<p><strong>ಬೆಂಗಳೂರು:</strong> ‘ನಾಗರಿಕರು ಇನ್ನು ಮುಂದೆ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಸೇವಾ ಕೇಂದ್ರಗಳ ಮೂಲಕ ‘ಇ-ಸ್ವತ್ತು’ ಅರ್ಜಿ ಸಲ್ಲಿಸಬಹುದು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.</p>.<p>ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಇ-ಆಡಳಿತ ಇಲಾಖೆಯ ಅಡಿಯಲ್ಲಿನ ನಾಗರಿಕ ಸೇವೆಗಳ ವಿದ್ಯುನ್ಮಾನ ವಿತರಣಾ ನಿರ್ದೇಶನಾಲಯ (ಇಡಿಸಿಎಸ್) ಮೂರು ವರ್ಷಗಳ ಅವಧಿಗೆ ಒಪ್ಪಂದ ಮಾಡಿಕೊಂಡಿವೆ. ಇ-ಆಡಳಿತ ನಿರ್ದೇಶಕ ರಾಹುಲ್ ರತ್ನಂ ಪಾಂಡೆ ಮತ್ತು ಇಡಿಸಿಎಸ್ ನಿರ್ದೇಶನಾಲಯದ ನಿರ್ದೇಶಕರಾದ ಅಪರ್ಣಾ ರಮೇಶ್ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.</p>.<p>‘ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಭಿವೃದ್ಧಿಪಡಿಸಿರುವ ಇ-ಸ್ವತ್ತು ವ್ಯವಸ್ಥೆಗೆ ರಾಜ್ಯದಾದ್ಯಂತ ಇರುವ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಈ ವ್ಯವಸ್ಥೆಯ ಬಗ್ಗೆ ನಾಗರಿಕ ಸೇವಾ ಕೇಂದ್ರಗಳ ನಿರ್ವಾಹಕರಿಗೆ ತರಬೇತಿ ನೀಡಲಾಗುವುದು. ಅಲ್ಲದೆ, ನಿರ್ವಾಹಕರಿಗೆ ಪ್ರತ್ಯೇಕ ಲಾಗಿನ್ ಖಾತೆ ನೀಡಲಾಗುವುದು. ಸೇವೆಗಳ ಸಮನ್ವಯಕ್ಕೆ ಇಲಾಖೆಯ ವತಿಯಿಂದ ನೋಡಲ್ ಅಧಿಕಾರಿಗಳನ್ನೂ ನೇಮಿಸಲಾಗುವುದು’ ಎಂದೂ ಪ್ರಿಯಾಂಕ್ ತಿಳಿಸಿದ್ದಾರೆ.</p>.<p>ಹೊಸ ಖಾತಾ ಪಡೆಯಲು ₹ 45 ಶುಲ್ಕ ನಿಗದಿಪಡಿಸಲಾಗಿದೆ. ಈ ವೆಚ್ಚವನ್ನು ನಾಗರಿಕರೇ ಭರಿಸಬೇಕು. ಇ- ಆಸ್ತಿ ಅರ್ಜಿಗೆ ಬೇಕಾದ ದಾಖಲೆಗಳ ಸ್ಕ್ಯಾನಿಂಗ್ ಮತ್ತು ಅಪ್ಲೋಡ್ ಮಾಡಲು ಪ್ರತಿ ಪುಟಕ್ಕೆ ₹ 5 ಪಾವತಿಸಬೇಕು. ಎಲ್ಲ ನಾಗರಿಕ ಸೇವಾ ಕೇಂದ್ರಗಳು ವರ್ಷದ ಎಲ್ಲ ದಿನಗಳು ಬೆಳಿಗ್ಗೆ 8 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಕಾರ್ಯನಿರ್ವಹಿಸಲಿವೆ. ಸ್ವಾತಂತ್ರ್ಯ ದಿನ, ಗಣರಾಜ್ಯೋತ್ಸವ, ಕಾರ್ಮಿಕರ ದಿನ, ಗಾಂಧಿ ಜಯಂತಿ, ಕನ್ನಡ ರಾಜ್ಯೋತ್ಸವ ಮತ್ತು ಮತದಾನದ ದಿನಗಳಂದು ಈ ಕೇಂದ್ರಗಳಿಗೆ ರಜೆ ಇರಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ನಾಗರಿಕರು ಇನ್ನು ಮುಂದೆ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಸೇವಾ ಕೇಂದ್ರಗಳ ಮೂಲಕ ‘ಇ-ಸ್ವತ್ತು’ ಅರ್ಜಿ ಸಲ್ಲಿಸಬಹುದು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.