"ಚೈತ್ರಾಗೆ ಆಕೆಯ ಗಂಡ, ಅತ್ತೆ ಮತ್ತು ನಾದಿನಿ ವರದಕ್ಷಿಣೆ ಕಿರುಕುಳ ನೀಡಿದ್ದಾರೆ. ಪತಿ ನಿಂದಿಸಿ, ಹಲ್ಲೆ ನಡೆಸಿದ್ದಾರೆ. ಬಲವಂತದಿಂದ ಮನೆಯಿಂದ ಹೊರದಬ್ಬಿದ್ದರು. ಹಿತೈಷಿಗಳ ಸಲಹೆ ಮೇರೆಗೆ ಪುನಃ ಮನೆಗೆ ಕರೆದುಕೊಂಡಿದ್ದರು. 2024ರ ಫೆಬ್ರುವರಿ 25ರಂದು ಚೈತ್ರಾ ತನ್ನ ಅಜ್ಜಿಗೆ ಕರೆ ಮಾಡಿ ಆರೋಪಿಗಳಿಂದ ಆಗುತ್ತಿರುವ ಕಿರುಕುಳದ ಬಗ್ಗೆ ಮಾಹಿತಿ ನೀಡಿದ್ದರು ಮತ್ತು ಅದೇ ದಿನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ" ಎಂದು ದೂರಿನಲ್ಲಿ ವಿವರಿಸಲಾಗಿತ್ತು.