ಬೆಂಗಳೂರು: ಐಎಎಸ್ ಹಾಗೂ ಕೆಎಎಸ್ ಪರೀಕ್ಷೆಗಳಿಗೆ ಸಿದ್ಧತೆ ನಡೆಸಲು ಉಚಿತ ತರಬೇತಿ ನೀಡುವ ಸಲುವಾಗಿ ಆರ್ಥಿಕವಾಗಿ ದುರ್ಬಲರಾಗಿರುವ ಪ್ರತಿಭಾವಂತ ಅಭ್ಯರ್ಥಿಗಳಿಂದ ಡಾ.ರಾಜ್ಕುಮಾರ್ ಸಿವಿಲ್ ಸರ್ವಿಸಸ್ ಅಕಾಡೆಮಿ ಅರ್ಜಿ ಆಹ್ವಾನಿಸಿದೆ.
ಅಕಾಡೆಮಿಯ ಆಡಳಿತ ವಿಭಾಗದ ಮುಖ್ಯಸ್ಥ ಗಿರೀಶ್ ಮಾತನಾಡಿ ‘ಮಾರ್ಚ್ 31ಕ್ಕೆ ಬೆಂಗಳೂರು, ಧಾರವಾಡ ಹಾಗೂ ಕಲಬುರ್ಗಿ ಕೇಂದ್ರಗಳಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದೆ. ಮಾ.21ರೊಳಗಾಗಿ ನೋಂದಣಿ ಮಾಡಿಕೊಳ್ಳಬಹುದು. ಆಯ್ದ ಅಭ್ಯರ್ಥಿಗಳಿಗೆಉಚಿತ ತರಬೇತಿ ನೀಡಲಾಗುವುದು’ ಎಂದರು.
‘ಈ ಬಾರಿ 100ರಿಂದ 150 ಮಂದಿ ಮುಖ್ಯ ಪರೀಕ್ಷೆ ಬರೆಯಲಿದ್ದಾರೆ. ದೆಹಲಿಯ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳಲ್ಲಿ ತರಬೇತಿ ನೀಡುವ ಇಬ್ಬರು ಪರಿಣಿತರು ಇಲ್ಲಿಯೂ ತರಬೇತಿ ನೀಡುತ್ತಿದ್ದಾರೆ’ ಎಂದು ಹೇಳಿದರು.
ನಟ ರಾಘವೇಂದ್ರ ರಾಜ್ಕುಮಾರ್, ‘ಐಎಎಸ್, ಕೆಎಎಸ್ನಂತಹ ಪರೀಕ್ಷೆಗಳನ್ನು ಬರೆಯುವ ಕನ್ನಡಿಗರ ಸಂಖ್ಯೆ ಹೆಚ್ಚಾಗಬೇಕು ಎಂಬ ಆಸೆಯಿಂದ ಅಕಾಡೆಮಿಯನ್ನು ಆರಂಭಿಸಿದ್ದೇವೆ’ ಎಂದು ತಿಳಿಸಿದರು.
ಬೆಂಗಳೂರು ಕೇಂದ್ರದ ವಿಳಾಸ: #91, 2ಮತ್ತು 3ನೇ ಮಹಡಿ, 60 ಅಡಿ ರಸ್ತೆ, ಚಂದ್ರಾ ಲೇಔಟ್.