ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೂದ್‌ಸಾಗರ್‌ ಬಳಿ ರೈಲು ಮಾರ್ಗದಲ್ಲಿ ಗುಡ್ಡ ಕುಸಿತ: ಸಂಚಾರ ರದ್ದು

Last Updated 21 ಆಗಸ್ಟ್ 2018, 19:30 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಭಾರಿ ಮಳೆಯಿಂದಾಗಿ, ದೂದ್‌ಸಾಗರ್‌ ಜಲಪಾತದ ಬಳಿಯ ಕ್ಯಾಸಲ್‌ರಾಕ್‌– ಕುಲೇಂ ರೈಲು ಮಾರ್ಗದಲ್ಲಿ ಮಂಗಳವಾರ ಮಧ್ಯಾಹ್ನ ಗುಡ್ಡ ಕುಸಿದು ಹಳಿಯ ಮೇಲೆ ಬಿದ್ದಿದೆ.

ಇದರಿಂದಾಗಿ ಆ ಮಾರ್ಗವಾಗಿ ಸಾಗಬೇಕಿದ್ದ ಹುಬ್ಬಳ್ಳಿ–ನಿಜಾಮುದ್ದೀನ್‌ ಎಕ್ಸ್‌ಪ್ರೆಸ್‌ ಹಾಗೂ ವಾಸ್ಕೊ–ಬೆಂಗಳೂರು ರೈಲುಗಳ ಸಂಚಾರವನ್ನು ನೈರುತ್ಯ ರೈಲ್ವೆ ರದ್ದುಪಡಿಸಿದೆ. ವಾಸ್ಕೊ–ನಿಜಾಮುದ್ದೀನ್‌ ಮತ್ತು ಎರ್ನಾಕುಲಂ– ಪುಣೆ ವೀಕ್ಲಿ ಎಕ್ಸ್‌ಪ್ರೆಸ್‌ ರೈಲುಗಳ ಮಾರ್ಗ ಬದಲಿಸಲಾಯಿತು.

ಮಣ್ಣು ತೆರವುಗೊಳಿಸಿದ ನಂತರ ರಾತ್ರಿ 9.30ಕ್ಕೆ ರೈಲು ಸಂಚಾರ ಮತ್ತೆ ಆರಂಭವಾಯಿತು. ನೈರುತ್ಯ ರೈಲ್ವೆ ಹುಬ್ಬಳ್ಳಿ ವಿಭಾಗೀಯ ವ್ಯವಸ್ಥಾಪಕ ರಾಜೇಶ್‌ ಮೋಹನ್‌ ಸ್ಥಳಕ್ಕೆ ಭೇಟಿ ನೀಡಿ ಕಾರ್ಯಾಚರಣೆ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT