<p><strong>ಬೆಂಗಳೂರು:</strong> ಬಿಜೆಪಿಯು ತನ್ನ ಅಭ್ಯರ್ಥಿಗಳ ಹೆಸರಿನಲ್ಲಿ ಮತ ಕೇಳದೇ, ಪ್ರಧಾನಿ ಮೋದಿ ಹೆಸರಿನಲ್ಲಿ ಮತ ಯಾಚನೆ ಮಾಡುತ್ತಿರುವ ಬಗ್ಗೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಬಿಜೆಪಿ ಅಭ್ಯರ್ಥಿಗಳು ತಮ್ಮ ಸಾಧನೆ ಹೆಸರಿನಲ್ಲಿ ಮತ ಕೇಳದೇ, ಮೋದಿ ಹೆಸರಿನಲ್ಲಿ ಮತ ಕೇಳುತ್ತಿದ್ದಾರೆ. ಅದೇ ರೀತಿ ಮೋದಿಯವರು ಅಭ್ಯರ್ಥಿಗಳ ಹೆಸರಿನಲ್ಲಿ ಮತ ಕೇಳದೇ ತಮ್ಮ ಹೆಸರಿನಲ್ಲಿ ಮತ ಕೇಳುತ್ತಿದ್ದಾರೆ. ಇದು ಸರಿಯಲ್ಲ ಎಂದು ಅವರು ಭಾನುವಾರ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.</p>.<p>ಮತದಾರರು ಈ ವಿದ್ಯಮಾನಗಳ ಬಗ್ಗೆ ಗಮನ ಹರಿಸಬೇಕು. ದೇಶದಲ್ಲಿ ಚುನಾವಣೆಯು ಅಭಿವೃದ್ಧಿ ಹೆಸರಿನಲ್ಲಿ ನಡೆಯಬೇಕೇ ಹೊರತು ವ್ಯಕ್ತಿ ಕೇಂದ್ರಿತವಾಗಿ ನಡೆಯಬಾರದು. ಮೋದಿಯವರು ಇದೇ 18 ರವರೆಗೆ ಮೈಸೂರು, ಬೆಂಗಳೂರು, ಮಂಗಳೂರು, ಕೋಲಾರ, ಬೆಳಗಾವಿ , ಹೈದರಾಬಾದ್- ಕರ್ನಾಟಕ ಪ್ರದೇಶದಲ್ಲಿ ಭಾಷಣ ಮಾಡುತ್ತಾರೆ. ಇದನ್ನು ದೂಷಿಸುವುದಿಲ್ಲ, ಜನತೆ ಇದನ್ನು ಗಮನಿಸಬೇಕು ಎಂದರು.</p>.<p>‘ಈ ಬಾರಿ ನಾನೂ ಚುನಾವಣೆ ಕಣದಲ್ಲಿ ಇರುವುದರಿಂದ ನಮ್ಮ ಸರ್ಕಾರದ ಸಾಧನೆಯನ್ನು ಜನರ ಮುಂಡಿಡುತ್ತೇವೆ. ಮೋದಿ ವರ್ತನೆಯನ್ನೂ ಜನರಿಗೆ ಹೇಳುತ್ತೇವೆ. ಜನರೇ ತೀರ್ಮಾನಿಸಲಿ, ಯಾರ ಬಗ್ಗೆಯೂ ಲಘುವಾಗಿ ಮಾತನಾಡುವುದಿಲ್ಲ’ ಎಂದರು.</p>.<p>‘ಮೋದಿ ನೇತೃತ್ವದ ಸರ್ಕಾರ ₹500 ಕೋಟಿಗಳಷ್ಟು ಮೊತ್ತವನ್ನು ಮಾಧ್ಯಮಗಳ ಜಾಹಿರಾತಿಗೆ ಖರ್ಚು ಮಾಡಿದೆ. ಹೀಗಾಗಿ ಮಾಧ್ಯಮಗಳು ಮೋದಿ ಸಾಧನೆ, ವ್ಯಕ್ತಿತ್ವನ್ನು ಕೊಂಡಾಡುತ್ತಿವೆ’ ಎಂದರು.</p>.<p>ಇದೇ 8 ರಂದು ಆಂಧ್ರದಲ್ಲಿ ಪ್ರಚಾರ ನಡೆಸುತ್ತೇವೆ. ಇದೇ 9 ರಿಂದ 13 ರವರೆಗೆ ಸಿದ್ದರಾಮಯ್ಯ ಅವರ ಜತೆ ಸೇರಿ ಜಂಟಿ ಪ್ರಚಾರ ನಡೆಸುತ್ತೇನೆ ಎಂದರು.</p>.