<p><strong>ಶ್ರೀರಂಗಪಟ್ಟಣ:</strong> ತಾಲ್ಲೂಕಿನ ಕೆಆರ್ಎಸ್ ಅಣೆಕಟ್ಟೆ ಆಸುಪಾಸಿನಲ್ಲಿ ಗುರುವಾರ ಮಧ್ಯಾಹ್ನ 1.45ರ ವೇಳೆಗೆ ಭೂಮಿ ಕಂಪಿಸಿದ ಅನುಭವವಾಗಿದೆ.</p>.<p>ಕೆಆರ್ಎಸ್ ಜನವಸತಿ ಪ್ರದೇಶ, ಹುಲಿಕೆರೆ, ಬೆಳಗೊಳ, ಹೊಸ ಉಂಡವಾಡಿ, ಮಜ್ಜಿಗೆಪುರ, ಬಸ್ತಿಪುರ, ಹೊಂಗಹಳ್ಳಿ ಸುತ್ತಮುತ್ತ ಭೂಮಿ ಕಂಪಿಸಿದೆ. ಮೇಲಿಂದ ಮೇಲೆ ಎರಡು ಬಾರಿ ಕೆಲ ಕ್ಷಣ ಭೂಮಿ ನಡುಗಿತು ಎಂದು ಕೆಆರ್ಎಸ್ ಗ್ರಾಮ ಪಂಚಾಯಿತಿ ಸದಸ್ಯ ವಿಜಯಕುಮಾರ್, ಬೆಳಗೊಳ ರವಿ ತಿಳಿಸಿದರು.</p>.<p>ಕೆಲ ತಿಂಗಳ ಹಿಂದೆ ಜಲಾಶಯದ ಆಸುಪಾಸಿನಲ್ಲಿ ಭೂಮಿ ಕಂಪಿಸಿದ ಅನುಭವ ಆಗಿತ್ತು. ಇದೀಗ ಮತ್ತೆ ಭೂಮಿ ನಡುಗಿದ್ದು, ಜನರಲ್ಲಿ ಆತಂಕ ಉಂಟಾಗಿದೆ. ಭೂ ವಿಜ್ಞಾನಿಗಳು ಪರಿಶೀಲನೆ ನಡೆಸಿದ್ದಾರೆ.</p>.<p>‘ಕೆಆರ್ಎಸ್ ಬಳಿ ಭೂಮಿ ನಡುಗಿದ್ದು ನಿಜ. ಆದರೆ, ಇಲ್ಲಿನ ಭೂಕಂಪ ಮಾಪನ ಕೇಂದ್ರದಲ್ಲಿ ಅದು ದಾಖಲಾಗಿಲ್ಲ. ಈ ಹಿಂದೆ ಅಣೆಕಟ್ಟೆ ಬಳಿ ಭೂಮಿ ನಡುಗಿದ್ದಾಗಲೂ ಕಂಪನದ ತೀವ್ರತೆ ದಾಖಲಾಗಿರಲಿಲ್ಲ. ಆ ಬಗ್ಗೆ ಪರಿಶೀಲನೆ ನಡೆಸಿದ್ದ ತಜ್ಞರು ಯಾವುದೇ ವರದಿ ನೀಡಿರಲಿಲ್ಲ’ ಎಂದು ಕಾವೇರಿ ನೀರಾವರಿ ನಿಗಮದ ಸಹಾಯಕ ಎಂಜಿನಿಯರ್ ವಾಸುದೇವ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ:</strong> ತಾಲ್ಲೂಕಿನ ಕೆಆರ್ಎಸ್ ಅಣೆಕಟ್ಟೆ ಆಸುಪಾಸಿನಲ್ಲಿ ಗುರುವಾರ ಮಧ್ಯಾಹ್ನ 1.45ರ ವೇಳೆಗೆ ಭೂಮಿ ಕಂಪಿಸಿದ ಅನುಭವವಾಗಿದೆ.</p>.<p>ಕೆಆರ್ಎಸ್ ಜನವಸತಿ ಪ್ರದೇಶ, ಹುಲಿಕೆರೆ, ಬೆಳಗೊಳ, ಹೊಸ ಉಂಡವಾಡಿ, ಮಜ್ಜಿಗೆಪುರ, ಬಸ್ತಿಪುರ, ಹೊಂಗಹಳ್ಳಿ ಸುತ್ತಮುತ್ತ ಭೂಮಿ ಕಂಪಿಸಿದೆ. ಮೇಲಿಂದ ಮೇಲೆ ಎರಡು ಬಾರಿ ಕೆಲ ಕ್ಷಣ ಭೂಮಿ ನಡುಗಿತು ಎಂದು ಕೆಆರ್ಎಸ್ ಗ್ರಾಮ ಪಂಚಾಯಿತಿ ಸದಸ್ಯ ವಿಜಯಕುಮಾರ್, ಬೆಳಗೊಳ ರವಿ ತಿಳಿಸಿದರು.</p>.<p>ಕೆಲ ತಿಂಗಳ ಹಿಂದೆ ಜಲಾಶಯದ ಆಸುಪಾಸಿನಲ್ಲಿ ಭೂಮಿ ಕಂಪಿಸಿದ ಅನುಭವ ಆಗಿತ್ತು. ಇದೀಗ ಮತ್ತೆ ಭೂಮಿ ನಡುಗಿದ್ದು, ಜನರಲ್ಲಿ ಆತಂಕ ಉಂಟಾಗಿದೆ. ಭೂ ವಿಜ್ಞಾನಿಗಳು ಪರಿಶೀಲನೆ ನಡೆಸಿದ್ದಾರೆ.</p>.<p>‘ಕೆಆರ್ಎಸ್ ಬಳಿ ಭೂಮಿ ನಡುಗಿದ್ದು ನಿಜ. ಆದರೆ, ಇಲ್ಲಿನ ಭೂಕಂಪ ಮಾಪನ ಕೇಂದ್ರದಲ್ಲಿ ಅದು ದಾಖಲಾಗಿಲ್ಲ. ಈ ಹಿಂದೆ ಅಣೆಕಟ್ಟೆ ಬಳಿ ಭೂಮಿ ನಡುಗಿದ್ದಾಗಲೂ ಕಂಪನದ ತೀವ್ರತೆ ದಾಖಲಾಗಿರಲಿಲ್ಲ. ಆ ಬಗ್ಗೆ ಪರಿಶೀಲನೆ ನಡೆಸಿದ್ದ ತಜ್ಞರು ಯಾವುದೇ ವರದಿ ನೀಡಿರಲಿಲ್ಲ’ ಎಂದು ಕಾವೇರಿ ನೀರಾವರಿ ನಿಗಮದ ಸಹಾಯಕ ಎಂಜಿನಿಯರ್ ವಾಸುದೇವ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>