<p><strong>ಬೆಂಗಳೂರು</strong>: 'ಇಂದಿರಾ ಕ್ಯಾಂಟೀನ್ನನ್ನು ಮುಚ್ಚಲು ವ್ಯವಸ್ಥಿತವಾಗಿ ಪ್ರಯತ್ನ ನಡೆಯುತ್ತಿರುವಂತೆ ಕಾಣುತ್ತಿದೆ’ ಎಂದು ಆರೋಪಿಸಿರುವ ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ‘ಯಾವುದಕ್ಕೇ ಕಾರಣಕ್ಕೂ ಮುಚ್ಚಬಾರದು’ ಎಂದು ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.</p>.<p>‘ಇಂದಿರಾ ಕ್ಯಾಂಟೀನ್ಗಳಿಗೆ ಬಿಡುಗಡೆ ಮಾಡಬೇಕಾದ ಹಣವನ್ನು ನಿಗದಿತವಾಗಿ ಬಿಡುಗಡೆ ಮಾಡದೆ ಸತಾಯಿಸಲಾಗುತ್ತಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಕ್ಯಾಂಟೀನ್ಗಳಿಗೆ ಸುಮಾರು ₹ 28 ಕೋಟಿ ಬಿಡಗಡೆ ಮಾಡದೆ, ಸುಮಾರು ಆರು ತಿಂಗಳುಗಳಿಂದ ಬಾಕಿ ಉಳಿಸಿಕೊಳ್ಳಲಾಗಿದೆ. 198 ಕ್ಯಾಂಟೀನ್ಗಳಿಗೆ ನೀರಿನ ಸಂಪರ್ಕ ಮತ್ತು ಒಳಚರಂಡಿ ವ್ಯವಸ್ಥೆಯನ್ನು ಕೂಡಾ ಬಿಡಬ್ಲ್ಯೂಎಸ್ಎಸ್ಬಿ ಕಡಿತಗೊಳಿಸಿದೆ. ಅಲ್ಲದೆ, 12 ಅಡುಗೆ ಮನೆಗಳಿಗೂ ನೀರಿನ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿದೆ’ ಎಂದು ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ.</p>.<p>‘ಇಂದಿರಾ ಕ್ಯಾಂಟೀನ್ನ ಹೆಸರು ಬದಲಿಸಿ ರಾಜಕಾರಣ ಮಾಡಲು ಕೂಡಾ ಈ ಹಿಂದೆ ಪ್ರಯತ್ನ ನಡೆದಿತ್ತು’ ಎಂದೂ ಅವರು ದೂರಿದ್ದಾರೆ.</p>.<p>‘ಕೋವಿಡ್ ಸಂಕಷ್ಟದ ಸಮಯದಲ್ಲಿ ದುಡಿಮೆ ಇಲ್ಲದೆ ಪರಿತಪಿಸುತ್ತಿರುವ ಜನರಿಗೆ ಇಂದಿರಾ ಕ್ಯಾಂಟೀನ್ ಮೂಲಕ ಉಚಿತ ಆಹಾರ ನೀಡಬೇಕೆಂದು ಈ ಹಿಂದೆ ಒತ್ತಾಯಿಸಿದ್ದೆ. ಇದಕ್ಕೆ ಹೆಚ್ಚೆಂದರೆ ₹ 200 ಕೋಟಿಯಿಂದ ₹ 250 ಕೋಟಿ ಖರ್ಚು ಬರಬಹುದು. ಹಸಿದವರ ಹೊಟ್ಟೆ ತುಂಬಿಸಲು ಸರ್ಕಾರ ಇಷ್ಟನ್ನೂ ಮಾಡದೆ ಮೀನಮೇಷ ಎನಿಸುತ್ತಿದೆ’ ಎಂದೂ ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: 'ಇಂದಿರಾ ಕ್ಯಾಂಟೀನ್ನನ್ನು ಮುಚ್ಚಲು ವ್ಯವಸ್ಥಿತವಾಗಿ ಪ್ರಯತ್ನ ನಡೆಯುತ್ತಿರುವಂತೆ ಕಾಣುತ್ತಿದೆ’ ಎಂದು ಆರೋಪಿಸಿರುವ ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ‘ಯಾವುದಕ್ಕೇ ಕಾರಣಕ್ಕೂ ಮುಚ್ಚಬಾರದು’ ಎಂದು ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.</p>.<p>‘ಇಂದಿರಾ ಕ್ಯಾಂಟೀನ್ಗಳಿಗೆ ಬಿಡುಗಡೆ ಮಾಡಬೇಕಾದ ಹಣವನ್ನು ನಿಗದಿತವಾಗಿ ಬಿಡುಗಡೆ ಮಾಡದೆ ಸತಾಯಿಸಲಾಗುತ್ತಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಕ್ಯಾಂಟೀನ್ಗಳಿಗೆ ಸುಮಾರು ₹ 28 ಕೋಟಿ ಬಿಡಗಡೆ ಮಾಡದೆ, ಸುಮಾರು ಆರು ತಿಂಗಳುಗಳಿಂದ ಬಾಕಿ ಉಳಿಸಿಕೊಳ್ಳಲಾಗಿದೆ. 198 ಕ್ಯಾಂಟೀನ್ಗಳಿಗೆ ನೀರಿನ ಸಂಪರ್ಕ ಮತ್ತು ಒಳಚರಂಡಿ ವ್ಯವಸ್ಥೆಯನ್ನು ಕೂಡಾ ಬಿಡಬ್ಲ್ಯೂಎಸ್ಎಸ್ಬಿ ಕಡಿತಗೊಳಿಸಿದೆ. ಅಲ್ಲದೆ, 12 ಅಡುಗೆ ಮನೆಗಳಿಗೂ ನೀರಿನ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿದೆ’ ಎಂದು ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ.</p>.<p>‘ಇಂದಿರಾ ಕ್ಯಾಂಟೀನ್ನ ಹೆಸರು ಬದಲಿಸಿ ರಾಜಕಾರಣ ಮಾಡಲು ಕೂಡಾ ಈ ಹಿಂದೆ ಪ್ರಯತ್ನ ನಡೆದಿತ್ತು’ ಎಂದೂ ಅವರು ದೂರಿದ್ದಾರೆ.</p>.<p>‘ಕೋವಿಡ್ ಸಂಕಷ್ಟದ ಸಮಯದಲ್ಲಿ ದುಡಿಮೆ ಇಲ್ಲದೆ ಪರಿತಪಿಸುತ್ತಿರುವ ಜನರಿಗೆ ಇಂದಿರಾ ಕ್ಯಾಂಟೀನ್ ಮೂಲಕ ಉಚಿತ ಆಹಾರ ನೀಡಬೇಕೆಂದು ಈ ಹಿಂದೆ ಒತ್ತಾಯಿಸಿದ್ದೆ. ಇದಕ್ಕೆ ಹೆಚ್ಚೆಂದರೆ ₹ 200 ಕೋಟಿಯಿಂದ ₹ 250 ಕೋಟಿ ಖರ್ಚು ಬರಬಹುದು. ಹಸಿದವರ ಹೊಟ್ಟೆ ತುಂಬಿಸಲು ಸರ್ಕಾರ ಇಷ್ಟನ್ನೂ ಮಾಡದೆ ಮೀನಮೇಷ ಎನಿಸುತ್ತಿದೆ’ ಎಂದೂ ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>