‘ರಾಜ್ಯ ಸರ್ಕಾರ ಎನ್ಇಪಿ ರದ್ದು ಮಾಡಿ ಎಸ್ಇಪಿ (ರಾಜ್ಯ ಶಿಕ್ಷಣ ನೀತಿ) ತರಲು ಹೊರಟಿರುವ ನಿರ್ಧಾರ ಶಿಕ್ಷಣ ವಲಯಕ್ಕೆ ಅಪಾಯಕಾರಿ. ಇದಕ್ಕಾಗಿ ಸರ್ಕಾರ ಆಯೋಗ ರಚನೆ ಮಾಡಿರುವ ಕ್ರಮ ಸರಿಯಲ್ಲ. ಎನ್ಇಪಿ ಸಮಗ್ರವಾಗಿ ಅಧ್ಯಯನ ನಡೆಸಿ ಮಾಡಿದ ನೀತಿಯಾಗಿತ್ತು. ಈಗ ತಮ್ಮ ಕಾರ್ಯಸೂಚಿಗೆ ತಕ್ಕಂತೆ ವರದಿ ಪಡೆಯಲು ಸಿದ್ಧತೆ ನಡೆಸಿದ್ದಾರೆ. ಇದು ಶಿಕ್ಷಣ ವ್ಯವಸ್ಥೆಗೆ ಮಾರಕ’ ಎಂದು ಆತಂಕ ವ್ಯಕ್ತಪಡಿಸಿದರು.