<p><strong>ಬೆಂಗಳೂರು</strong>: ‘ನಮೂನೆ-11 ಬಿ ಖಾತೆಗಳನ್ನು ‘ಇ-ಸ್ವತ್ತು 2.0’ ತಂತ್ರಾಂಶದಲ್ಲಿ ಎರಡು ವಾರಗಳ ಅವಧಿಯಲ್ಲಿ ನಮೂನೆ-11ಎ ಖಾತೆಗಳಾಗಿ ಪರಿವರ್ತಿಸಿಕೊಳ್ಳಲು, ಹೊಸ ಬಡಾವಣೆ ಹಾಗೂ ಬಹುಮಹಡಿ (ಅಪಾರ್ಟ್ಮೆಂಟ್) ಕಟ್ಟಡಗಳಿಗೆ ಅರ್ಜಿ ಸಲ್ಲಿಸಲು ಮುಂದಿನ ಒಂದು ತಿಂಗಳು ಅವಕಾಶ ನೀಡಲಾಗುವುದು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.</p>.<p>‘ಇ-ಸ್ವತ್ತು ಪ್ರಕ್ರಿಯೆ ಹಾಗೂ ತಂತ್ರಾಂಶವನ್ನು ಹೆಚ್ಚು ನಾಗರಿಕಸ್ನೇಹಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ತಂತ್ರಾಂಶ ಅಭಿವೃದ್ಧಿಪಡಿಸಲಾಗಿದೆ. ಆನ್ಲೈನ್ ಮೂಲಕ ಈವರೆಗೆ 21,429 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಅನುಮೋದನೆಗಾಗಿ ವಿವಿಧ ಹಂತಗಳಲ್ಲಿ ಬಾಕಿಯಿದೆ’ ಎಂದು ಅವರು ಹೇಳಿದ್ದಾರೆ.</p>.<p>‘ಅರ್ಜಿ ಸಲ್ಲಿಸುವಾಗ ಎದುರಾಗುತ್ತಿರುವ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ತೆಗೆದುಕೊಳ್ಳಲಾಗುತ್ತದೆ. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಇ-ಸ್ವತ್ತು ತಂತ್ರಾಂಶವನ್ನು ಇನ್ನಷ್ಟು ಸರಳೀಕರಿಸಲಾಗುವುದು. ಯಾರೂ ಆತಂಕಪಡುವ ಅಗತ್ಯ ಇಲ್ಲ’ ಎಂದಿದ್ದಾರೆ.</p>.<p>‘ಸಲ್ಲಿಕೆಯಾಗಿರುವ ಅರ್ಜಿಗಳನ್ನು ಅನುಮೋದನೆ ಮಾಡುವ ಪ್ರಕ್ರಿಯೆ ಜ. 1ರಿಂದ ಆರಂಭವಾಗಿದೆ. ಸಾರ್ವಜನಿಕರು ಇ-ಸ್ವತ್ತು 2.0 ತಂತ್ರಾಂಶದ ಆನ್-ಲೈನ್ ಪೋರ್ಟಲ್ ಮೂಲಕ ತೆರಿಗೆ ಮತ್ತು ದಾಖಲೆ ಮುದ್ರಣದ ಶುಲ್ಕ ಪಾವತಿಸಿ ಇ-ಖಾತಾ ಡೌನ್-ಲೋಡ್ ಮಾಡಿಕೊಳ್ಳಬಹುದು’ ಎಂದು ಸಚಿವರು ಹೇಳಿದ್ದಾರೆ.</p>.<p>‘ಇ-ಸ್ವತ್ತಿಗೆ ಅರ್ಜಿ ಸಲ್ಲಿಸಲು ಸಮಯ ನಿಗದಿಪಡಿಸಿಲ್ಲ. ಸಾರ್ವಜನಿಕರು ತಮ್ಮ ಆಸ್ತಿಗೆ ಸಂಬಂಧಿಸಿದಂತೆ ನಮೂನೆಗಳನ್ನು ಗ್ರಾಮ ಪಂಚಾಯಿತಿಗೆ ಭೇಟಿ ನೀಡದೆ, ಇ-ಸ್ವತ್ತು ತಂತ್ರಾಂಶದ ಮೂಲಕ ಪಡೆಯಲು ಕೂಡಾ ಅವಕಾಶ ಕಲ್ಪಿಸಲಾಗಿದೆ. ಸಮಸ್ಯೆಗಳು ಎದುರಾದರೆ ಜಿಲ್ಲಾ ಸಹಾಯವಾಣಿಗೆ ಕರೆ ಮಾಡಬಹುದು’ ಎಂದೂ ಅವರು ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ನಮೂನೆ-11 ಬಿ ಖಾತೆಗಳನ್ನು ‘ಇ-ಸ್ವತ್ತು 2.0’ ತಂತ್ರಾಂಶದಲ್ಲಿ ಎರಡು ವಾರಗಳ ಅವಧಿಯಲ್ಲಿ ನಮೂನೆ-11ಎ ಖಾತೆಗಳಾಗಿ ಪರಿವರ್ತಿಸಿಕೊಳ್ಳಲು, ಹೊಸ ಬಡಾವಣೆ ಹಾಗೂ ಬಹುಮಹಡಿ (ಅಪಾರ್ಟ್ಮೆಂಟ್) ಕಟ್ಟಡಗಳಿಗೆ ಅರ್ಜಿ ಸಲ್ಲಿಸಲು ಮುಂದಿನ ಒಂದು ತಿಂಗಳು ಅವಕಾಶ ನೀಡಲಾಗುವುದು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.</p>.<p>‘ಇ-ಸ್ವತ್ತು ಪ್ರಕ್ರಿಯೆ ಹಾಗೂ ತಂತ್ರಾಂಶವನ್ನು ಹೆಚ್ಚು ನಾಗರಿಕಸ್ನೇಹಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ತಂತ್ರಾಂಶ ಅಭಿವೃದ್ಧಿಪಡಿಸಲಾಗಿದೆ. ಆನ್ಲೈನ್ ಮೂಲಕ ಈವರೆಗೆ 21,429 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಅನುಮೋದನೆಗಾಗಿ ವಿವಿಧ ಹಂತಗಳಲ್ಲಿ ಬಾಕಿಯಿದೆ’ ಎಂದು ಅವರು ಹೇಳಿದ್ದಾರೆ.</p>.<p>‘ಅರ್ಜಿ ಸಲ್ಲಿಸುವಾಗ ಎದುರಾಗುತ್ತಿರುವ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ತೆಗೆದುಕೊಳ್ಳಲಾಗುತ್ತದೆ. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಇ-ಸ್ವತ್ತು ತಂತ್ರಾಂಶವನ್ನು ಇನ್ನಷ್ಟು ಸರಳೀಕರಿಸಲಾಗುವುದು. ಯಾರೂ ಆತಂಕಪಡುವ ಅಗತ್ಯ ಇಲ್ಲ’ ಎಂದಿದ್ದಾರೆ.</p>.<p>‘ಸಲ್ಲಿಕೆಯಾಗಿರುವ ಅರ್ಜಿಗಳನ್ನು ಅನುಮೋದನೆ ಮಾಡುವ ಪ್ರಕ್ರಿಯೆ ಜ. 1ರಿಂದ ಆರಂಭವಾಗಿದೆ. ಸಾರ್ವಜನಿಕರು ಇ-ಸ್ವತ್ತು 2.0 ತಂತ್ರಾಂಶದ ಆನ್-ಲೈನ್ ಪೋರ್ಟಲ್ ಮೂಲಕ ತೆರಿಗೆ ಮತ್ತು ದಾಖಲೆ ಮುದ್ರಣದ ಶುಲ್ಕ ಪಾವತಿಸಿ ಇ-ಖಾತಾ ಡೌನ್-ಲೋಡ್ ಮಾಡಿಕೊಳ್ಳಬಹುದು’ ಎಂದು ಸಚಿವರು ಹೇಳಿದ್ದಾರೆ.</p>.<p>‘ಇ-ಸ್ವತ್ತಿಗೆ ಅರ್ಜಿ ಸಲ್ಲಿಸಲು ಸಮಯ ನಿಗದಿಪಡಿಸಿಲ್ಲ. ಸಾರ್ವಜನಿಕರು ತಮ್ಮ ಆಸ್ತಿಗೆ ಸಂಬಂಧಿಸಿದಂತೆ ನಮೂನೆಗಳನ್ನು ಗ್ರಾಮ ಪಂಚಾಯಿತಿಗೆ ಭೇಟಿ ನೀಡದೆ, ಇ-ಸ್ವತ್ತು ತಂತ್ರಾಂಶದ ಮೂಲಕ ಪಡೆಯಲು ಕೂಡಾ ಅವಕಾಶ ಕಲ್ಪಿಸಲಾಗಿದೆ. ಸಮಸ್ಯೆಗಳು ಎದುರಾದರೆ ಜಿಲ್ಲಾ ಸಹಾಯವಾಣಿಗೆ ಕರೆ ಮಾಡಬಹುದು’ ಎಂದೂ ಅವರು ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>