಸ್ ತಂಡ, ಅಗ್ನಿ ಶಾಮಕ ದಳದವರು ಹಾಗೂ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿದ್ದು, ರಕ್ಷಣಾ ಕಾರ್ಯಕ್ಕೆ ಕ್ರಮ ಕೈಗೊಂಡಿದ್ದಾರೆ.</p>.<p>ಹುಬ್ಬಳ್ಳಿಯಲ್ಲಿಯೂ ಸಂಜೆಯಿಂದ ಗುಡುಗು ಮಿಂಚಿನೊಂದಿಗೆ ಮಳೆ ಹನಿಯುತ್ತಿದೆ. ಶಿರಸಿಯಲ್ಲಿ ರಾತ್ರಿ ಧಾರಾಕಾರ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲ್ಲೂಕಿನ ಮಿಣಜಗಿ ಹತ್ತಿರ ಡೋಣಿ ನದಿಯಲ್ಲಿ ಸೋಮವಾರ ಸಂಜೆ ಇದ್ದಕ್ಕಿದ್ದಂತೆ ಪ್ರವಾಹ ಉಂಟಾಗಿದ್ದು, 350ಕ್ಕೂ ಹೆಚ್ಚು ಕುರಿಗಳು, ಮೂವರು ಕುರಿಗಾಹಿಗಳು ನದಿ ನಡುವಿನ ಗಡ್ಡೆಯಲ್ಲಿ ಸಿಲುಕಿಕೊಂಡಿದ್ದಾರೆ.</p>.<p>ಡೋಣಿ ನದಿ ನಡುಗಡ್ಡೆಯಲ್ಲಿ ಸೊಂಪಾದ ಹುಲ್ಲು ಬೆಳೆದಿದ್ದು, ನೀರಿನ ಹರಿವು ಕಡಿಮೆ ಇರುವುದರಿಂದ ಮಂದೆ ಮೇಯಿಸಲು ಕುರಿಗಾಹಿಗಳು ಅಲ್ಲಿಗೆ ತೆರಳಿದ್ದರು. ಸಂಜೆ ಮನೆಗೆ ಬರುವ ಸಮಯದಲ್ಲಿ ಪ್ರವಾಹ ಉಂಟಾ<br />ಗಿದ್ದು, ಮೊಬೈಲ್ ಫೋನ್ ಮೂಲಕ ಕುಟುಂಬಗಳನ್ನು ಸಂಪರ್ಕಿಸಿದ್ದಾರೆ.</p>.<p>ಪೊಲೀಸ್ ತಂಡ, ಅಗ್ನಿ ಶಾಮಕ ದಳದವರು ಹಾಗೂ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿದ್ದು, ರಕ್ಷಣಾ ಕಾರ್ಯಕ್ಕೆ ಕ್ರಮ ಕೈಗೊಂಡಿದ್ದಾರೆ.</p>.<p>ಹುಬ್ಬಳ್ಳಿಯಲ್ಲಿಯೂ ಸಂಜೆಯಿಂದ ಗುಡುಗು ಮಿಂಚಿನೊಂದಿಗೆ ಮಳೆ ಹನಿಯುತ್ತಿದೆ. ಶಿರಸಿಯಲ್ಲಿ ರಾತ್ರಿ ಧಾರಾಕಾರ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>