<p><strong>ಮಳವಳ್ಳಿ (ಮಂಡ್ಯ ಜಿಲ್ಲೆ):</strong> ಇಳಿಸಂಜೆಯ ತಂಪು ಗಾಳಿ, ಸಾವಿರಾರು ಮಂದಿಯ ಭಕ್ತಿಯ ಸಿಂಚನದ ನಡುವೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾನ ಮಠದ ಶಿವರಾತ್ರೀಶ್ವರ ಶಿವಯೋಗಿಗಳ 1,066ನೇ ಜಯಂತಿ ಮಹೋತ್ಸವಕ್ಕೆ ಇಲ್ಲಿ ಮಂಗಳವಾರ ವಿಧ್ಯುಕ್ತ ಚಾಲನೆ ನೀಡಿದರು. </p>.<p>ಏಷ್ಯಾ ಖಂಡದಲ್ಲೇ ಮೊಟ್ಟಮೊದಲು ಜಲ ವಿದ್ಯುತ್ ಉತ್ಪಾದಿಸಿದ ತಾಲ್ಲೂಕಿನ ಶಿವನಸಮುದ್ರದ ಇತಿಹಾಸವೂ ಕಾರ್ಯಕ್ರಮದ ಶ್ರೀ ಘನಲಿಂಗ ಶಿವಯೋಗಿ ವೇದಿಕೆಯಲ್ಲಿ ಹೊಳೆಯಿತು.</p>.<p>ಮದುವಣಗಿತ್ತಿಯಂತೆ ಸಿಂಗಾರಗೊಂಡಿದ್ದ, ಶಾಂತಿಕಾಲೇಜು ಮುಂಭಾಗದ 33 ಎಕರೆ ಪ್ರದೇಶದಲ್ಲಿ ಒಂದು ವಾರ ಉತ್ಸವವನ್ನು ಕಳೆಗಟ್ಟಿಸಲು, ವಸ್ತುಪ್ರದರ್ಶನದ ಮಳಿಗೆಗಳು ಸಂಭ್ರಮದಿಂದ ಬಾಗಿಲು ತೆರೆದವು. </p>.<p>ಉದ್ಘಾಟನೆ ಬಳಿಕ ಮಾತನಾಡಿದ ರಾಷ್ಟ್ರಪತಿ, ಸುತ್ತೂರು ಮಠದ ಸೇವಾ ಕಾರ್ಯಗಳು, ಮಠದ ಸ್ವಾಮೀಜಿಗಳನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ‘ನಾಳಿನ ಭಾರತಕ್ಕಾಗಿ ಯುವಜನರಿಗೆ ಇಂಥ ಮಠಗಳು ಸ್ಫೂರ್ತಿ ತುಂಬಬೇಕು’ ಎಂದು ಕರೆ ನೀಡಿದರು.</p>.<p>‘ಕರ್ನಾಟಕವು ಇಂಥ ಹಲವು ಮಠಗಳ ಸೇವೆಯನ್ನು ಕಂಡಿದೆ. ಕಾಯಕವೇ ಕೈಲಾಸ ಎಂಬುದು ಸಂತರಿಗೆ ಬರಿಯ ಮಾತಾಗದೆ, ಬದುಕಿನ ಭಾಗವೇ ಆಗಿತ್ತು’ ಎಂದು ಅಭಿಪ್ರಾಯಪಟ್ಟರು.</p>.<p>’ಇಂದಿನ ಕ್ಷಿಪ್ರ ಬದಲಾವಣೆ ಮತ್ತು ಅನಿಶ್ಚಿತತೆಯ ಕಾಲದಲ್ಲಿ ನೈತಿಕ ನಾಯಕತ್ವ ಯುವಜನರಲ್ಲಿ ಮೂಡಬೇಕು. 2047ರ ಹೊತ್ತಿಗೆ ಭಾರತದಲ್ಲಿ ಆರ್ಥಿಕ ಅಭಿವೃದ್ಧಿ ಮತ್ತು ಸಾಮಾಜಿಕ ಒಳಗೊಳ್ಳುವಿಕೆ, ಅಭಿವೃದ್ಧಿ ಮತ್ತು ಮಾನವೀಯತೆ ಒಟ್ಟಿಗೇ ಸಾಗಬೇಕು’ ಎಂದು ಹೇಳಿದರು.</p>.<p>‘ಶಿವಯೋಗಿಗಳ ತ್ಯಾಗ ಮತ್ತು ಆಧ್ಯಾತ್ಮಿಕ ಶಕ್ತಿಗಳು ಬೆಳಕಿನ ದೀವಿಗೆಗಳಂತೆ. 8ನೇ ಶತಮಾನದಲ್ಲಿ ಮಠವನ್ನು ಸ್ಥಾಪಿಸಿದ ಶಿವಯೋಗಿಗಳು ಒಬ್ಬ ಅಖಂಡ ಗುರು. ಅವರ ನಂತರ ಬಂದ, ಶಿವರಾತ್ರಿ ರಾಜೇಂದ್ರ ಸ್ವಾಮೀಜಿಗಳು ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಿದರು’ ಎಂದು ಸ್ಮರಿಸಿದರು. </p>.