<p><strong>ಅಥಣಿ:</strong> ‘ತಾಲ್ಲೂಕಿನಲ್ಲಿ ಈವರೆಗೆ ಕೋವಿಡ್-19 ಪ್ರಕರಣ ಕಾಣಿಸಿಕೊಂಡಿಲ್ಲ. ಹಾಗೆಂದು ಉದಾಸೀನ ಮಾಡಬಾರದು. ಜಿಲ್ಲೆ ಮತ್ತು ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ದಿನೇ ದಿನೇ ಅಧಿಕವಾಗುತ್ತಿದ್ದು ಎಚ್ಚರಿಕೆಯಿಂದ ಇರಬೇಕು. ಅಂತರ ಕಾಯ್ದುಕೊಳ್ಳಬೇಕು. ಮನೆಯಲ್ಲಿಯೇ ಇದ್ದು ಲಾಕ್ಡೌನ್ ಯಶಸ್ಸಿಗೆ ಸಹಕರಿಸಬೇಕು’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.</p>.<p>ಇಲ್ಲಿ ಭಾನುವಾರ ನಡೆದ ತಾಲ್ಲೂಕು ಕಾರ್ಯಪಡೆಯ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ನೆರೆಯ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಆದ್ದರಿಂದ ಅಧಿಕಾರಿಗಳು ಜನರಲ್ಲಿ ಜಾಗೃತಿ ಮೂಡಿಸಬೇಕು. ವೈರಸ್ ಹರಡುವಿಕೆಯ ನಿಯಂತ್ರಣ ಕುರಿತಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಸೂಚಿಸಿದರು.</p>.<p>‘ಕೊರೊನಾ ವೈರಸ್ ವ್ಯಾಪಕವಾಗಿ ಹರಡದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಲಾಕ್ಡೌನ್ ಘೋಷಿಸಿದೆ. ಅಲ್ಲದೇ ಚಿಕಿತ್ಸೆಗೆ ಬೇಕಾಗುವ ಸವಲತ್ತು ಮತ್ತು ಹಣಕಾಸಿನ ನೆರವು ನೀಡುತ್ತಿವೆ. ಈ ವೈರಾಣು ಹರಡದಂತೆ ಸುರಕ್ಷಾ ಕ್ರಮಗಳನ್ನು ಅನುಸರಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಜನರು ಮನೆಯಿಂದ ಹೊರಗೆ ಬಾರದಂತೆ ತಿಳಿವಳಿಕೆ ನೀಡಿ, ಅವರಿಗೆ ಬೇಕಾಗುವ ಅಗತ್ಯ ವಸ್ತುಗಳ ಪೂರೈಕೆಗೆ ವ್ಯವಸ್ಥೆ ಮಾಡಬೇಕು’ ಎಂದು ತಿಳಿಸಿದರು.</p>.<p>‘ಅಥಣಿ ತಾಲ್ಲೂಕಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗದೇ ಇರುವುದು ಸಮಾಧಾನಕರ ಸಂಗತಿ. ಆದರೆ, ಮೈಮರೆಯಬಾರದು’ ಎಂದು ಎಚ್ಚರಿಸಿದರು.</p>.<p>ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದವರಿಂದ ಜಿಲ್ಲೆಯಲ್ಲಿ ಕೊರೊನಾ ಹೆಚ್ಚು ಹರಡಲು ಕಾರಣವಾಯಿತು. ಇನ್ನೂ ಹೆಚ್ಚಿನ ತೊಂದರೆಯಾಗದಂತೆ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್, ವಿವಿಧ ಮಂತ್ರಿಗಳು, ಶಾಸಕರು, ಅಧಿಕಾರಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ’ ಎಂದರು.</p>.<p>‘ಬೇಸಿಗೆ ಬಂದಿರುವುದರಿಂದ ಜನರಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದರು.