<p><strong>ಹಾಸನ:</strong> ‘ದೇವಸ್ಥಾನದ ಪಾವಿತ್ರ್ಯತೆ, ಶಿಷ್ಟಾಚಾರ, ಸಂಸ್ಕೃತಿ ಕಾಪಾಡಲು ರಾಜ್ಯದ 500 ಕ್ಕೂ ಅಧಿಕ ದೇವಸ್ಥಾನಗಳಲ್ಲಿ ಭಾರತೀಯ ಸಂಸ್ಕೃತಿಯ ಪ್ರಕಾರ ವಸ್ತ್ರ ಸಂಹಿತೆ ಜಾರಿಗೊಳಿಸಲು ಕರ್ನಾಟಕ ದೇವಸ್ಥಾನ - ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಅಧಿವೇಶನದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ’ ಎಂದು ಹಿಂದೂ ಜನಜಾಗೃತಿ ಸಮಿತಿಯ ದಕ್ಷಿಣ ಕರ್ನಾಟಕದ ಸಮನ್ವಯಕ, ಕರ್ನಾಟಕ ದೇವಸ್ಥಾನ ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಮುಖ್ಯ ಆಯೋಜಕ ಚಂದ್ರ ಮೊಗವೀರ ಹೇಳಿದರು.</p>.<p>ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಪ್ರತಿ ದೇವಸ್ಥಾನದ ಮುಂಭಾಗ ವಸ್ತ್ರ ಸಂಹಿತೆಯ ಫಲಕ ಹಾಕಲಾಗುವುದು. ಭಕ್ತರು ತುಂಡು ಬಟ್ಟೆ ಧರಿಸಿ ಬರುವ ಬದಲು, ಭಾರತೀಯ ಸಂಸ್ಕೃತಿಯನ್ನು ಅನುಸರಿಸಬೇಕು ಎಂಬ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗುವುದು’ ಎಂದರು.</p>.<p>‘ಮಹಿಳೆಯರು ಚೂಡಿದಾರ್, ಲಂಗ-ದಾವಣಿ, ಸಲ್ವಾರ್-ಕುರ್ತಾ ಅಥವಾ ಸೀರೆಯಂಥ ಪಾರಂಪರಿಕ ಸಾತ್ವಿಕ ದಿರಿಸು ಧರಿಸಬೇಕು. ಪುರುಷರು ಕುರ್ತಾ, ಧೋತಿ, ಲುಂಗಿ, ಪೈಜಾಮ ಅಥವಾ ಸಾಮಾನ್ಯ ಶರ್ಟ್-ಪ್ಯಾಂಟ್ ಹಾಕಬೇಕು. ಸ್ಕರ್ಟ್, ಮಿಡಿ, ಶಾರ್ಟ್ ಪ್ಯಾಂಟ್, ಸ್ಯಾಂಡೋ ವೆಸ್ಟ್, ಜೀನ್ಸ್, ಸ್ಕರ್ಟ್, ಸ್ಲೀವ್ಲೆಸ್ ಡ್ರೆಸ್, ನೈಟ್ ಡ್ರೆಸ್ ಉಡುಪು ಧರಿಸಿ ಬರಬಾರದು’ ಎಂದು ಮನವಿ ಮಾಡಿದರು.</p>.<p>‘ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ, ಧರ್ಮ ಶಿಕ್ಷಣ ಫಲಕಗಳನ್ನು ಅಳವಡಿಸಬೇಕು ಎಂದು ರಾಜ್ಯದ ಧಾರ್ಮಿಕ ದತ್ತಿ ಖಾತೆ ಸಚಿವರಿಗೆ ಮನವಿ ನೀಡಲಾಗಿದೆ. ರಾಜ್ಯ ಧಾರ್ಮಿಕ ಪರಿಷತ್ನಲ್ಲಿ ಚರ್ಚಿಸಿ ನಿರ್ಣಯಿಸುವುದಾಗಿ ಭರವಸೆ ನೀಡಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ‘ದೇವಸ್ಥಾನದ ಪಾವಿತ್ರ್ಯತೆ, ಶಿಷ್ಟಾಚಾರ, ಸಂಸ್ಕೃತಿ ಕಾಪಾಡಲು ರಾಜ್ಯದ 500 ಕ್ಕೂ ಅಧಿಕ ದೇವಸ್ಥಾನಗಳಲ್ಲಿ ಭಾರತೀಯ ಸಂಸ್ಕೃತಿಯ ಪ್ರಕಾರ ವಸ್ತ್ರ ಸಂಹಿತೆ ಜಾರಿಗೊಳಿಸಲು ಕರ್ನಾಟಕ ದೇವಸ್ಥಾನ - ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಅಧಿವೇಶನದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ’ ಎಂದು ಹಿಂದೂ ಜನಜಾಗೃತಿ ಸಮಿತಿಯ ದಕ್ಷಿಣ ಕರ್ನಾಟಕದ ಸಮನ್ವಯಕ, ಕರ್ನಾಟಕ ದೇವಸ್ಥಾನ ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಮುಖ್ಯ ಆಯೋಜಕ ಚಂದ್ರ ಮೊಗವೀರ ಹೇಳಿದರು.</p>.<p>ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಪ್ರತಿ ದೇವಸ್ಥಾನದ ಮುಂಭಾಗ ವಸ್ತ್ರ ಸಂಹಿತೆಯ ಫಲಕ ಹಾಕಲಾಗುವುದು. ಭಕ್ತರು ತುಂಡು ಬಟ್ಟೆ ಧರಿಸಿ ಬರುವ ಬದಲು, ಭಾರತೀಯ ಸಂಸ್ಕೃತಿಯನ್ನು ಅನುಸರಿಸಬೇಕು ಎಂಬ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗುವುದು’ ಎಂದರು.</p>.<p>‘ಮಹಿಳೆಯರು ಚೂಡಿದಾರ್, ಲಂಗ-ದಾವಣಿ, ಸಲ್ವಾರ್-ಕುರ್ತಾ ಅಥವಾ ಸೀರೆಯಂಥ ಪಾರಂಪರಿಕ ಸಾತ್ವಿಕ ದಿರಿಸು ಧರಿಸಬೇಕು. ಪುರುಷರು ಕುರ್ತಾ, ಧೋತಿ, ಲುಂಗಿ, ಪೈಜಾಮ ಅಥವಾ ಸಾಮಾನ್ಯ ಶರ್ಟ್-ಪ್ಯಾಂಟ್ ಹಾಕಬೇಕು. ಸ್ಕರ್ಟ್, ಮಿಡಿ, ಶಾರ್ಟ್ ಪ್ಯಾಂಟ್, ಸ್ಯಾಂಡೋ ವೆಸ್ಟ್, ಜೀನ್ಸ್, ಸ್ಕರ್ಟ್, ಸ್ಲೀವ್ಲೆಸ್ ಡ್ರೆಸ್, ನೈಟ್ ಡ್ರೆಸ್ ಉಡುಪು ಧರಿಸಿ ಬರಬಾರದು’ ಎಂದು ಮನವಿ ಮಾಡಿದರು.</p>.<p>‘ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ, ಧರ್ಮ ಶಿಕ್ಷಣ ಫಲಕಗಳನ್ನು ಅಳವಡಿಸಬೇಕು ಎಂದು ರಾಜ್ಯದ ಧಾರ್ಮಿಕ ದತ್ತಿ ಖಾತೆ ಸಚಿವರಿಗೆ ಮನವಿ ನೀಡಲಾಗಿದೆ. ರಾಜ್ಯ ಧಾರ್ಮಿಕ ಪರಿಷತ್ನಲ್ಲಿ ಚರ್ಚಿಸಿ ನಿರ್ಣಯಿಸುವುದಾಗಿ ಭರವಸೆ ನೀಡಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>