ದುಬೈಯಲ್ಲಿ ಇದೇ 29ರಿಂದ ಡಿಸೆಂಬರ್ 3ರ ವರೆಗೆ ನಡೆಯಲಿರುವ ವಾರ್ಷಿಕ ಅಂತರ ರಾಷ್ಟ್ರೀಯ ಹವಾಮಾನ ಶೃಂಗಸಭೆಯಲ್ಲಿ ಭಾಗವಹಿಸಲು ಅನುಮತಿ ನೀಡುವಂತೆ ಶಿವಕುಮಾರ್ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ವಿಕಾಸ್ ದುಲ್ ಅವರು ಷರತ್ತುಬದ್ಧ ಅನುಮತಿ ನೀಡಿದರು. ‘ಆರೋಪಿ ವಿದೇಶಕ್ಕೆ ಪ್ರಯಾಣಿಸುವಾಗ ಯಾವುದೇ ಸಹ-ಆರೋಪಿಗಳನ್ನು ಸಂಪರ್ಕಿಸಲು ಪ್ರಯತ್ನಿಸಬಾರದು. ಪ್ರಸ್ತುತ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಬಾರದು’ ಎಂದೂ ನ್ಯಾಯಾಧೀಶರು ಹೇಳಿದರು.