<p><strong>ಉಜಿರೆ:</strong> ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಆನ್ಲೈನ್ ಶಿಕ್ಷಣಕ್ಕೆ ನೆರವು ನೀಡಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ‘ಜ್ಞಾನತಾಣ’ ಕಾರ್ಯಕ್ರಮ ರೂಪಿಸಿದ್ದು, ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ಸೋಮವಾರ ಚಾಲನೆ ನೀಡಿದರು.</p>.<p>‘ಈ ಯೋಜನೆಗೆ ₹ 81 ಕೋಟಿ ವಿನಿಯೋಗಿಸಲಾಗುವುದು. 1 ಲಕ್ಷ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಲಿದ್ದಾರೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 20 ಸಾವಿರ ಟ್ಯಾಬ್ಗಳು ಹಾಗೂ 10 ಸಾವಿರ ಲ್ಯಾಪ್ಟಾಪ್ಗಳನ್ನು ವಿತರಿಸುವ ಗುರಿ ಹೊಂದಿದ್ದೇವೆ’ ಎಂದರು.</p>.<p>5ನೇ ತರಗತಿಯಿಂದ 10ನೇ ತರಗತಿ ವರೆಗೆ ಇಂಗ್ಲಿಷ್, ವಿಜ್ಞಾನ ಮತ್ತು ಗಣಿತದ ಪಠ್ಯವನ್ನು ಟ್ಯಾಬ್ ಮತ್ತು ಲ್ಯಾಪ್ ಟಾಪ್ನಲ್ಲಿ ಅಳವಡಿಸಿ (ಪ್ರಿಲೋಡೆಡ್) ವಿದ್ಯಾರ್ಥಿಗಳಿಗೆ ನೀಡಲಾಗುವುದು. ಇದರಿಂದ ಇಂಟರ್ನೆಟ್ ಅಥವಾ ಸಿಮ್ಕಾರ್ಡ್ ಸೌಲಭ್ಯ ಇಲ್ಲದಿದ್ದರೂ ವಿದ್ಯಾರ್ಥಿಗಳು ಪಠ್ಯವನ್ನು ಅಧ್ಯಯನ ಮಾಡಬಹುದು’ ಎಂದರು.</p>.<p>‘ಸದ್ಯ ಪ್ರಿಲೋಡೆಡ್ ಪಠ್ಯ ಕನ್ನಡ ಮಾಧ್ಯಮದಲ್ಲಿ ಮಾತ್ರ ಲಭ್ಯ. ವಿದ್ಯಾರ್ಥಿಗಳಿಗೆ ಮಾಸಿಕ ಪರೀಕ್ಷೆಯನ್ನೂ ನಡೆಸಲಾಗುವುದು. ಇದಕ್ಕಾಗಿ 450 ಗೌರವ ಶಿಕ್ಷಕರನ್ನು ನಿಯೋಜಿಸಿ, ತರಬೇತಿ ನೀಡಲಾಗುವುದು’ ಎಂದು ತಿಳಿಸಿದರು.</p>.<p>‘ಜ್ಞಾನತಾಣ’ ಕಾರ್ಯಕ್ರಮದ ಫಲಾನುಭವಿ ಕುಟುಂಬವು ಉಪಕರಣ ಮತ್ತು ಪಠ್ಯವನ್ನು ಖರೀದಿಸಲು ನಿಗದಿತ ಮೊತ್ತ ಪಾವತಿಸಬೇಕು. ಟ್ಯಾಬ್ಗೆ ₹6 ಸಾವಿರ ಮತ್ತು ಲ್ಯಾಪ್ಟಾಪ್ಗೆ ₹18 ರಿಂದ ₹24 ಸಾವಿರ ದರ ನಿಗದಿಪಡಿಸಲಾಗಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಟ್ಯಾಬ್ಗೆ ₹4 ಸಾವಿರ, ಲ್ಯಾಪ್ಟಾಪ್ ಖರೀದಿಗೆ ₹6 ಸಾವಿರ ಅನುದಾನ ಒದಗಿಸಲಾಗುವುದು’ ಎಂದು ಸಂಸ್ಥೆ ಸಿಬ್ಬಂದಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಜಿರೆ:</strong> ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಆನ್ಲೈನ್ ಶಿಕ್ಷಣಕ್ಕೆ ನೆರವು ನೀಡಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ‘ಜ್ಞಾನತಾಣ’ ಕಾರ್ಯಕ್ರಮ ರೂಪಿಸಿದ್ದು, ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ಸೋಮವಾರ ಚಾಲನೆ ನೀಡಿದರು.</p>.<p>‘ಈ ಯೋಜನೆಗೆ ₹ 81 ಕೋಟಿ ವಿನಿಯೋಗಿಸಲಾಗುವುದು. 1 ಲಕ್ಷ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಲಿದ್ದಾರೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 20 ಸಾವಿರ ಟ್ಯಾಬ್ಗಳು ಹಾಗೂ 10 ಸಾವಿರ ಲ್ಯಾಪ್ಟಾಪ್ಗಳನ್ನು ವಿತರಿಸುವ ಗುರಿ ಹೊಂದಿದ್ದೇವೆ’ ಎಂದರು.</p>.<p>5ನೇ ತರಗತಿಯಿಂದ 10ನೇ ತರಗತಿ ವರೆಗೆ ಇಂಗ್ಲಿಷ್, ವಿಜ್ಞಾನ ಮತ್ತು ಗಣಿತದ ಪಠ್ಯವನ್ನು ಟ್ಯಾಬ್ ಮತ್ತು ಲ್ಯಾಪ್ ಟಾಪ್ನಲ್ಲಿ ಅಳವಡಿಸಿ (ಪ್ರಿಲೋಡೆಡ್) ವಿದ್ಯಾರ್ಥಿಗಳಿಗೆ ನೀಡಲಾಗುವುದು. ಇದರಿಂದ ಇಂಟರ್ನೆಟ್ ಅಥವಾ ಸಿಮ್ಕಾರ್ಡ್ ಸೌಲಭ್ಯ ಇಲ್ಲದಿದ್ದರೂ ವಿದ್ಯಾರ್ಥಿಗಳು ಪಠ್ಯವನ್ನು ಅಧ್ಯಯನ ಮಾಡಬಹುದು’ ಎಂದರು.</p>.<p>‘ಸದ್ಯ ಪ್ರಿಲೋಡೆಡ್ ಪಠ್ಯ ಕನ್ನಡ ಮಾಧ್ಯಮದಲ್ಲಿ ಮಾತ್ರ ಲಭ್ಯ. ವಿದ್ಯಾರ್ಥಿಗಳಿಗೆ ಮಾಸಿಕ ಪರೀಕ್ಷೆಯನ್ನೂ ನಡೆಸಲಾಗುವುದು. ಇದಕ್ಕಾಗಿ 450 ಗೌರವ ಶಿಕ್ಷಕರನ್ನು ನಿಯೋಜಿಸಿ, ತರಬೇತಿ ನೀಡಲಾಗುವುದು’ ಎಂದು ತಿಳಿಸಿದರು.</p>.<p>‘ಜ್ಞಾನತಾಣ’ ಕಾರ್ಯಕ್ರಮದ ಫಲಾನುಭವಿ ಕುಟುಂಬವು ಉಪಕರಣ ಮತ್ತು ಪಠ್ಯವನ್ನು ಖರೀದಿಸಲು ನಿಗದಿತ ಮೊತ್ತ ಪಾವತಿಸಬೇಕು. ಟ್ಯಾಬ್ಗೆ ₹6 ಸಾವಿರ ಮತ್ತು ಲ್ಯಾಪ್ಟಾಪ್ಗೆ ₹18 ರಿಂದ ₹24 ಸಾವಿರ ದರ ನಿಗದಿಪಡಿಸಲಾಗಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಟ್ಯಾಬ್ಗೆ ₹4 ಸಾವಿರ, ಲ್ಯಾಪ್ಟಾಪ್ ಖರೀದಿಗೆ ₹6 ಸಾವಿರ ಅನುದಾನ ಒದಗಿಸಲಾಗುವುದು’ ಎಂದು ಸಂಸ್ಥೆ ಸಿಬ್ಬಂದಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>