ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಭ್ರಷ್ಟಾಚಾರದ ಕುರಿತು ಜಾಹೀರಾತು: ಕಾಂಗ್ರೆಸ್‌ ಪಕ್ಷಕ್ಕೆ ಆಯೋಗದ ನೋಟಿಸ್‌

Published 6 ಮೇ 2023, 19:35 IST
Last Updated 6 ಮೇ 2023, 19:35 IST
ಅಕ್ಷರ ಗಾತ್ರ

ನವದೆಹಲಿ : ಕರ್ನಾಟಕದಲ್ಲಿ ಬಿಜೆಪಿ ಆಡಳಿತಾವಧಿಯಲ್ಲಿನ ಭ್ರಷ್ಟಾಚಾರ, ವಿವಿಧ ಹುದ್ದೆಗಳ ನೇಮಕಕ್ಕೆ ಸಂಬಂಧಿಸಿದ ದರಪಟ್ಟಿಯನ್ನು ಉಲ್ಲೇಖಿಸಿ ಕಾಂಗ್ರೆಸ್‌ ಪಕ್ಷವು ನೀಡಿದ್ದ ಜಾಹೀರಾತು ಪ್ರಶ್ನಿಸಿ ಬಿಜೆಪಿಯು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಈ ದೂರು ಆಧರಿಸಿ ಆಯೋಗ ಕಾಂಗ್ರೆಸ್ ಪಕ್ಷಕ್ಕೆ ನೋಟಿಸ್‌ ಜಾರಿ ಮಾಡಿದೆ. ಜಾಹೀರಾತಿನ ಅಂಶಗಳನ್ನು ಸಮರ್ಥಿಸುವ ಪೂರಕ ಸಾಕ್ಷ್ಯಗಳನ್ನು ಭಾನುವಾರ ಸಂಜೆಯೊಳಗೆ ಸಲ್ಲಿಸಬೇಕು ಎಂದೂ ಸೂಚಿಸಿದೆ.

ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ ಎಂದು ಆರೋಪಿಸಿರುವ ಕಾಂಗ್ರೆಸ್‌ ಪಕ್ಷವು, ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ 2019–2023 ಅವಧಿಯ ಅಂಶಗಳನ್ನು ಉಲ್ಲೇಖಿಸಿ ಜಾಹೀರಾತು ಬಿಡುಗಡೆ ಮಾಡಿತ್ತು. ಬಿಜೆಪಿ ಸರ್ಕಾರವನ್ನು ಟ್ರಬಲ್ ಎಂಜಿನ್‌ ಸರ್ಕಾರ ಎಂದು ಅದರಲ್ಲಿ ಟೀಕಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT