ಹುಬ್ಬಳ್ಳಿ: ಸಾರಿಗೆ ನೌಕರರು ದಯವಿಟ್ಟು ಮುಷ್ಕರ ಕೈಬಿಟ್ಟು ಸರ್ಕಾರದೊಂದಿಗೆ ಸಹಕರಿಸಬೇಕು. ಒಂಬತ್ತು ಬೇಡಿಕೆಗಳ ಪೈಕಿ, ಈಗಾಗಲೇ ಎಂಟು ಬೇಡಿಕೆಗಳನ್ನು ಈಡೇರಿಸಲಾಗಿದೆ. ಹಾಗಾಗಿ, ಕಠಿಣ ಕ್ರಮಕ್ಕೆ ಅವಕಾಶ ಕೊಡಬಾರದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಹುಬ್ಬಳ್ಳಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೌಕರರು ಮುಷ್ಕರ ಮುಂದುವರಿಸಿದರೆ ಖಾಸಗಿ ವಾಹನಗಳು ಮತ್ತು ರೈಲುಗಳ ಸಂಚಾರ ಹೆಚ್ಚಿಸಿ, ಪರ್ಯಾಯ ವ್ಯವಸ್ಥೆ ಮಾಡಲಾಗುವುದು ಎಂದರು.