ಪರಿಚಯ: ಕಲಬುರ್ಗಿಯ ಶಹಾಬಾದ್ನವರಾದ ಸಾಬಣ್ಣ ‘ಕೋಲಿ ಕಬ್ಬಲಿಗ’ ಸಮಾಜದವರು. ಎಂ.ಎ., ಪಿಎಚ್ಡಿ ಮಾಡಿದ್ದಾರೆ. ಒಟ್ಟು 28 ವರ್ಷಗಳ ಬೋಧನಾ ಅನುಭವ ಹೊಂದಿದ್ದಾರೆ. ಕುಲಬುರ್ಗಿ ಜಿಲ್ಲೆಯ ಸೇಡಂ, ಚಿತ್ತಾಪುರ ತಾಲ್ಲೂಕಿನ ಸರ್ಕಾರಿ ಪದವಿ ಕಾಲೇಜಿನಲ್ಲಿ ಕೆಲಸ ಮಾಡಿದ್ದಾರೆ. 1997ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ನೇಮಕವಾದರು. ಆರ್ಸಿಯು ಸ್ಥಾಪನೆಯಾದಾಗ ಇಲ್ಲಿ ಉಳಿದರು. ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥರಾಗಿದ್ದಾರೆ. ಸ್ನಾತಕೋತ್ತರ ವಿಭಾಗದ ನಿರ್ದೇಶಕರಾಗಿದ್ದರು.