</p>.<p>ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಇ-ಆಡಳಿತ ಇಲಾಖೆಯ ಅಡಿಯಲ್ಲಿನ ನಾಗರಿಕ ಸೇವೆಗಳ ವಿದ್ಯುನ್ಮಾನ ವಿತರಣಾ ನಿರ್ದೇಶನಾಲಯ (ಇಡಿಸಿಎಸ್) ಮೂರು ವರ್ಷಗಳ ಅವಧಿಗೆ ಒಪ್ಪಂದ ಮಾಡಿಕೊಂಡಿವೆ. ಇ-ಆಡಳಿತ ನಿರ್ದೇಶಕ ರಾಹುಲ್ ರತ್ನಂ ಪಾಂಡೆ ಮತ್ತು ಇಡಿಸಿಎಸ್ ನಿರ್ದೇಶನಾಲಯದ ನಿರ್ದೇಶಕರಾದ ಅಪರ್ಣಾ ರಮೇಶ್ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.</p>.<p>‘ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಭಿವೃದ್ಧಿಪಡಿಸಿರುವ ಇ-ಸ್ವತ್ತು ವ್ಯವಸ್ಥೆಗೆ ರಾಜ್ಯದಾದ್ಯಂತ ಇರುವ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಈ ವ್ಯವಸ್ಥೆಯ ಬಗ್ಗೆ ನಾಗರಿಕ ಸೇವಾ ಕೇಂದ್ರಗಳ ನಿರ್ವಾಹಕರಿಗೆ ತರಬೇತಿ ನೀಡಲಾಗುವುದು. ಅಲ್ಲದೆ, ನಿರ್ವಾಹಕರಿಗೆ ಪ್ರತ್ಯೇಕ ಲಾಗಿನ್ ಖಾತೆ ನೀಡಲಾಗುವುದು. ಸೇವೆಗಳ ಸಮನ್ವಯಕ್ಕೆ ಇಲಾಖೆಯ ವತಿಯಿಂದ ನೋಡಲ್ ಅಧಿಕಾರಿಗಳನ್ನೂ ನೇಮಿಸಲಾಗುವುದು’ ಎಂದೂ ಪ್ರಿಯಾಂಕ್ ತಿಳಿಸಿದ್ದಾರೆ.</p>.<p>ಹೊಸ ಖಾತಾ ಪಡೆಯಲು ₹ 45 ಶುಲ್ಕ ನಿಗದಿಪಡಿಸಲಾಗಿದೆ. ಈ ವೆಚ್ಚವನ್ನು ನಾಗರಿಕರೇ ಭರಿಸಬೇಕು. ಇ- ಆಸ್ತಿ ಅರ್ಜಿಗೆ ಬೇಕಾದ ದಾಖಲೆಗಳ ಸ್ಕ್ಯಾನಿಂಗ್ ಮತ್ತು ಅಪ್ಲೋಡ್ ಮಾಡಲು ಪ್ರತಿ ಪುಟಕ್ಕೆ ₹ 5 ಪಾವತಿಸಬೇಕು. ಎಲ್ಲ ನಾಗರಿಕ ಸೇವಾ ಕೇಂದ್ರಗಳು ವರ್ಷದ ಎಲ್ಲ ದಿನಗಳು ಬೆಳಿಗ್ಗೆ 8 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಕಾರ್ಯನಿರ್ವಹಿಸಲಿವೆ. ಸ್ವಾತಂತ್ರ್ಯ ದಿನ, ಗಣರಾಜ್ಯೋತ್ಸವ, ಕಾರ್ಮಿಕರ ದಿನ, ಗಾಂಧಿ ಜಯಂತಿ, ಕನ್ನಡ ರಾಜ್ಯೋತ್ಸವ ಮತ್ತು ಮತದಾನದ ದಿನಗಳಂದು ಈ ಕೇಂದ್ರಗಳಿಗೆ ರಜೆ ಇರಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>