‘ಬಳ್ಳಾರಿ ಜಿಲ್ಲೆಯಲ್ಲಿ 11,000 ಎಕರೆ ಜಮೀನನ್ನು ಕೈಗಾರಿಕೆಗಳ ಸ್ಥಾಪನೆಗಾಗಿ ಸ್ವಾಧೀನಪಡಿಸಿಕೊಳ್ಳಲಾಗಿದೆ. ಆರ್ಸೆಲರ್ ಮಿತ್ತಲ್, ಬ್ರಹ್ಮಿಣಿ ಸ್ಟೀಲ್ಸ್ ಸೇರಿದಂತೆ ಹಲವು ಕಂಪನಿಗಳಿಗೆ ಜಮೀನು ನೀಡಲಾಗಿತ್ತು. ಒಬ್ಬರೂ ಕೈಗಾರಿಕೆ ಸ್ಥಾಪಿಸಿಲ್ಲ. ಅಂತಹ ಜಮೀನು ರಿಯಲ್ ಎಸ್ಟೇಟ್ ಉದ್ದೇಶಕ್ಕೆ ದುರ್ಬಳಕೆಯಾಗುತ್ತಿದೆ. ತಕ್ಷಣ ಈ ಜಮೀನುಗಳನ್ನು ವಶಕ್ಕೆ ಪಡೆಯಬೇಕು. ಕೈಗಾರಿಕೆಗಳನ್ನು ಸ್ಥಾಪಿಸುವವರಿಗೆ ನೀಡಬೇಕು ಅಥವಾ ರೈತರಿಗೆ ಮರಳಿಸಬೇಕು’ ಎಂದು ಒತ್ತಾಯಿಸಿದರು.