<p><strong>ಬೆಂಗಳೂರು:</strong> ಗ್ರಾಮ ಪಂಚಾಯತ್ಗಳಲ್ಲಿ ಇ–ಸ್ವತ್ತು ಖಾತಾ ವಿತರಣೆಗೆ ತಂತ್ರಾಂಶದಲ್ಲಿ ಸಮಸ್ಯೆ ಇದ್ದು, 15–25 ದಿನಗಳಲ್ಲಿ ಸರಿಪಡಿಸಿ ಖಾತಾ ವಿತರಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ನೀಡಿದರು.</p>.<p>ವಿಧಾನಸಭೆಯಲ್ಲಿ ಬಿಜೆಪಿಯ ಕಿರಣ್ ಕುಮಾರ್ ಕೊಡ್ಗಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಡಿ.1 ರಿಂದ ಇ–ಸ್ವತ್ತು ಖಾತಾ ವಿತರಣೆ ಆರಂಭಿಸಿದರೂ ತಂತ್ರಾಂಶದಲ್ಲಿ ಸಮಸ್ಯೆಯಿಂದ ಖಾತಾ ವಿತರಣೆ ಸಾಧ್ಯವಾಗುತ್ತಿಲ್ಲ ಎಂದು ಪ್ರಿಯಾಂಕ್ ಹೇಳಿದರು.</p>.<p>ತಂತ್ರಾಂಶವನ್ನು ಇನ್ನಷ್ಟು ಸರಳೀಕರಣ ಮತ್ತು ಸಬಲೀಕರಣ ಮಾಡಲಾಗುವುದು. ಈವರೆಗೆ ಇ–ಸ್ವತ್ತು 2.0 ತಂತ್ರಾಂಶದ ಮೂಲಕ 44,508 ಅರ್ಜಿಗಳು ಸಲ್ಲಿಕೆಯಾಗಿವೆ. ಅನುಮೋದನೆಗೊಂಡಿರುವ ಅರ್ಜಿಗಳ ಸಂಖ್ಯೆ 7,978 ಎಂದರು.</p>.<p>ತಂತ್ರಾಂಶ ಸರಿಪಡಿಸುವಂತೆ ಎನ್ಐಸಿಗೆ ಪತ್ರ ಬರೆಯಲಾಗಿದೆ. ಅವರಿಗೆ ಹಣವನ್ನೂ ಬಿಡುಗಡೆ ಮಾಡಲಾಗಿದೆ. ಇದನ್ನು ಸರಿಪಡಿಸಲು ಹೆಚ್ಚು ಮಾನವ ಸಂಪನ್ಮೂಲ ನೀಡುವುದಾಗಿ ಎನ್ಐಸಿ ತಿಳಿಸಿದೆ ಎಂದರು.</p>.<p>ವಿಷಯ ಪ್ರಸ್ತಾಪಿಸಿದ ಕಿರಣ್ ಕೊಡ್ಗಿ, ಗ್ರಾಮಾಂತರ ಪ್ರದೇಶದಲ್ಲಿ ಕಳೆದ ಎರಡು ತಿಂಗಳಿಂದ 11 ಎ ಮತ್ತು 11 ಬಿ ಖಾತಾಗಳ ವಿತರಣೆ ಸಂಪೂರ್ಣ ನಿಂತು ಹೋಗಿದೆ. ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಗ್ರಾಮ ಪಂಚಾಯತ್ಗಳಲ್ಲಿ ಇ–ಸ್ವತ್ತು ಖಾತಾ ವಿತರಣೆಗೆ ತಂತ್ರಾಂಶದಲ್ಲಿ ಸಮಸ್ಯೆ ಇದ್ದು, 15–25 ದಿನಗಳಲ್ಲಿ ಸರಿಪಡಿಸಿ ಖಾತಾ ವಿತರಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ನೀಡಿದರು.</p>.<p>ವಿಧಾನಸಭೆಯಲ್ಲಿ ಬಿಜೆಪಿಯ ಕಿರಣ್ ಕುಮಾರ್ ಕೊಡ್ಗಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಡಿ.1 ರಿಂದ ಇ–ಸ್ವತ್ತು ಖಾತಾ ವಿತರಣೆ ಆರಂಭಿಸಿದರೂ ತಂತ್ರಾಂಶದಲ್ಲಿ ಸಮಸ್ಯೆಯಿಂದ ಖಾತಾ ವಿತರಣೆ ಸಾಧ್ಯವಾಗುತ್ತಿಲ್ಲ ಎಂದು ಪ್ರಿಯಾಂಕ್ ಹೇಳಿದರು.</p>.<p>ತಂತ್ರಾಂಶವನ್ನು ಇನ್ನಷ್ಟು ಸರಳೀಕರಣ ಮತ್ತು ಸಬಲೀಕರಣ ಮಾಡಲಾಗುವುದು. ಈವರೆಗೆ ಇ–ಸ್ವತ್ತು 2.0 ತಂತ್ರಾಂಶದ ಮೂಲಕ 44,508 ಅರ್ಜಿಗಳು ಸಲ್ಲಿಕೆಯಾಗಿವೆ. ಅನುಮೋದನೆಗೊಂಡಿರುವ ಅರ್ಜಿಗಳ ಸಂಖ್ಯೆ 7,978 ಎಂದರು.</p>.<p>ತಂತ್ರಾಂಶ ಸರಿಪಡಿಸುವಂತೆ ಎನ್ಐಸಿಗೆ ಪತ್ರ ಬರೆಯಲಾಗಿದೆ. ಅವರಿಗೆ ಹಣವನ್ನೂ ಬಿಡುಗಡೆ ಮಾಡಲಾಗಿದೆ. ಇದನ್ನು ಸರಿಪಡಿಸಲು ಹೆಚ್ಚು ಮಾನವ ಸಂಪನ್ಮೂಲ ನೀಡುವುದಾಗಿ ಎನ್ಐಸಿ ತಿಳಿಸಿದೆ ಎಂದರು.</p>.<p>ವಿಷಯ ಪ್ರಸ್ತಾಪಿಸಿದ ಕಿರಣ್ ಕೊಡ್ಗಿ, ಗ್ರಾಮಾಂತರ ಪ್ರದೇಶದಲ್ಲಿ ಕಳೆದ ಎರಡು ತಿಂಗಳಿಂದ 11 ಎ ಮತ್ತು 11 ಬಿ ಖಾತಾಗಳ ವಿತರಣೆ ಸಂಪೂರ್ಣ ನಿಂತು ಹೋಗಿದೆ. ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>