<p><strong>ಶಿವಮೊಗ್ಗ:</strong> ಜಿಲ್ಲೆಯ ಹಲವೆಡೆ ಗುರುವಾರ ರಾತ್ರಿ ಭಾರಿ ಸದ್ದಿನೊಂದಿಗೆ ಭೂಮಿ ಕಂಪಿಸಿದ್ದು, ಜನರು ಮನೆಗಳಿಂದ ಹೊರಬಂದು ತಂಡೋಪತಂಡವಾಗಿ ಬೀದಿಗಳಲ್ಲಿ ನಿಂತಿದ್ದರು.</p>.<p>ರಾತ್ರಿ 10ರ ನಂತರ ಘಟನೆ ನಡೆದಿದ್ದು, ಹಲವು ಮನೆಗಳ ಕಿಟಕಿ, ಬಾಗಿಲುಗಳು ಮುಚ್ಚಿಕೊಂಡಿವೆ. ಗಾಜುಗಳು ಒಡೆದಿವೆ. ಕೆಲವು ಕಡೆ ಸಣ್ಣದಾಗಿ ಗೋಡೆಗಳು ಬಿರುಕು ಬಿಟ್ಟಿವೆ. ಪಾತ್ರೆಗಳು ಅಲ್ಲಾಡಿವೆ.</p>.<p>ಶಿವಮೊಗ್ಗ, ಭದ್ರಾವತಿ ನಗರಗಳಲ್ಲಿ ಹೆಚ್ಚಿನ ಶಬ್ದ ಕೇಳಿಬಂದಿದೆ. ಹಲವು ಕಟ್ಟಡಗಳು ಅಲ್ಲಾಡಿವೆ. ತೀರ್ಥಹಳ್ಳಿ, ಶಿಕಾರಿಪುರ, ಸಾಗರ, ಹೊಸನಗರದ ಹಲವು ಗ್ರಾಮಗಳಲ್ಲೂ ಜನರಿಗೆ ಭೂಕಂಪನದ ಅನುಭವವಾಗಿದೆ. ಹಳ್ಳಿಗಳಲ್ಲೂ ಜನರು ಭಯಭೀತರಾಗಿ ಹೊರಬಂದು ಶಬ್ದ ಬಂದ ದಿಕ್ಕಿನತ್ತ ಸಾಗಿದ್ದಾರೆ. ಎದುರಿಗೆ ಸಿಕ್ಕವರಿಗೆ ಈ ಬಗ್ಗೆ ವಿಚಾರಿಸಿದ್ದಾರೆ.</p>.<p>ಶಿವಮೊಗ್ಗದ ಜ್ಯೂವೆಲ್ ರಾಕ್ ಹೋಟೆಲ್ನ ಚಾವಣಿ ಕುಸಿದಿದೆ. ಹೊಳೆಹೊನ್ನೂರು ಸುತ್ತಮುತ್ತಲಿನ ಗ್ರಾಮಗಳಲ್ಲಿನ ಭಾರಿ ಶಬ್ದಕ್ಕೆ ಜನ ಮನೆಯಿಂದ ಹೊರಗೆ ಬಂದಿದ್ದಾರೆ. ಆನಂದಪುರ ಸುತ್ತಮುತ್ತ ಬಾಗಿಲು ಬಡಿತದ ಶಬ್ದವಾಗಿದೆ.</p>.<p>ರಿಪ್ಪನ್ಪೇಟೆಯಲ್ಲೂ ಭಾರಿ ಸದ್ದಿನೊಂದಿಗೆ ಭೂಮಿ ಕಂಪಿಸಿದೆ. ಕೆಲವೆಡೆ ಮನೆಯ ಪಾತ್ರೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಮನೆಯಲ್ಲಿ ಇದ್ದವರು ಗಾಬರಿಯಿಂದ ಹೊರಗೆ ಓಡಿಬಂದಿದ್ದಾರೆ. ಹೋಬಳಿಯ ಅರಸಾಳು, ಕೆರೆಹಳ್ಳಿ, ಸೂಡೂರುಗೇಟ್, ಜೇನಿ, ಹೆದ್ದಾರಿಪುರ, ಬೆಳ್ಳೂರು, ಆಯನೂರು, ಹಾರನಹಳ್ಳಿಯಲ್ಲೂ ಭೂಕಂಪನದ ಅನುಭವವಾಗಿದೆ.</p>.<p>ಭೂಕಂಪನದ ತೀವ್ರತೆಗೆ ಕುಂಸಿ ಸಮೀಪದ ಚೋರಡಿಯ ಮುಖ್ಯರಸ್ತೆ ಬಿರುಕು ಬಿಟ್ಟಿದೆ.</p>.<p class="Subhead">ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆ: ಭೂಮಿ ಕಂಪಿಸಿದಾಗ ರಸ್ತೆಯ ಮೇಲಿದ್ದ ಕಾರುಗಳು, ಜನರು ಒಮ್ಮೆ ಅಲ್ಲಾಡಿದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಜಿಲ್ಲೆಯ ಹಲವೆಡೆ ಗುರುವಾರ ರಾತ್ರಿ ಭಾರಿ ಸದ್ದಿನೊಂದಿಗೆ ಭೂಮಿ ಕಂಪಿಸಿದ್ದು, ಜನರು ಮನೆಗಳಿಂದ ಹೊರಬಂದು ತಂಡೋಪತಂಡವಾಗಿ ಬೀದಿಗಳಲ್ಲಿ ನಿಂತಿದ್ದರು.