ಬೆಂಗಳೂರು ಉತ್ತರ ಕ್ಷೇತ್ರದಿಂದ ಮತ್ತೆ ಸ್ಪರ್ಧಿಸುವ ಕುರಿತು ಪ್ರತಿಕ್ರಿಯಿಸಿದ ಅವರು, ‘ನಾನು 30 ವರ್ಷದ ರಾಜಕಾರಣ ನೋಡಿದ್ದೇನೆ. ಹೊಸಬರು ಬರಬೇಕು ಎನ್ನುವ ಕಾರಣಕ್ಕೆ ಚುನಾವಣೆ ರಾಜಕೀಯದಿಂದ ದೂರ ಸರಿಯುವ ಪ್ರಯತ್ನ ಮಾಡಿದ್ದೇನೆ. ಆದರೆ, ಅಶೋಕ, ಬೊಮ್ಮಾಯಿ, ಡಾ. ಅಶ್ವತ್ಥನಾರಾಯಣ, ಸೋಮಶೇಖರ್, ದಾಸರಹಳ್ಳಿ ಮುನಿರಾಜು ಸೇರಿದಂತೆ ಪಕ್ಷದ ಎಲ್ಲ ನಾಯಕರು ನೀವೇ ಸ್ಪರ್ಧಿಸಿ ಎಂದು ಒತ್ತಡ ಹಾಕುತ್ತಿದ್ದಾರೆ’ ಎಂದರು.