<p><strong>ಬೆಂಗಳೂರು:</strong> ವಿಧಾನಸೌಧದ ಆವರಣದಲ್ಲಿ ನಿಗದಿಪಡಿಸಿದ ಸ್ಥಳದಲ್ಲಿ ಮಾತ್ರ ಸಂದರ್ಶನ ಮಾಡುವಂತೆ ಮಾಧ್ಯಮದವರಿಗೆ ನಿರ್ದೇಶನ ನೀಡುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು (DPAR) ವಾರ್ತಾ ಇಲಾಖೆಗೆ ಪತ್ರ ಬರೆದಿದೆ. </p>.<h2>ಪತ್ರದಲ್ಲಿ ಏನಿದೆ?</h2><p>ವಾರ್ತಾ ಮತ್ತು ಪ್ರಚಾರ ಇಲಾಖೆಯು ಶಿಫಾರಸ್ಸು ಮಾಡುವ ಮಾಧ್ಯಮ ಪ್ರತಿನಿಧಿಗಳಿಗೆ ಮಾತ್ರ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಕಾರ್ಯಕಾರಿ)ಯಲ್ಲಿ ಗುರುತಿನ ಚೀಟಿ ವಿತರಿಸಲಾಗುತ್ತಿದೆ, ಈ ರೀತಿ ಗುರುತಿನ ಚೀಟಿ ಹೊಂದಿರುವ ಎಲ್ಲಾ ಪತ್ರಿಕಾ ಮಾಧಮ ಪ್ರತಿನಿಧಿಗಳಿಗೆ ಭದ್ರತಾ ಹಿತದೃಷ್ಟಿಯಿಂದ ವಿಧಾನಸೌಧ ಪಶ್ಚಿಮ ದ್ವಾರದ ಪೋರ್ಟಿಕೋ ಬಳಿ ನಿಗದಿಪಡಿಸಲಾಗಿರುವ ಸ್ಥಳದಲ್ಲಿ ಮಾತ್ರ ಹೇಳಿಕೆಗಳನ್ನು ಪಡೆದುಕೊಳ್ಳುವಂತೆ ಎಂದು ಸೂಚಿಸಲಾಗಿದೆ.</p>.<p>ವಿಧಾನಸೌಧ ಒಳ ಪ್ರವೇಶಿಸುವ ಸಂದರ್ಭದಲ್ಲಿ ಮುಖ್ಯಮಂತ್ರಿ, ಸಚಿವರು ಅಥವಾ ಗಣ್ಯ ವ್ಯಕ್ತಿಗಳಿಂದ ಬೈಟ್ ಪಡೆಯಲು ಅವರನ್ನು ಹಿಂಬಾಲಿಸದಂತೆ ಸೂಕ್ತ ಸಲಹೆ/ಸೂಚನೆಗಳನ್ನು ನೀಡುವಂತೆಯೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ.</p>.ವಿಧಾನಸೌಧ: ಸಚಿವರ ಕಚೇರಿಯಲ್ಲಿ ಚಿನ್ನಾಭರಣ ಕಳವು; ನೌಕರನ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಿಧಾನಸೌಧದ ಆವರಣದಲ್ಲಿ ನಿಗದಿಪಡಿಸಿದ ಸ್ಥಳದಲ್ಲಿ ಮಾತ್ರ ಸಂದರ್ಶನ ಮಾಡುವಂತೆ ಮಾಧ್ಯಮದವರಿಗೆ ನಿರ್ದೇಶನ ನೀಡುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು (DPAR) ವಾರ್ತಾ ಇಲಾಖೆಗೆ ಪತ್ರ ಬರೆದಿದೆ. </p>.<h2>ಪತ್ರದಲ್ಲಿ ಏನಿದೆ?</h2><p>ವಾರ್ತಾ ಮತ್ತು ಪ್ರಚಾರ ಇಲಾಖೆಯು ಶಿಫಾರಸ್ಸು ಮಾಡುವ ಮಾಧ್ಯಮ ಪ್ರತಿನಿಧಿಗಳಿಗೆ ಮಾತ್ರ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಕಾರ್ಯಕಾರಿ)ಯಲ್ಲಿ ಗುರುತಿನ ಚೀಟಿ ವಿತರಿಸಲಾಗುತ್ತಿದೆ, ಈ ರೀತಿ ಗುರುತಿನ ಚೀಟಿ ಹೊಂದಿರುವ ಎಲ್ಲಾ ಪತ್ರಿಕಾ ಮಾಧಮ ಪ್ರತಿನಿಧಿಗಳಿಗೆ ಭದ್ರತಾ ಹಿತದೃಷ್ಟಿಯಿಂದ ವಿಧಾನಸೌಧ ಪಶ್ಚಿಮ ದ್ವಾರದ ಪೋರ್ಟಿಕೋ ಬಳಿ ನಿಗದಿಪಡಿಸಲಾಗಿರುವ ಸ್ಥಳದಲ್ಲಿ ಮಾತ್ರ ಹೇಳಿಕೆಗಳನ್ನು ಪಡೆದುಕೊಳ್ಳುವಂತೆ ಎಂದು ಸೂಚಿಸಲಾಗಿದೆ.</p>.<p>ವಿಧಾನಸೌಧ ಒಳ ಪ್ರವೇಶಿಸುವ ಸಂದರ್ಭದಲ್ಲಿ ಮುಖ್ಯಮಂತ್ರಿ, ಸಚಿವರು ಅಥವಾ ಗಣ್ಯ ವ್ಯಕ್ತಿಗಳಿಂದ ಬೈಟ್ ಪಡೆಯಲು ಅವರನ್ನು ಹಿಂಬಾಲಿಸದಂತೆ ಸೂಕ್ತ ಸಲಹೆ/ಸೂಚನೆಗಳನ್ನು ನೀಡುವಂತೆಯೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ.</p>.ವಿಧಾನಸೌಧ: ಸಚಿವರ ಕಚೇರಿಯಲ್ಲಿ ಚಿನ್ನಾಭರಣ ಕಳವು; ನೌಕರನ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>