ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಬಳಿಕ ಮಂಗಳವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಕಷ್ಟದಲ್ಲಿರುವ ರೈತರಿಗೆ ₹100 ಕೋಟಿ, ಮುಲ್ಲಾಗಳಿಗೆ ₹10 ಸಾವಿರ ಕೋಟಿ ಕೊಡಲು ಮುಂದಾಗಿದ್ದಾರೆ. ರೈತರಿಗೆ ಕಣ್ಣಿಗೆ ಸುಣ್ಣ ಎಂಬಂತೆ ಆಗಿದೆ. ಇಂತಹ ಆಟ ಬಹಳ ದಿನ ನಡೆಯುವುದಿಲ್ಲ’ ಎಂದರು.