<p><strong>ಬೆಂಗಳೂರು:</strong> ‘ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಔಷಧ ಪೂರೈಕೆ ಟೆಂಡರ್ ನೀಡುವಲ್ಲಿ ಭಾರಿ ಅಕ್ರಮ ನಡೆದಿದೆ’ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆರೋಪಿಸಿದರು.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈಗಾಗಲೇ ಹಲವು ಏಜೆನ್ಸಿಗಳು ಕಡಿಮೆ ದರಕ್ಕೆ ಪೂರೈಕೆ ಮಾಡುತ್ತಿರುವ ಔಷಧಗಳನ್ನೇ ಹಲವು ಪಟ್ಟು ಹೆಚ್ಚು ದರಕ್ಕೆ ಪೂರೈಸಲು ಗುತ್ತಿಗೆ ನೀಡಲಾಗಿದೆ’ ಎಂದರು.</p>.<p>‘ಜಿಲ್ಲಾಸ್ಪತ್ರೆಗೆ ಈಗ ಮೋಕ್ಷಿ ಪ್ಲಾಕ್ಸಾಕ್ಸಿನ್ ಎಂಬ ಕಣ್ಣಿನ ದ್ರಾವಣವನ್ನು ಪ್ರತಿ ಬಾಟಲ್ಗೆ ₹10.75ರಂತೆ ಪೂರೈಕೆ ಮಾಡಲಾಗುತ್ತಿದೆ. ಅದೇ ದ್ರಾವಣವನ್ನು ಪ್ರತಿ ಬಾಟಲ್ಗೆ ₹116ರಂತೆ ಪೂರೈಕೆ ಮಾಡಲು ಹೊಸದಾಗಿ ಗುತ್ತಿಗೆ ನೀಡಲಾಗಿದೆ. ₹4ಕ್ಕೆ ಪೂರೈಕೆ ಮಾಡುತ್ತಿರುವ ಕ್ಯಾಲ್ಸಿಯಂ ಕಾರ್ಬೊನೇಟ್ ಮತ್ತು ವಿಟಮಿನ್ ಡಿ3 ಮಾತ್ರೆಗಳನ್ನು ₹35.64ಕ್ಕೆ ಪೂರೈಸಲು ಗುತ್ತಿಗೆ ನೀಡಲಾಗಿದೆ’ ಎಂದು ವಿವರಿಸಿದರು.</p>.<p>‘ಈ ಆಸ್ಪತ್ರೆಯು ಈ ಹಿಂದೆ ಆರೋಗ್ಯ ಇಲಾಖೆಯ ಸುಪರ್ದಿಯಲ್ಲಿ ಇತ್ತು. ಈಗ ವೈದ್ಯಕೀಯ ಶಿಕ್ಷಣ ಇಲಾಖೆಯು ನಿರ್ವಹಣೆ ಮಾಡುತ್ತಿದೆ. ಈ ಬದಲಾವಣೆಯ ನಂತರವೇ ಹಲವು ಸಮಸ್ಯೆ ಎದುರಾಗಿದೆ. ಆಳುವವರ ಸಹಕಾರದೊಂದಿಗೇ ಔಷಧ ಖರೀದಿಯಲ್ಲಿ ಅಕ್ರಮ ನಡೆದಿದೆ’ ಎಂದರು.</p>.<p>ವಿಧಾನ ಪರಿಷತ್ ಸದಸ್ಯ ಕೇಶವ ಪ್ರಸಾದ್, ಬಿಜೆಪಿ ರಾಜ್ಯ ವಕ್ತಾರ ಎಚ್.ವೆಂಕಟೇಶ್ ದೊಡ್ಡೇರಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಔಷಧ ಪೂರೈಕೆ ಟೆಂಡರ್ ನೀಡುವಲ್ಲಿ ಭಾರಿ ಅಕ್ರಮ ನಡೆದಿದೆ’ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆರೋಪಿಸಿದರು.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈಗಾಗಲೇ ಹಲವು ಏಜೆನ್ಸಿಗಳು ಕಡಿಮೆ ದರಕ್ಕೆ ಪೂರೈಕೆ ಮಾಡುತ್ತಿರುವ ಔಷಧಗಳನ್ನೇ ಹಲವು ಪಟ್ಟು ಹೆಚ್ಚು ದರಕ್ಕೆ ಪೂರೈಸಲು ಗುತ್ತಿಗೆ ನೀಡಲಾಗಿದೆ’ ಎಂದರು.</p>.<p>‘ಜಿಲ್ಲಾಸ್ಪತ್ರೆಗೆ ಈಗ ಮೋಕ್ಷಿ ಪ್ಲಾಕ್ಸಾಕ್ಸಿನ್ ಎಂಬ ಕಣ್ಣಿನ ದ್ರಾವಣವನ್ನು ಪ್ರತಿ ಬಾಟಲ್ಗೆ ₹10.75ರಂತೆ ಪೂರೈಕೆ ಮಾಡಲಾಗುತ್ತಿದೆ. ಅದೇ ದ್ರಾವಣವನ್ನು ಪ್ರತಿ ಬಾಟಲ್ಗೆ ₹116ರಂತೆ ಪೂರೈಕೆ ಮಾಡಲು ಹೊಸದಾಗಿ ಗುತ್ತಿಗೆ ನೀಡಲಾಗಿದೆ. ₹4ಕ್ಕೆ ಪೂರೈಕೆ ಮಾಡುತ್ತಿರುವ ಕ್ಯಾಲ್ಸಿಯಂ ಕಾರ್ಬೊನೇಟ್ ಮತ್ತು ವಿಟಮಿನ್ ಡಿ3 ಮಾತ್ರೆಗಳನ್ನು ₹35.64ಕ್ಕೆ ಪೂರೈಸಲು ಗುತ್ತಿಗೆ ನೀಡಲಾಗಿದೆ’ ಎಂದು ವಿವರಿಸಿದರು.</p>.<p>‘ಈ ಆಸ್ಪತ್ರೆಯು ಈ ಹಿಂದೆ ಆರೋಗ್ಯ ಇಲಾಖೆಯ ಸುಪರ್ದಿಯಲ್ಲಿ ಇತ್ತು. ಈಗ ವೈದ್ಯಕೀಯ ಶಿಕ್ಷಣ ಇಲಾಖೆಯು ನಿರ್ವಹಣೆ ಮಾಡುತ್ತಿದೆ. ಈ ಬದಲಾವಣೆಯ ನಂತರವೇ ಹಲವು ಸಮಸ್ಯೆ ಎದುರಾಗಿದೆ. ಆಳುವವರ ಸಹಕಾರದೊಂದಿಗೇ ಔಷಧ ಖರೀದಿಯಲ್ಲಿ ಅಕ್ರಮ ನಡೆದಿದೆ’ ಎಂದರು.</p>.<p>ವಿಧಾನ ಪರಿಷತ್ ಸದಸ್ಯ ಕೇಶವ ಪ್ರಸಾದ್, ಬಿಜೆಪಿ ರಾಜ್ಯ ವಕ್ತಾರ ಎಚ್.ವೆಂಕಟೇಶ್ ದೊಡ್ಡೇರಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>