<p>‘ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಧರ್ಮ, ಶಿಕ್ಷಣ, ಸಂಸ್ಕೃತಿ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಸಾಮಾಜಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸಿರುವ ಸುತ್ತೂರು ಮಠದ ಜೆಎಸ್ಎಸ್ ಮಹಾವಿದ್ಯಾಪೀಠವು ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿದೆ’ ಎಂದು ಮೆಚ್ಚುಗೆ ಸೂಚಿಸಿದರು.</p>.<p>ರಾಜ್ಯಪಾಲ ಥಾವರ್ಚಂದ್ ಗೆಹಲೋತ್, ‘ಸಮಾಜದಲ್ಲಿ ಏಕತೆ, ಸಮತೆ ಮತ್ತು ಸದ್ಭಾವಗಳನ್ನು ತರುವಲ್ಲಿ ಮಠವು ಗಣನೀಯ ಕಾರ್ಯ ಮಾಡಿದೆ’ ಎಂದರು.</p>.<p>ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ‘ತಂದೆ ಎಚ್.ಡಿ. ದೇವೇಗೌಡರು ರಾಜಕೀಯ ಪ್ರವೇಶಿಸಿದ 60ರ ದಶಕದಿಂದಲೂ ಮಠದೊಂದಿಗೆ ನಮ್ಮ ಕುಟುಂಬ ಅವಿನಾಭಾವ ಸಂಬಂಧವನ್ನು ಹೊಂದಿದೆ’ ಎಂದು ನೆನೆದರು.</p>.<p>ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ, ಶಾಸಕ ಪಿ.ಎಂ.ನರೇಂದ್ರಸ್ವಾಮಿ, ಕನಕಪುರ ಶ್ರೀದೇಗುಲ ಮಠದ ಚನ್ನಬಸವ ಸ್ವಾಮಿ ಪಾಲ್ಗೊಂಡರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಳವಳ್ಳಿ (ಮಂಡ್ಯ ಜಿಲ್ಲೆ):</strong> ಇಳಿಸಂಜೆಯ ತಂಪು ಗಾಳಿ, ಸಾವಿರಾರು ಮಂದಿಯ ಭಕ್ತಿಯ ಸಿಂಚನದ ನಡುವೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾನ ಮಠದ ಶಿವರಾತ್ರೀಶ್ವರ ಶಿವಯೋಗಿಗಳ 1,066ನೇ ಜಯಂತಿ ಮಹೋತ್ಸವಕ್ಕೆ ಇಲ್ಲಿ ಮಂಗಳವಾರ ವಿಧ್ಯುಕ್ತ ಚಾಲನೆ ನೀಡಿದರು. </p>.<p>ಏಷ್ಯಾ ಖಂಡದಲ್ಲೇ ಮೊಟ್ಟಮೊದಲು ಜಲ ವಿದ್ಯುತ್ ಉತ್ಪಾದಿಸಿದ ತಾಲ್ಲೂಕಿನ ಶಿವನಸಮುದ್ರದ ಇತಿಹಾಸವೂ ಕಾರ್ಯಕ್ರಮದ ಶ್ರೀ ಘನಲಿಂಗ ಶಿವಯೋಗಿ ವೇದಿಕೆಯಲ್ಲಿ ಹೊಳೆಯಿತು.</p>.<p>ಮದುವಣಗಿತ್ತಿಯಂತೆ ಸಿಂಗಾರಗೊಂಡಿದ್ದ, ಶಾಂತಿಕಾಲೇಜು ಮುಂಭಾಗದ 33 ಎಕರೆ ಪ್ರದೇಶದಲ್ಲಿ ಒಂದು ವಾರ ಉತ್ಸವವನ್ನು ಕಳೆಗಟ್ಟಿಸಲು, ವಸ್ತುಪ್ರದರ್ಶನದ ಮಳಿಗೆಗಳು ಸಂಭ್ರಮದಿಂದ ಬಾಗಿಲು ತೆರೆದವು. </p>.<p>ಉದ್ಘಾಟನೆ ಬಳಿಕ ಮಾತನಾಡಿದ ರಾಷ್ಟ್ರಪತಿ, ಸುತ್ತೂರು ಮಠದ ಸೇವಾ ಕಾರ್ಯಗಳು, ಮಠದ ಸ್ವಾಮೀಜಿಗಳನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ‘ನಾಳಿನ ಭಾರತಕ್ಕಾಗಿ ಯುವಜನರಿಗೆ ಇಂಥ ಮಠಗಳು ಸ್ಫೂರ್ತಿ ತುಂಬಬೇಕು’ ಎಂದು ಕರೆ ನೀಡಿದರು.