<p><strong>ಬೆಂಗಳೂರು:</strong> ಗ್ರಾಮಪಂಚಾಯಿತಿಗಳ ವ್ಯಾಪ್ತಿಯಲ್ಲಿ ಇ–ಸ್ವತ್ತು ಜಾರಿಗೆ ತರಲು ನಿಯಮಗಳ ಕರಡನ್ನು ಒಂದು ವಾರದೊಳಗೆ ಪ್ರಕಟಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಈ ಕುರಿತು ವಿಕಾಸಸೌಧದಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿದ ಅವರು ಕರಡು ನಿಯಮಗಳಲ್ಲಿ ಕೆಲವು ಬದಲಾವಣೆಗಳನ್ನೂ ಸೂಚಿಸಿದರು.</p>.<p>ತೆರಿಗೆ ದರ, ಶುಲ್ಕಗಳನ್ನು ವಿಧಿಸುವ ಪ್ರಕ್ರಿಯೆ, ಕಟ್ಟಡಗಳು ಮತ್ತು ಭೂಮಿಯ ಮೇಲೆ ತೆರಿಗೆ ವಿಧಿಸುವುದು, ನಮೂನೆ 11 ಎ ನಿರ್ವಹಣೆ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ನಿಯಮ, 2025 ರ ನಂತರ ನಮೂನೆ 11 ಎ ರಿಜಿಸ್ಟರ್ಗೆ ಹೊಸ ಆಸ್ತಿಗಳ ಸೇರ್ಪಡೆ, ಮೇಲ್ಮನವಿ, ದಂಡನೆಗಳು, ನೀರು ಸರಬರಾಜು ದರ ಮತ್ತು ಇತರ ದರಗಳ ನಿರ್ಧರಣೆ, ದಂಡ ನಿರ್ಧಾರ, ಸ್ಥಿರ ಸ್ವತ್ತಿನ ಪರಿಶೀಲನೆ, ಮೇಲ್ಮನವಿ, ತಗಾದೆ ನೋಟಿಸ್, ಜಪ್ತಿ ಮತ್ತು ಮಾರಾಟ ಮುಂತಾದ ವಿಷಯಗಳ ಕುರಿತು ಪ್ರಿಯಾಂಕ್ ಚರ್ಚಿಸಿದರು.</p>.<p>ಇ–ಸ್ವತ್ತು ರೂಪಿಸುವ ಸಂಬಂಧ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮುನೀಶ್ ಮೌದ್ಗಿಲ್ ಹಲವು ಸಲಹೆಗಳನ್ನು ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಗ್ರಾಮಪಂಚಾಯಿತಿಗಳ ವ್ಯಾಪ್ತಿಯಲ್ಲಿ ಇ–ಸ್ವತ್ತು ಜಾರಿಗೆ ತರಲು ನಿಯಮಗಳ ಕರಡನ್ನು ಒಂದು ವಾರದೊಳಗೆ ಪ್ರಕಟಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಈ ಕುರಿತು ವಿಕಾಸಸೌಧದಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿದ ಅವರು ಕರಡು ನಿಯಮಗಳಲ್ಲಿ ಕೆಲವು ಬದಲಾವಣೆಗಳನ್ನೂ ಸೂಚಿಸಿದರು.</p>.<p>ತೆರಿಗೆ ದರ, ಶುಲ್ಕಗಳನ್ನು ವಿಧಿಸುವ ಪ್ರಕ್ರಿಯೆ, ಕಟ್ಟಡಗಳು ಮತ್ತು ಭೂಮಿಯ ಮೇಲೆ ತೆರಿಗೆ ವಿಧಿಸುವುದು, ನಮೂನೆ 11 ಎ ನಿರ್ವಹಣೆ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ನಿಯಮ, 2025 ರ ನಂತರ ನಮೂನೆ 11 ಎ ರಿಜಿಸ್ಟರ್ಗೆ ಹೊಸ ಆಸ್ತಿಗಳ ಸೇರ್ಪಡೆ, ಮೇಲ್ಮನವಿ, ದಂಡನೆಗಳು, ನೀರು ಸರಬರಾಜು ದರ ಮತ್ತು ಇತರ ದರಗಳ ನಿರ್ಧರಣೆ, ದಂಡ ನಿರ್ಧಾರ, ಸ್ಥಿರ ಸ್ವತ್ತಿನ ಪರಿಶೀಲನೆ, ಮೇಲ್ಮನವಿ, ತಗಾದೆ ನೋಟಿಸ್, ಜಪ್ತಿ ಮತ್ತು ಮಾರಾಟ ಮುಂತಾದ ವಿಷಯಗಳ ಕುರಿತು ಪ್ರಿಯಾಂಕ್ ಚರ್ಚಿಸಿದರು.</p>.<p>ಇ–ಸ್ವತ್ತು ರೂಪಿಸುವ ಸಂಬಂಧ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮುನೀಶ್ ಮೌದ್ಗಿಲ್ ಹಲವು ಸಲಹೆಗಳನ್ನು ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>