</p>.<p>ಶಾಸಕ ಮಹೇಶ ಕುಮಠಳ್ಳಿ, ‘ಶತಮಾನ ಕಂಡರಿಯದ ಸಮಸ್ಯೆಗೆ ಸಿಲುಕಿದ್ದೇವೆ. ಇಂತಹ ಸಂದರ್ಭದಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ. ಶಾಸಕರು ಕ್ಷೇತ್ರದಲ್ಲಿ ಇಲ್ಲ ಎಂದು ಕೆಲವರು ಆರೋಪ ಮಾಡುತ್ತಿದ್ದಾರೆ. ಆದರೆ ನಾನು ಎಲ್ಲ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು ಸಲಹೆ-ಸೂಚನೆಗಳು ಕೊಡುತ್ತಿದ್ದೇನೆ. ಶಾಸಕನಾಗಿ ನಾನೇ ಜನರನ್ನು ಗುಂಪುಗೂಡಿಸಿಕೊಂಡು ತಿರುಗಾಡಿ ಪ್ರಚಾರ ಗಿಟ್ಟಿಸಿಕೊಳ್ಳಲು ಮನಸ್ಸಿಲ್ಲ. ಹೀಗಾಗಿ, ಕ್ಷೇತ್ರದಲ್ಲಿ ಓಡಾಡುತ್ತಿಲ್ಲ. ಆದರೆ, ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಂಡಿದ್ದೇನೆ’ ಎಂದು ತಿಳಿಸಿದರು.</p>.<p>ಗ್ರೇಡ್–2 ತಹಶೀಲ್ದಾರ್ ರಾಜಕುಮಾರ ಬುರ್ಲಿ, ಇಒ ರವಿ ಬಂಗಾರಪ್ಪನವರ, ಡಿಎಸ್ಪಿ ಎಸ್.ವಿ. ಗಿರೀಶ್, ಸಿಪಿಐ ಶಂಕರಗೌಡ ಬಸನಗೌಡ, ಸಮಾಜ ಕಲ್ಯಾಣ ಅಧಿಕಾರಿ ಬಿ.ಎಸ್. ಯಾದವಾಡ, ಉಪತಹಶೀಲ್ದಾರ್ ಎಂ.ವಿ. ಬಿರಾದಾರ ಪಾಟೀಲ ಸಭೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಥಣಿ:</strong> ‘ತಾಲ್ಲೂಕಿನಲ್ಲಿ ಈವರೆಗೆ ಕೋವಿಡ್-19 ಪ್ರಕರಣ ಕಾಣಿಸಿಕೊಂಡಿಲ್ಲ. ಹಾಗೆಂದು ಉದಾಸೀನ ಮಾಡಬಾರದು. ಜಿಲ್ಲೆ ಮತ್ತು ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ದಿನೇ ದಿನೇ ಅಧಿಕವಾಗುತ್ತಿದ್ದು ಎಚ್ಚರಿಕೆಯಿಂದ ಇರಬೇಕು. ಅಂತರ ಕಾಯ್ದುಕೊಳ್ಳಬೇಕು. ಮನೆಯಲ್ಲಿಯೇ ಇದ್ದು ಲಾಕ್ಡೌನ್ ಯಶಸ್ಸಿಗೆ ಸಹಕರಿಸಬೇಕು’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.</p>.<p>ಇಲ್ಲಿ ಭಾನುವಾರ ನಡೆದ ತಾಲ್ಲೂಕು ಕಾರ್ಯಪಡೆಯ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ನೆರೆಯ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಆದ್ದರಿಂದ ಅಧಿಕಾರಿಗಳು ಜನರಲ್ಲಿ ಜಾಗೃತಿ ಮೂಡಿಸಬೇಕು. ವೈರಸ್ ಹರಡುವಿಕೆಯ ನಿಯಂತ್ರಣ ಕುರಿತಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಸೂಚಿಸಿದರು.</p>.