ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಕೆಲಸ ಮಾಡಿದವರು.1994ರಿಂದ 2004ರವರೆಗೆ ವಿಧಾನಸಭೆ ಸದಸ್ಯರಾಗಿದ್ದರು. 2004ರಲ್ಲಿ ದಕ್ಷಿಣ ಕನ್ನಡ, 2009ರಲ್ಲಿ ಚಿಕ್ಕಮಗಳೂರು–ಉಡುಪಿ ಕ್ಷೇತ್ರದ ಸಂಸದರೂ ಆಗಿದ್ದರು. 2011 ರಿಂದ 2012 ಅವಧಿಯಲ್ಲಿ ಸುಮಾರು ಒಂದು ವರ್ಷ ಮುಖ್ಯಮಂತ್ರಿಯಾಗಿದ್ದರು. ಬಳಿಕ, ವಿಧಾನಪರಿಷತ್ತಿನ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು. 2014 ಹಾಗೂ 2019ರಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಪ್ರಧಾನಿ ನರೇಂದ್ರಮೋದಿ ಸರ್ಕಾರದಲ್ಲಿ ಕಾನೂನು, ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾಗಿಯೂ ಕೆಲಸ ಮಾಡಿದ್ದರು.