<p>ಹೊಸಪೇಟೆ: ‘ದೊಡ್ಡ ಖಾತೆ ಕೊಟ್ಟು, ಅದನ್ನು ಮರಳಿ ಪಡೆದು ಸಣ್ಣ ಖಾತೆ ಕೊಟ್ಟರೆ ನನ್ನ ಕಾರ್ಯವೈಖರಿ ಬಗ್ಗೆ ಅನುಮಾನ ಮೂಡುತ್ತದೆ. ಅದಕ್ಕೆ ನಾನು ಉತ್ತರಿಸುತ್ತ ಓಡಾಡಬೇಕಾಗುತ್ತದೆ’ ಎಂದು ಸಚಿವ ಆನಂದ್ ಸಿಂಗ್ ಅವರು ಖಾತೆ ಬದಲಿಸಿರುವುದಕ್ಕೆ<br />ಪ್ರತಿಕ್ರಿಯಿಸಿದರು.</p>.<p>ನಗರದ ಸರ್ಕಾರಿ ಆಸ್ಪತ್ರೆ ಯಲ್ಲಿ ಸೋಮವಾರ ಕಟ್ಟಡ ಕಾಮಗಾರಿ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮೊದಲಿನಿಂದಲೂ ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ನನ್ನನ್ನು ಶಾಸಕನಾಗಿಯೇ ಇರಲು ಬಿಡಬೇಕು’ ಎಂದು ಹೇಳಿದರು.</p>.<p>‘ಸದ್ಯ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿ ದಂತೆ ಕ್ಷೇತ್ರದಲ್ಲಿಯೇ ಇರುವೆ. ಮುಖ್ಯಮಂತ್ರಿಗಳು ಕೈಗೊಂಡಿರುವ ನಿರ್ಧಾರ ಪಾಲಿಸುತ್ತೇನೆ. ನಾಡಿದ್ದು ಬೆಂಗಳೂರಿಗೆ ತೆರಳಿ ಭೇಟಿ ಮಾಡುವೆ. ಮುಖ್ಯಮಂತ್ರಿಯವರಿಗೆ ಕೆಲ ತಾಂತ್ರಿಕ ಒತ್ತಡಗಳು ಇಬಹುದು. ನನ್ನ ಹಲವು ಬೇಡಿಕೆಗಳನ್ನು ಈಡೇರಿಸಿದ್ದಾರೆ’ ಎಂದರು.</p>.<p>ವಿಜಯನಗರ ಜಿಲ್ಲೆ ಘೋಷಣೆಗೂ ಖಾತೆ ಬದಲಾವಣೆಗೂ ಯಾವುದೇ ಸಂಬಂಧವಿಲ್ಲ. ಆಕ್ಷೇಪಣೆ ಸ್ವೀಕರಿಸ ಲಾಗಿದೆ. ಎಲ್ಲ ಪ್ರಕ್ರಿಯೆ ಮುಗಿದ ನಂತರ ಅಂತಿಮ ಅಧಿಸೂಚನೆ ಹೊರಬೀಳಬಹುದು ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸಪೇಟೆ: ‘ದೊಡ್ಡ ಖಾತೆ ಕೊಟ್ಟು, ಅದನ್ನು ಮರಳಿ ಪಡೆದು ಸಣ್ಣ ಖಾತೆ ಕೊಟ್ಟರೆ ನನ್ನ ಕಾರ್ಯವೈಖರಿ ಬಗ್ಗೆ ಅನುಮಾನ ಮೂಡುತ್ತದೆ. ಅದಕ್ಕೆ ನಾನು ಉತ್ತರಿಸುತ್ತ ಓಡಾಡಬೇಕಾಗುತ್ತದೆ’ ಎಂದು ಸಚಿವ ಆನಂದ್ ಸಿಂಗ್ ಅವರು ಖಾತೆ ಬದಲಿಸಿರುವುದಕ್ಕೆ<br />ಪ್ರತಿಕ್ರಿಯಿಸಿದರು.</p>.<p>ನಗರದ ಸರ್ಕಾರಿ ಆಸ್ಪತ್ರೆ ಯಲ್ಲಿ ಸೋಮವಾರ ಕಟ್ಟಡ ಕಾಮಗಾರಿ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮೊದಲಿನಿಂದಲೂ ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ನನ್ನನ್ನು ಶಾಸಕನಾಗಿಯೇ ಇರಲು ಬಿಡಬೇಕು’ ಎಂದು ಹೇಳಿದರು.</p>.<p>‘ಸದ್ಯ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿ ದಂತೆ ಕ್ಷೇತ್ರದಲ್ಲಿಯೇ ಇರುವೆ. ಮುಖ್ಯಮಂತ್ರಿಗಳು ಕೈಗೊಂಡಿರುವ ನಿರ್ಧಾರ ಪಾಲಿಸುತ್ತೇನೆ. ನಾಡಿದ್ದು ಬೆಂಗಳೂರಿಗೆ ತೆರಳಿ ಭೇಟಿ ಮಾಡುವೆ. ಮುಖ್ಯಮಂತ್ರಿಯವರಿಗೆ ಕೆಲ ತಾಂತ್ರಿಕ ಒತ್ತಡಗಳು ಇಬಹುದು. ನನ್ನ ಹಲವು ಬೇಡಿಕೆಗಳನ್ನು ಈಡೇರಿಸಿದ್ದಾರೆ’ ಎಂದರು.</p>.<p>ವಿಜಯನಗರ ಜಿಲ್ಲೆ ಘೋಷಣೆಗೂ ಖಾತೆ ಬದಲಾವಣೆಗೂ ಯಾವುದೇ ಸಂಬಂಧವಿಲ್ಲ. ಆಕ್ಷೇಪಣೆ ಸ್ವೀಕರಿಸ ಲಾಗಿದೆ. ಎಲ್ಲ ಪ್ರಕ್ರಿಯೆ ಮುಗಿದ ನಂತರ ಅಂತಿಮ ಅಧಿಸೂಚನೆ ಹೊರಬೀಳಬಹುದು ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>