</p>.<p>ರಾತ್ರಿ 10ರ ನಂತರ ಘಟನೆ ನಡೆದಿದ್ದು, ಹಲವು ಮನೆಗಳ ಕಿಟಕಿ, ಬಾಗಿಲುಗಳು ಮುಚ್ಚಿಕೊಂಡಿವೆ. ಗಾಜುಗಳು ಒಡೆದಿವೆ. ಕೆಲವು ಕಡೆ ಸಣ್ಣದಾಗಿ ಗೋಡೆಗಳು ಬಿರುಕು ಬಿಟ್ಟಿವೆ. ಪಾತ್ರೆಗಳು ಅಲ್ಲಾಡಿವೆ.</p>.<p>ಶಿವಮೊಗ್ಗ, ಭದ್ರಾವತಿ ನಗರಗಳಲ್ಲಿ ಹೆಚ್ಚಿನ ಶಬ್ದ ಕೇಳಿಬಂದಿದೆ. ಹಲವು ಕಟ್ಟಡಗಳು ಅಲ್ಲಾಡಿವೆ. ತೀರ್ಥಹಳ್ಳಿ, ಶಿಕಾರಿಪುರ, ಸಾಗರ, ಹೊಸನಗರದ ಹಲವು ಗ್ರಾಮಗಳಲ್ಲೂ ಜನರಿಗೆ ಭೂಕಂಪನದ ಅನುಭವವಾಗಿದೆ. ಹಳ್ಳಿಗಳಲ್ಲೂ ಜನರು ಭಯಭೀತರಾಗಿ ಹೊರಬಂದು ಶಬ್ದ ಬಂದ ದಿಕ್ಕಿನತ್ತ ಸಾಗಿದ್ದಾರೆ. ಎದುರಿಗೆ ಸಿಕ್ಕವರಿಗೆ ಈ ಬಗ್ಗೆ ವಿಚಾರಿಸಿದ್ದಾರೆ.</p>.<p>ಶಿವಮೊಗ್ಗದ ಜ್ಯೂವೆಲ್ ರಾಕ್ ಹೋಟೆಲ್ನ ಚಾವಣಿ ಕುಸಿದಿದೆ. ಹೊಳೆಹೊನ್ನೂರು ಸುತ್ತಮುತ್ತಲಿನ ಗ್ರಾಮಗಳಲ್ಲಿನ ಭಾರಿ ಶಬ್ದಕ್ಕೆ ಜನ ಮನೆಯಿಂದ ಹೊರಗೆ ಬಂದಿದ್ದಾರೆ. ಆನಂದಪುರ ಸುತ್ತಮುತ್ತ ಬಾಗಿಲು ಬಡಿತದ ಶಬ್ದವಾಗಿದೆ.</p>.<p>ರಿಪ್ಪನ್ಪೇಟೆಯಲ್ಲೂ ಭಾರಿ ಸದ್ದಿನೊಂದಿಗೆ ಭೂಮಿ ಕಂಪಿಸಿದೆ. ಕೆಲವೆಡೆ ಮನೆಯ ಪಾತ್ರೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಮನೆಯಲ್ಲಿ ಇದ್ದವರು ಗಾಬರಿಯಿಂದ ಹೊರಗೆ ಓಡಿಬಂದಿದ್ದಾರೆ. ಹೋಬಳಿಯ ಅರಸಾಳು, ಕೆರೆಹಳ್ಳಿ, ಸೂಡೂರುಗೇಟ್, ಜೇನಿ, ಹೆದ್ದಾರಿಪುರ, ಬೆಳ್ಳೂರು, ಆಯನೂರು, ಹಾರನಹಳ್ಳಿಯಲ್ಲೂ ಭೂಕಂಪನದ ಅನುಭವವಾಗಿದೆ.</p>.<p>ಭೂಕಂಪನದ ತೀವ್ರತೆಗೆ ಕುಂಸಿ ಸಮೀಪದ ಚೋರಡಿಯ ಮುಖ್ಯರಸ್ತೆ ಬಿರುಕು ಬಿಟ್ಟಿದೆ.</p>.<p class="Subhead">ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆ: ಭೂಮಿ ಕಂಪಿಸಿದಾಗ ರಸ್ತೆಯ ಮೇಲಿದ್ದ ಕಾರುಗಳು, ಜನರು ಒಮ್ಮೆ ಅಲ್ಲಾಡಿದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>