<p><strong>ಚಿಂಚೋಳಿ (ಕಲಬುರ್ಗಿ ಜಿಲ್ಲೆ): </strong>ತಾಲ್ಲೂಕಿನನಾಗಾಈದಲಾಯಿ ಕೆರೆ 28 ಹೆಕ್ಟೇರ್ ಪ್ರದೇಶದಲ್ಲಿ ಹರಡಿಕೊಂಡಿದ್ದು,ನೀರು ತುಂಬಿಕೊಂಡು ನಳನಳಿಸುತ್ತಿತ್ತು. ಈಚೆಗೆ ಸುರಿದ ಭಾರಿ ಮಳೆಯಿಂದ ತಡೆಗೋಡೆ ಕೊಚ್ಚಿಹೋಗಿ ಈಗ ಕೆರೆಯಲ್ಲಿಯ ನೀರೆಲ್ಲ ಖಾಲಿಯಾಗಿದೆ. ಊರಿಗೆ ಆಧಾರವಾಗಿದ್ದ ಕೆರೆ ಈಗ ಕೆಸರು ಗದ್ದೆಯಂತಾಗಿದೆ.</p>.<p>ತಾಲ್ಲೂಕಿನ ದೋಟಿಕೊಳ, ಹುಲ್ಸಗೂಡ, ಹೂಡದಳ್ಳಿ ಬೃಹತ್ ಕೆರೆಗಳೂ ಒಡೆದಿದ್ದು, ಎಲ್ಲ ನೀರು ಹರಿದು ಹೋಗಿದೆ. ಈ ಕೆರೆಗಳು ಸರಾಸರಿ ತಲಾ 350 ಎಕರೆ ಪ್ರದೇಶಕ್ಕೆ ನೀರಾವರಿಗೆ ಮೂಲವಾಗಿದ್ದವು. ಇತರೆ ಸಣ್ಣಪುಟ್ಟ ಕೆರೆಗಳಿಗೂ ಹಾನಿಯಾಗಿದೆ.</p>.<p>‘ನಾಗಾಈದಲಾಯಿ ಕೆರೆಯು ನಾಗಾಈದಲಾಯಿ ತಾಂಡಾ, ಕುಸ್ರಂಪಳ್ಳಿ, ಕುಸ್ರಂಪಳ್ಳಿ ತಾಂಡಾ ರೈತರ ಜಾನುವಾರುಗಳ ದಾಹ ನೀಗಿಸುತ್ತಿತ್ತು. ಈಗ ನೀರಿಲ್ಲದೇ ಮುಂದೇನು ಎಂಬ ಚಿಂತೆ ಕಾಡುತ್ತಿದೆ’ ಎನ್ನುತ್ತಾರೆ ಗ್ರಾಮಸ್ಥ ನೆಲ್ಲಿ ಮಲ್ಲಿಕಾರ್ಜುನ.</p>.<p>‘ಎರಡುವರ್ಷಗಳ ಹಿಂದೆ ಮಳೆಯ ಅಭಾವದಿಂದ ಕೆರೆ ಒಣಗಿತ್ತು. ರೈತರೇ ಕೂಡಿ ಹೂಳು ತೆಗೆದಿದ್ದೆವು. ಈಗ ಆ ಕೆರೆ ಒಡೆದು ಖಾಲಿ ಆಗಿದೆ’’ ಎಂದು ಹೂಡದಳ್ಳಿಯ ಬಸವರಾಜ ಬಿರಾದಾರ ಹೇಳಿದರು.</p>.<p>‘ನಮ್ಮೂರಿನ ಕೆರೆ ನಿರ್ಮಿಸಿ 51 ವರ್ಷಗಳು ಗತಿಸಿವೆ. ಭಾರಿ ಪ್ರವಾಹದಿಂದ ಬಂಡ್ಗೆ ಹಾನಿಯಾಗಿದೆ’ ಎನ್ನುತ್ತಾರೆ ದೋಟಿಹಾಳದ ವಿಠಲರಾವ್ ಕುಲಕರ್ಣಿ.</p>.<p>‘ಕೆರೆಗಳಿಗೆ ಉಂಟಾಗಿರುವ ಹಾನಿ ಸರಿಪಡಿಸಲು ಅಂದಾಜು ₹ 15 ಕೋಟಿ ಅನುದಾನದ ಅಗತ್ಯವಿದೆ’ ಎನ್ನುವುದು ಸಣ್ಣ ನೀರಾವರಿ ಇಲಾಖೆಯ ಉಪ ವಿಭಾಗದ ಎಇಇ ಶಿವಶರಣಪ್ಪ ಕೇಶ್ವಾರ್ ಅವರ ಹೇಳಿಕೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂಚೋಳಿ (ಕಲಬುರ್ಗಿ ಜಿಲ್ಲೆ): </strong>ತಾಲ್ಲೂಕಿನನಾಗಾಈದಲಾಯಿ ಕೆರೆ 28 ಹೆಕ್ಟೇರ್ ಪ್ರದೇಶದಲ್ಲಿ ಹರಡಿಕೊಂಡಿದ್ದು,ನೀರು ತುಂಬಿಕೊಂಡು ನಳನಳಿಸುತ್ತಿತ್ತು. ಈಚೆಗೆ ಸುರಿದ ಭಾರಿ ಮಳೆಯಿಂದ ತಡೆಗೋಡೆ ಕೊಚ್ಚಿಹೋಗಿ ಈಗ ಕೆರೆಯಲ್ಲಿಯ ನೀರೆಲ್ಲ ಖಾಲಿಯಾಗಿದೆ. ಊರಿಗೆ ಆಧಾರವಾಗಿದ್ದ ಕೆರೆ ಈಗ ಕೆಸರು ಗದ್ದೆಯಂತಾಗಿದೆ.</p>.<p>ತಾಲ್ಲೂಕಿನ ದೋಟಿಕೊಳ, ಹುಲ್ಸಗೂಡ, ಹೂಡದಳ್ಳಿ ಬೃಹತ್ ಕೆರೆಗಳೂ ಒಡೆದಿದ್ದು, ಎಲ್ಲ ನೀರು ಹರಿದು ಹೋಗಿದೆ. ಈ ಕೆರೆಗಳು ಸರಾಸರಿ ತಲಾ 350 ಎಕರೆ ಪ್ರದೇಶಕ್ಕೆ ನೀರಾವರಿಗೆ ಮೂಲವಾಗಿದ್ದವು. ಇತರೆ ಸಣ್ಣಪುಟ್ಟ ಕೆರೆಗಳಿಗೂ ಹಾನಿಯಾಗಿದೆ.</p>.<p>‘ನಾಗಾಈದಲಾಯಿ ಕೆರೆಯು ನಾಗಾಈದಲಾಯಿ ತಾಂಡಾ, ಕುಸ್ರಂಪಳ್ಳಿ, ಕುಸ್ರಂಪಳ್ಳಿ ತಾಂಡಾ ರೈತರ ಜಾನುವಾರುಗಳ ದಾಹ ನೀಗಿಸುತ್ತಿತ್ತು. ಈಗ ನೀರಿಲ್ಲದೇ ಮುಂದೇನು ಎಂಬ ಚಿಂತೆ ಕಾಡುತ್ತಿದೆ’ ಎನ್ನುತ್ತಾರೆ ಗ್ರಾಮಸ್ಥ ನೆಲ್ಲಿ ಮಲ್ಲಿಕಾರ್ಜುನ.</p>.<p>‘ಎರಡುವರ್ಷಗಳ ಹಿಂದೆ ಮಳೆಯ ಅಭಾವದಿಂದ ಕೆರೆ ಒಣಗಿತ್ತು. ರೈತರೇ ಕೂಡಿ ಹೂಳು ತೆಗೆದಿದ್ದೆವು. ಈಗ ಆ ಕೆರೆ ಒಡೆದು ಖಾಲಿ ಆಗಿದೆ’’ ಎಂದು ಹೂಡದಳ್ಳಿಯ ಬಸವರಾಜ ಬಿರಾದಾರ ಹೇಳಿದರು.</p>.<p>‘ನಮ್ಮೂರಿನ ಕೆರೆ ನಿರ್ಮಿಸಿ 51 ವರ್ಷಗಳು ಗತಿಸಿವೆ. ಭಾರಿ ಪ್ರವಾಹದಿಂದ ಬಂಡ್ಗೆ ಹಾನಿಯಾಗಿದೆ’ ಎನ್ನುತ್ತಾರೆ ದೋಟಿಹಾಳದ ವಿಠಲರಾವ್ ಕುಲಕರ್ಣಿ.</p>.<p>‘ಕೆರೆಗಳಿಗೆ ಉಂಟಾಗಿರುವ ಹಾನಿ ಸರಿಪಡಿಸಲು ಅಂದಾಜು ₹ 15 ಕೋಟಿ ಅನುದಾನದ ಅಗತ್ಯವಿದೆ’ ಎನ್ನುವುದು ಸಣ್ಣ ನೀರಾವರಿ ಇಲಾಖೆಯ ಉಪ ವಿಭಾಗದ ಎಇಇ ಶಿವಶರಣಪ್ಪ ಕೇಶ್ವಾರ್ ಅವರ ಹೇಳಿಕೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>