‘ವೈಚಾರಿಕ ಚಿಂತಕ ಡಾ. ಎಂ.ಎಂ.ಕಲಬುರ್ಗಿ ಅವರ ಹತ್ಯೆಯಾದ ನಂತರ ಅವರ ಹೆಸರಿನಲ್ಲಿ ಪ್ರಗತಿಪರ ಚಿಂತಕ ಪ್ರಶಸ್ತಿಯನ್ನು ನೀಡಲು ಬಸವ ಅಂತರರಾಷ್ಟ್ರೀಯ ಪ್ರತಿಷ್ಠಾನವು ಆರಂಭಿಸಿತು.ಮೌಡ್ಯತೆ ಮತ್ತು ಮೂಢನಂಬಿಕೆಗಳ ವಿರುದ್ಧ ನಿರಂತರವಾಗಿ ಕೆಲಸ ಮಾಡುತ್ತಿರುವವರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಈವರೆಗೂ ಎಂ.ಎಸ್.ಆಶಾದೇವಿ,ಜಿ.ಕೆ. ಗೋವಿಂದರಾವ್ ಹಾಗೂ ಇತರರಿಗೆ ಈ ಪ್ರಶಸ್ತಿ ಲಭಿಸಿದೆ’ ಎಂದರು.