</p>.<p>‘ಕರ್ನಾಟಕವು ಇಂಥ ಹಲವು ಮಠಗಳ ಸೇವೆಯನ್ನು ಕಂಡಿದೆ. ಕಾಯಕವೇ ಕೈಲಾಸ ಎಂಬುದು ಸಂತರಿಗೆ ಬರಿಯ ಮಾತಾಗದೆ, ಬದುಕಿನ ಭಾಗವೇ ಆಗಿತ್ತು’ ಎಂದು ಅಭಿಪ್ರಾಯಪಟ್ಟರು.</p>.<p>’ಇಂದಿನ ಕ್ಷಿಪ್ರ ಬದಲಾವಣೆ ಮತ್ತು ಅನಿಶ್ಚಿತತೆಯ ಕಾಲದಲ್ಲಿ ನೈತಿಕ ನಾಯಕತ್ವ ಯುವಜನರಲ್ಲಿ ಮೂಡಬೇಕು. 2047ರ ಹೊತ್ತಿಗೆ ಭಾರತದಲ್ಲಿ ಆರ್ಥಿಕ ಅಭಿವೃದ್ಧಿ ಮತ್ತು ಸಾಮಾಜಿಕ ಒಳಗೊಳ್ಳುವಿಕೆ, ಅಭಿವೃದ್ಧಿ ಮತ್ತು ಮಾನವೀಯತೆ ಒಟ್ಟಿಗೇ ಸಾಗಬೇಕು’ ಎಂದು ಹೇಳಿದರು.</p>.<p>‘ಶಿವಯೋಗಿಗಳ ತ್ಯಾಗ ಮತ್ತು ಆಧ್ಯಾತ್ಮಿಕ ಶಕ್ತಿಗಳು ಬೆಳಕಿನ ದೀವಿಗೆಗಳಂತೆ. 8ನೇ ಶತಮಾನದಲ್ಲಿ ಮಠವನ್ನು ಸ್ಥಾಪಿಸಿದ ಶಿವಯೋಗಿಗಳು ಒಬ್ಬ ಅಖಂಡ ಗುರು. ಅವರ ನಂತರ ಬಂದ, ಶಿವರಾತ್ರಿ ರಾಜೇಂದ್ರ ಸ್ವಾಮೀಜಿಗಳು ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಿದರು’ ಎಂದು ಸ್ಮರಿಸಿದರು. </p>.<p>‘ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಧರ್ಮ, ಶಿಕ್ಷಣ, ಸಂಸ್ಕೃತಿ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಸಾಮಾಜಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸಿರುವ ಸುತ್ತೂರು ಮಠದ ಜೆಎಸ್ಎಸ್ ಮಹಾವಿದ್ಯಾಪೀಠವು ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿದೆ’ ಎಂದು ಮೆಚ್ಚುಗೆ ಸೂಚಿಸಿದರು.</p>.<p>ರಾಜ್ಯಪಾಲ ಥಾವರ್ಚಂದ್ ಗೆಹಲೋತ್, ‘ಸಮಾಜದಲ್ಲಿ ಏಕತೆ, ಸಮತೆ ಮತ್ತು ಸದ್ಭಾವಗಳನ್ನು ತರುವಲ್ಲಿ ಮಠವು ಗಣನೀಯ ಕಾರ್ಯ ಮಾಡಿದೆ’ ಎಂದರು.</p>.<p>ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ‘ತಂದೆ ಎಚ್.ಡಿ. ದೇವೇಗೌಡರು ರಾಜಕೀಯ ಪ್ರವೇಶಿಸಿದ 60ರ ದಶಕದಿಂದಲೂ ಮಠದೊಂದಿಗೆ ನಮ್ಮ ಕುಟುಂಬ ಅವಿನಾಭಾವ ಸಂಬಂಧವನ್ನು ಹೊಂದಿದೆ’ ಎಂದು ನೆನೆದರು.</p>.<p>ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ, ಶಾಸಕ ಪಿ.ಎಂ.ನರೇಂದ್ರಸ್ವಾಮಿ, ಕನಕಪುರ ಶ್ರೀದೇಗುಲ ಮಠದ ಚನ್ನಬಸವ ಸ್ವಾಮಿ ಪಾಲ್ಗೊಂಡರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>