<p><strong>ಬೆಂಗಳೂರು</strong>: ದುಪ್ಪಟ್ಟು ಕಮಿಷನ್ಗೆ ಕಾರಣವಾದ ಆ ಫಾರ್ಮುಲಾ ಯಾವುದು ಸಿದ್ದರಾಮಯ್ಯನವರೇ? ಎಂದು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಪ್ರಶ್ನಿಸಿದ್ದಾರೆ.</p><p>ಗುತ್ತಿಗೆಯಲ್ಲಿ ಕಮಿಷನ್ ಬಗ್ಗೆ ರಾಜ್ಯ ಗುತ್ತಿಗೆದಾರರ ಸಂಘ ಸಿಎಂಗೆ ಪತ್ರ ಬರೆದಿರುವ ಸುದ್ದಿ ತುಣಕು ಹಂಚಿಕೊಂಡು ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.</p><p>ರಾಜ್ಯದಲ್ಲಿ ಈ ಹಿಂದೆ ಇರುವ ಎಲ್ಲ ಸರ್ಕಾರಕ್ಕಿಂತ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ದುಪ್ಪಟ್ಟು ಕಮಿಷನ್ ಪಡೆಯುತ್ತಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘ ಖುದ್ದು ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದೆ. ಜೇಷ್ಠತೆ ಮತ್ತು ಪಾರದರ್ಶಕತೆಯನ್ನು ಮೀರಿ ಸ್ಪೆಷಲ್ ಫಾರ್ಮುಲಾ ಮೂಲಕ ಶೇ.15-20 ರಷ್ಟು ಎಲ್ ಓಸಿ ಬಿಡುಗಡೆಯಾಗುತ್ತಿದೆ ಎಂದು ಸಂಘ ಆರೋಪಿಸಿದೆ. ಹಾಗಾದರೆ ಎಲ್ಲದಕ್ಕಿಂತ ಹೆಚ್ಚಾಗಿ ನಿಮ್ಮ ಆಪ್ತ ಸಚಿವರ ಖಾತೆಯಲ್ಲೇ ಈ ರೀತಿ ವ್ಯವಸ್ಥೆ ಇದೆ ಎಂದು ಸಂಘ ಆರೋಪಿಸಿದೆ. ಹಾಗಾದರೆ ಈ ಸ್ಪೆಷಲ್ ಫಾರ್ಮುಲಾ ವ್ಯವಸ್ಥೆ ಇರುವುದು ನಿಮ್ಮ ಗಮನಕ್ಕೂ ಇದೆ ಎಂದೇ ಅರ್ಥವಲ್ಲವೇ ? ಗೊತ್ತಿದ್ದು ಸುಮ್ಮನಿರುವುದು ಎಂದರೆ ಅರ್ಥವೇನು ಸ್ವಾಮಿ? ಎಂದು ಪ್ರಶ್ನಿಸಿದ್ದಾರೆ.</p><p>ಮಠದೊಳಗಿನ ಬೆಕ್ಕು ಇಲಿಯ ಕಂಡೊಡನೆ ಪುಟ ನೆಗೆದಂತೆ ಕಾಣ ಎಂಬಂತಾಗಿದೆಯೇ ನಿಮ್ಮ ಸ್ಥಿತಿ ? ನಿಮ್ಮದೀಗ 50- 50 ಅವಧಿಯ ಶೇ 80 ಕಮಿಷನ್ ಸರ್ಕಾರ ಬಿಡಿ ಎಂದು ವ್ಯಂಗ್ಯವಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ದುಪ್ಪಟ್ಟು ಕಮಿಷನ್ಗೆ ಕಾರಣವಾದ ಆ ಫಾರ್ಮುಲಾ ಯಾವುದು ಸಿದ್ದರಾಮಯ್ಯನವರೇ? ಎಂದು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಪ್ರಶ್ನಿಸಿದ್ದಾರೆ.</p><p>ಗುತ್ತಿಗೆಯಲ್ಲಿ ಕಮಿಷನ್ ಬಗ್ಗೆ ರಾಜ್ಯ ಗುತ್ತಿಗೆದಾರರ ಸಂಘ ಸಿಎಂಗೆ ಪತ್ರ ಬರೆದಿರುವ ಸುದ್ದಿ ತುಣಕು ಹಂಚಿಕೊಂಡು ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.</p><p>ರಾಜ್ಯದಲ್ಲಿ ಈ ಹಿಂದೆ ಇರುವ ಎಲ್ಲ ಸರ್ಕಾರಕ್ಕಿಂತ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ದುಪ್ಪಟ್ಟು ಕಮಿಷನ್ ಪಡೆಯುತ್ತಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘ ಖುದ್ದು ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದೆ. ಜೇಷ್ಠತೆ ಮತ್ತು ಪಾರದರ್ಶಕತೆಯನ್ನು ಮೀರಿ ಸ್ಪೆಷಲ್ ಫಾರ್ಮುಲಾ ಮೂಲಕ ಶೇ.15-20 ರಷ್ಟು ಎಲ್ ಓಸಿ ಬಿಡುಗಡೆಯಾಗುತ್ತಿದೆ ಎಂದು ಸಂಘ ಆರೋಪಿಸಿದೆ. ಹಾಗಾದರೆ ಎಲ್ಲದಕ್ಕಿಂತ ಹೆಚ್ಚಾಗಿ ನಿಮ್ಮ ಆಪ್ತ ಸಚಿವರ ಖಾತೆಯಲ್ಲೇ ಈ ರೀತಿ ವ್ಯವಸ್ಥೆ ಇದೆ ಎಂದು ಸಂಘ ಆರೋಪಿಸಿದೆ. ಹಾಗಾದರೆ ಈ ಸ್ಪೆಷಲ್ ಫಾರ್ಮುಲಾ ವ್ಯವಸ್ಥೆ ಇರುವುದು ನಿಮ್ಮ ಗಮನಕ್ಕೂ ಇದೆ ಎಂದೇ ಅರ್ಥವಲ್ಲವೇ ? ಗೊತ್ತಿದ್ದು ಸುಮ್ಮನಿರುವುದು ಎಂದರೆ ಅರ್ಥವೇನು ಸ್ವಾಮಿ? ಎಂದು ಪ್ರಶ್ನಿಸಿದ್ದಾರೆ.</p><p>ಮಠದೊಳಗಿನ ಬೆಕ್ಕು ಇಲಿಯ ಕಂಡೊಡನೆ ಪುಟ ನೆಗೆದಂತೆ ಕಾಣ ಎಂಬಂತಾಗಿದೆಯೇ ನಿಮ್ಮ ಸ್ಥಿತಿ ? ನಿಮ್ಮದೀಗ 50- 50 ಅವಧಿಯ ಶೇ 80 ಕಮಿಷನ್ ಸರ್ಕಾರ ಬಿಡಿ ಎಂದು ವ್ಯಂಗ್ಯವಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>