‘ಸ್ವಚ್ಛತೆ’ಯನ್ನು ನಿಮ್ಮ ಮನೆಯಿಂದ ಆರಂಭಿಸಿ’
‘ಒಂದು ವೇಳೆ ಸ್ವಚ್ಛತಾ ಕಾರ್ಯಾಚರಣೆ ಆರಂಭಿಸುವುದಿದ್ದರೆ ಅದನ್ನು ಮೊದಲು ನಿಮ್ಮ ಮನೆಯಿಂದ ಆರಂಭಿಸಿ’ ಎಂದು ನ್ಯಾಯಪೀಠ ಹೇಳಿತು.
ವಿಚಾರಣೆ ವೇಳೆ, ಬಿಬಿಎಂಪಿ ಪರ ವಕೀಲರು ನಕಲಿ ಬಿಲ್ಗಳ ವಿಚಾರ ಪ್ರಸ್ತಾಪಿಸಿದರು. ಇದಕ್ಕೆ ಕಿಡಿಕಾರಿದ ನ್ಯಾಯಪೀಠ, ‘ಅದಕ್ಕೂ ಈ ಅರ್ಜಿದಾರರಿಗೂ ಸಂಬಂಧವಿಲ್ಲ. ಇಂತಹ ವಿಷಯಗಳಲ್ಲಿ ನೀವು ನಿಮ್ಮ ಅಧಿಕಾರಿಗಳ ವಿರುದ್ಧ ಏನು ಕ್ರಮ ಕೈಗೊಂಡಿದ್ದೀರಾ? ರಾಜ್ಯ ಸರ್ಕಾರ ವಿವೇಚನೆಯಿಂದ ಕಾರ್ಯ ನಿರ್ವಹಿಸಬೇಕು‘ ಎಂದು ತಾಕೀತು ಮಾಡಿತು.