ರಾಜ್ಯದ ಬಿಜೆಪಿ ಸರಕಾರದ ದುರಾಡಳಿತದ ವಿರುದ್ಧ, ಸ್ಥಳೀಯ ಶಾಸಕ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಅವರ ಅಕ್ರಮ, ಅನ್ಯಾಯಗಳನ್ನು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಸುನಿಲ್ ಬಜಿಲಕೇರಿ ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಬರಹಗಳ ಮತ್ತು ವ್ಯಂಗ್ಯ ಚಿತ್ರಗಳ ಮೂಲಕ ವಿರೋಧ ದಾಖಲಿಸುತ್ತಿದ್ದರು. ಅವರ ಹೇಳಿಕೆಗಳು ಜನರ ಗಮನವನ್ನು ಸೆಳೆಯುತ್ತಿದ್ದುದರಿಂದ ಮುಜುಗರಕ್ಕೊಳಗಾಗುತ್ತಿದ್ದ ಸ್ಥಳೀಯ ಶಾಸಕರು ತಮ್ಮ ಅಧಿಕಾರ ಪ್ರಯೋಗಿಸಿ ಪೊಲೀಸರ ಮೂಲಕ ಹೋರಾಟಗಾರ ಸುನಿಲ್ ಬಜಿಲಕೇರಿ ಬಾಯಿಯನ್ನು ಮುಚ್ಚಿಸುವ ಪ್ರಯತ್ನ ಮಾಡಿದ್ದಾರೆ ಎಂದು ಹೇಳಿದೆ.