<p>ಐಟಿ ಇಲಾಖೆ ಮಂಡ್ಯ, ಹಾಸನದಲ್ಲಿ ದಾಳಿ ಮಾಡಿದೆ. ಅಲ್ಲದೆ, ಪಶ್ಚಿಮಬಂಗಾಳ, ಒಡಿಶಾದಲ್ಲೂ ದಾಳಿ ಮಾಡಿದೆ. ಯಾರನ್ನೆಲ್ಲ ಗುರಿ ಮಾಡಿ ದಾಳಿ ನಡೆಸಲಾಗಿದೆ ಎಂಬ ವಿಚಾರವೂ ಗೊತ್ತು. ಈ ಬಗ್ಗೆ ಮುಂದೆ ಮಾತನಾಡುತ್ತೇನೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿಜೆಪಿಯು ತನ್ನ ಅಭ್ಯರ್ಥಿಗಳ ಹೆಸರಿನಲ್ಲಿ ಮತ ಕೇಳದೇ, ಪ್ರಧಾನಿ ಮೋದಿ ಹೆಸರಿನಲ್ಲಿ ಮತ ಯಾಚನೆ ಮಾಡುತ್ತಿರುವ ಬಗ್ಗೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಬಿಜೆಪಿ ಅಭ್ಯರ್ಥಿಗಳು ತಮ್ಮ ಸಾಧನೆ ಹೆಸರಿನಲ್ಲಿ ಮತ ಕೇಳದೇ, ಮೋದಿ ಹೆಸರಿನಲ್ಲಿ ಮತ ಕೇಳುತ್ತಿದ್ದಾರೆ. ಅದೇ ರೀತಿ ಮೋದಿಯವರು ಅಭ್ಯರ್ಥಿಗಳ ಹೆಸರಿನಲ್ಲಿ ಮತ ಕೇಳದೇ ತಮ್ಮ ಹೆಸರಿನಲ್ಲಿ ಮತ ಕೇಳುತ್ತಿದ್ದಾರೆ. ಇದು ಸರಿಯಲ್ಲ ಎಂದು ಅವರು ಭಾನುವಾರ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.</p>.<p>ಮತದಾರರು ಈ ವಿದ್ಯಮಾನಗಳ ಬಗ್ಗೆ ಗಮನ ಹರಿಸಬೇಕು. ದೇಶದಲ್ಲಿ ಚುನಾವಣೆಯು ಅಭಿವೃದ್ಧಿ ಹೆಸರಿನಲ್ಲಿ ನಡೆಯಬೇಕೇ ಹೊರತು ವ್ಯಕ್ತಿ ಕೇಂದ್ರಿತವಾಗಿ ನಡೆಯಬಾರದು. ಮೋದಿಯವರು ಇದೇ 18 ರವರೆಗೆ ಮೈಸೂರು, ಬೆಂಗಳೂರು, ಮಂಗಳೂರು, ಕೋಲಾರ, ಬೆಳಗಾವಿ , ಹೈದರಾಬಾದ್- ಕರ್ನಾಟಕ ಪ್ರದೇಶದಲ್ಲಿ ಭಾಷಣ ಮಾಡುತ್ತಾರೆ. ಇದನ್ನು ದೂಷಿಸುವುದಿಲ್ಲ, ಜನತೆ ಇದನ್ನು ಗಮನಿಸಬೇಕು ಎಂದರು.</p>.<p>‘ಈ ಬಾರಿ ನಾನೂ ಚುನಾವಣೆ ಕಣದಲ್ಲಿ ಇರುವುದರಿಂದ ನಮ್ಮ ಸರ್ಕಾರದ ಸಾಧನೆಯನ್ನು ಜನರ ಮುಂಡಿಡುತ್ತೇವೆ. ಮೋದಿ ವರ್ತನೆಯನ್ನೂ ಜನರಿಗೆ ಹೇಳುತ್ತೇವೆ. ಜನರೇ ತೀರ್ಮಾನಿಸಲಿ, ಯಾರ ಬಗ್ಗೆಯೂ ಲಘುವಾಗಿ ಮಾತನಾಡುವುದಿಲ್ಲ’ ಎಂದರು.</p>.<p>‘ಮೋದಿ ನೇತೃತ್ವದ ಸರ್ಕಾರ ₹500 ಕೋಟಿಗಳಷ್ಟು ಮೊತ್ತವನ್ನು ಮಾಧ್ಯಮಗಳ ಜಾಹಿರಾತಿಗೆ ಖರ್ಚು ಮಾಡಿದೆ. ಹೀಗಾಗಿ ಮಾಧ್ಯಮಗಳು ಮೋದಿ ಸಾಧನೆ, ವ್ಯಕ್ತಿತ್ವನ್ನು ಕೊಂಡಾಡುತ್ತಿವೆ’ ಎಂದರು.</p>.<p>ಇದೇ 8 ರಂದು ಆಂಧ್ರದಲ್ಲಿ ಪ್ರಚಾರ ನಡೆಸುತ್ತೇವೆ. ಇದೇ 9 ರಿಂದ 13 ರವರೆಗೆ ಸಿದ್ದರಾಮಯ್ಯ ಅವರ ಜತೆ ಸೇರಿ ಜಂಟಿ ಪ್ರಚಾರ ನಡೆಸುತ್ತೇನೆ ಎಂದರು.</p>.<p>ಐಟಿ ಇಲಾಖೆ ಮಂಡ್ಯ, ಹಾಸನದಲ್ಲಿ ದಾಳಿ ಮಾಡಿದೆ. ಅಲ್ಲದೆ, ಪಶ್ಚಿಮಬಂಗಾಳ, ಒಡಿಶಾದಲ್ಲೂ ದಾಳಿ ಮಾಡಿದೆ. ಯಾರನ್ನೆಲ್ಲ ಗುರಿ ಮಾಡಿ ದಾಳಿ ನಡೆಸಲಾಗಿದೆ ಎಂಬ ವಿಚಾರವೂ ಗೊತ್ತು. ಈ ಬಗ್ಗೆ ಮುಂದೆ ಮಾತನಾಡುತ್ತೇನೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>