<p>‘ಕೊರೊನಾ ವೈರಸ್ ವ್ಯಾಪಕವಾಗಿ ಹರಡದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಲಾಕ್ಡೌನ್ ಘೋಷಿಸಿದೆ. ಅಲ್ಲದೇ ಚಿಕಿತ್ಸೆಗೆ ಬೇಕಾಗುವ ಸವಲತ್ತು ಮತ್ತು ಹಣಕಾಸಿನ ನೆರವು ನೀಡುತ್ತಿವೆ. ಈ ವೈರಾಣು ಹರಡದಂತೆ ಸುರಕ್ಷಾ ಕ್ರಮಗಳನ್ನು ಅನುಸರಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಜನರು ಮನೆಯಿಂದ ಹೊರಗೆ ಬಾರದಂತೆ ತಿಳಿವಳಿಕೆ ನೀಡಿ, ಅವರಿಗೆ ಬೇಕಾಗುವ ಅಗತ್ಯ ವಸ್ತುಗಳ ಪೂರೈಕೆಗೆ ವ್ಯವಸ್ಥೆ ಮಾಡಬೇಕು’ ಎಂದು ತಿಳಿಸಿದರು.</p>.<p>‘ಅಥಣಿ ತಾಲ್ಲೂಕಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗದೇ ಇರುವುದು ಸಮಾಧಾನಕರ ಸಂಗತಿ. ಆದರೆ, ಮೈಮರೆಯಬಾರದು’ ಎಂದು ಎಚ್ಚರಿಸಿದರು.</p>.<p>ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದವರಿಂದ ಜಿಲ್ಲೆಯಲ್ಲಿ ಕೊರೊನಾ ಹೆಚ್ಚು ಹರಡಲು ಕಾರಣವಾಯಿತು. ಇನ್ನೂ ಹೆಚ್ಚಿನ ತೊಂದರೆಯಾಗದಂತೆ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್, ವಿವಿಧ ಮಂತ್ರಿಗಳು, ಶಾಸಕರು, ಅಧಿಕಾರಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ’ ಎಂದರು.</p>.<p>‘ಬೇಸಿಗೆ ಬಂದಿರುವುದರಿಂದ ಜನರಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದರು.</p>.<p>ಶಾಸಕ ಮಹೇಶ ಕುಮಠಳ್ಳಿ, ‘ಶತಮಾನ ಕಂಡರಿಯದ ಸಮಸ್ಯೆಗೆ ಸಿಲುಕಿದ್ದೇವೆ. ಇಂತಹ ಸಂದರ್ಭದಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ. ಶಾಸಕರು ಕ್ಷೇತ್ರದಲ್ಲಿ ಇಲ್ಲ ಎಂದು ಕೆಲವರು ಆರೋಪ ಮಾಡುತ್ತಿದ್ದಾರೆ. ಆದರೆ ನಾನು ಎಲ್ಲ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು ಸಲಹೆ-ಸೂಚನೆಗಳು ಕೊಡುತ್ತಿದ್ದೇನೆ. ಶಾಸಕನಾಗಿ ನಾನೇ ಜನರನ್ನು ಗುಂಪುಗೂಡಿಸಿಕೊಂಡು ತಿರುಗಾಡಿ ಪ್ರಚಾರ ಗಿಟ್ಟಿಸಿಕೊಳ್ಳಲು ಮನಸ್ಸಿಲ್ಲ. ಹೀಗಾಗಿ, ಕ್ಷೇತ್ರದಲ್ಲಿ ಓಡಾಡುತ್ತಿಲ್ಲ. ಆದರೆ, ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಂಡಿದ್ದೇನೆ’ ಎಂದು ತಿಳಿಸಿದರು.</p>.<p>ಗ್ರೇಡ್–2 ತಹಶೀಲ್ದಾರ್ ರಾಜಕುಮಾರ ಬುರ್ಲಿ, ಇಒ ರವಿ ಬಂಗಾರಪ್ಪನವರ, ಡಿಎಸ್ಪಿ ಎಸ್.ವಿ. ಗಿರೀಶ್, ಸಿಪಿಐ ಶಂಕರಗೌಡ ಬಸನಗೌಡ, ಸಮಾಜ ಕಲ್ಯಾಣ ಅಧಿಕಾರಿ ಬಿ.ಎಸ್. ಯಾದವಾಡ, ಉಪತಹಶೀಲ್ದಾರ್ ಎಂ.ವಿ. ಬಿರಾದಾರ ಪಾಟೀಲ ಸಭೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>