<p><strong>ಬೆಳಗಾವಿ: </strong>‘ಈಗಿನ ಬಿಜೆಪಿ ಸರ್ಕಾರದಲ್ಲಿ ಅಧಿಕಾರ ಅನುಭವಿಸುತ್ತಿರುವವರು ಕಾಂಗ್ರೆಸ್–ಜೆಡಿಎಸ್ನಿಂದ ಬಂದ 17 ಮಂದಿಯ ತ್ಯಾಗ ಮರೆಯಬಾರದು’ ಎಂದು ಬಿಜೆಪಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕೋರಿದರು.</p>.<p>ಗೋಕಾಕದಲ್ಲಿ ಪತ್ರಕರ್ತರೊಂದಿಗೆ ಗುರುವಾರ ಮಾತನಾಡಿದ ಅವರು, ‘ನಾನಾಗಲಿ, ಶಾಸಕ ರಮೇಶ ಜಾರಕಿಹೊಳಿ ಅವರಾಗಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಲ್ಲ. ರಮೇಶ, ಮಹೇಶ ಕುಮಠಳ್ಳಿ, ಶ್ರೀಮಂತ ಪಾಟೀಲ ಸೇರಿದಂತೆ ಬೇರೆ ಪಕ್ಷದಿಂದ ಬಂದವರ ತ್ಯಾಗದಿಂದಾಗಿ ಅಧಿಕಾರದಲ್ಲಿದ್ದೀರಿ ನೆನಪಿರಲಿ’ ಎಂದರು.</p>.<p class="Subhead"><strong>ಪರೋಕ್ಷ ವಾಗ್ದಾಳಿ: </strong>‘ಅವರು ಬರಲಿಲ್ಲ ಎಂದರೆ ಯಾರೂ ಸಚಿವ, ರಾಜ್ಯಸಭಾ ಸದಸ್ಯ, ಉಪ ಮುಖ್ಯಮಂತ್ರಿ ಆಗುತ್ತಿರಲಿಲ್ಲ’ ಎಂದು ಉಮೇಶ ಕತ್ತಿ, ಈರಣ್ಣ ಕಡಾಡಿ ಹಾಗೂ ಲಕ್ಷ್ಮಣ ಸವದಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.</p>.<p>‘ಬೆಳಗಾವಿಯಲ್ಲಿ ಈಚೆಗೆ ನಡೆಸಿದ ಸಭೆಗೆ ನಮ್ಮನ್ನು ಯಾರೂ ಕರೆದಿಲ್ಲ. ಸಭೆ ನಾನು ಕರೆದಿಲ್ಲ ಎಂದು ಸಚಿವ ಉಮೇಶ ಕತ್ತಿ ಹೇಳಿದ್ದಾರೆ. ಅಧಿಕೃತ ಸಭೆಯಾಗಿದ್ದರೆ ಆಹ್ವಾನಿಸಬೇಕಿತ್ತು. ಪಕ್ಷದವರೆ ಸ್ಪಷ್ಟಪಡಿಸಬೇಕು’ಎಂದರು.</p>.<p>‘ಪಕ್ಷದ ದೃಷ್ಟಿಯಿಂದ ಅದು ಒಳ್ಳೆಯ ಬೆಳವಣಿಗೆಯಲ್ಲ. ಮುಖಂಡರು ಕೂಡಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ನಾಯಕರು ಹಾಗೂ ಆರ್ಎಸ್ಎಸ್ನವರು ಗಮನಿಸುತ್ತಿದ್ದಾರೆ. ಸರಿಪಡಿಸುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>‘ಈಗಿನ ಬಿಜೆಪಿ ಸರ್ಕಾರದಲ್ಲಿ ಅಧಿಕಾರ ಅನುಭವಿಸುತ್ತಿರುವವರು ಕಾಂಗ್ರೆಸ್–ಜೆಡಿಎಸ್ನಿಂದ ಬಂದ 17 ಮಂದಿಯ ತ್ಯಾಗ ಮರೆಯಬಾರದು’ ಎಂದು ಬಿಜೆಪಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕೋರಿದರು.</p>.<p>ಗೋಕಾಕದಲ್ಲಿ ಪತ್ರಕರ್ತರೊಂದಿಗೆ ಗುರುವಾರ ಮಾತನಾಡಿದ ಅವರು, ‘ನಾನಾಗಲಿ, ಶಾಸಕ ರಮೇಶ ಜಾರಕಿಹೊಳಿ ಅವರಾಗಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಲ್ಲ. ರಮೇಶ, ಮಹೇಶ ಕುಮಠಳ್ಳಿ, ಶ್ರೀಮಂತ ಪಾಟೀಲ ಸೇರಿದಂತೆ ಬೇರೆ ಪಕ್ಷದಿಂದ ಬಂದವರ ತ್ಯಾಗದಿಂದಾಗಿ ಅಧಿಕಾರದಲ್ಲಿದ್ದೀರಿ ನೆನಪಿರಲಿ’ ಎಂದರು.</p>.<p class="Subhead"><strong>ಪರೋಕ್ಷ ವಾಗ್ದಾಳಿ: </strong>‘ಅವರು ಬರಲಿಲ್ಲ ಎಂದರೆ ಯಾರೂ ಸಚಿವ, ರಾಜ್ಯಸಭಾ ಸದಸ್ಯ, ಉಪ ಮುಖ್ಯಮಂತ್ರಿ ಆಗುತ್ತಿರಲಿಲ್ಲ’ ಎಂದು ಉಮೇಶ ಕತ್ತಿ, ಈರಣ್ಣ ಕಡಾಡಿ ಹಾಗೂ ಲಕ್ಷ್ಮಣ ಸವದಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.</p>.<p>‘ಬೆಳಗಾವಿಯಲ್ಲಿ ಈಚೆಗೆ ನಡೆಸಿದ ಸಭೆಗೆ ನಮ್ಮನ್ನು ಯಾರೂ ಕರೆದಿಲ್ಲ. ಸಭೆ ನಾನು ಕರೆದಿಲ್ಲ ಎಂದು ಸಚಿವ ಉಮೇಶ ಕತ್ತಿ ಹೇಳಿದ್ದಾರೆ. ಅಧಿಕೃತ ಸಭೆಯಾಗಿದ್ದರೆ ಆಹ್ವಾನಿಸಬೇಕಿತ್ತು. ಪಕ್ಷದವರೆ ಸ್ಪಷ್ಟಪಡಿಸಬೇಕು’ಎಂದರು.</p>.<p>‘ಪಕ್ಷದ ದೃಷ್ಟಿಯಿಂದ ಅದು ಒಳ್ಳೆಯ ಬೆಳವಣಿಗೆಯಲ್ಲ. ಮುಖಂಡರು ಕೂಡಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ನಾಯಕರು ಹಾಗೂ ಆರ್ಎಸ್ಎಸ್ನವರು ಗಮನಿಸುತ್ತಿದ್ದಾರೆ. ಸರಿಪಡಿಸುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>