<p><strong>ನವದೆಹಲಿ</strong>: ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ನ್ಯಾಯಾಂಗ ಪರಿಶೀಲನೆಯಿಲ್ಲದೆ ಆಸ್ತಿ ವಶಪಡಿಸಿಕೊಳ್ಳುವ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರ ಪ್ರಶ್ನಿಸಿ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಯ ಕುರಿತು ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ಸೂಚಿಸಿದೆ.</p>.<p>ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಎ.ಎಸ್. ಚಂದೂರ್ಕರ್ ಅವರ ಪೀಠವು ನೋಟಿಸ್ ಜಾರಿಗೊಳಿಸಿದೆ. ಪಿಎಂಎಲ್ಎಯ ತೀರ್ಪಿನ ಸಾಂವಿಧಾನಿಕತೆ ಪ್ರಶ್ನಿಸಿ ಸಲ್ಲಿಕೆಯಾಗಿರುವ ಇತರ ಅರ್ಜಿಗಳ ಜತೆಗೆ ಈ ಅರ್ಜಿಯನ್ನು ಒಟ್ಟಿಗೆ ವಿಚಾರಣೆ ನಡೆಸಲಾಗುವುದು ಎಂದೂ ತಿಳಿಸಿದೆ. </p>.<p>ನ್ಯಾಯಮೂರ್ತಿ ನರಸಿಂಹ, ‘ಕಾಯ್ದೆಯಲ್ಲಿ (ಪಿಎಂಎಲ್ಎ) ದೋಷವಿದೆ ಎಂಬುದು ಕಂಡುಬಂದಿದೆ. ನ್ಯಾಯಾಂಗೇತರ ಸದಸ್ಯರು ಆಸ್ತಿ ಹಕ್ಕುಗಳು ಮತ್ತು ಸಾಂವಿಧಾನಿಕ ರಕ್ಷಣೆಗಳನ್ನು ಒಳಗೊಂಡ ಸಂಕೀರ್ಣ ವಿಷಯಗಳ ಬಗ್ಗೆ ಹೇಗೆ ನಿರ್ಣಯ ತೆಗೆದುಕೊಳ್ಳಲು ಸಾಧ್ಯ’ ಎಂದು ಪ್ರಶ್ನಿಸಿದರು. </p>.<p>ಪಿಎಂಎಲ್ಎಯ ಸೆಕ್ಷನ್ 20 ಮತ್ತು 21ರ ಸಿಂಧುತ್ವ ಪ್ರಶ್ನಿಸಿ ಅರ್ಜಿದಾರರು ಮಾಡಿದ ಎಲ್ಲ ಅರ್ಜಿಗಳ ಕುರಿತು ಪೀಠವು ನೋಟಿಸ್ ಜಾರಿ ಮಾಡಿತು. ಪಿಎಂಎಲ್ಎಯ ಸೆಕ್ಷನ್ 6ರ ಸಿಂಧುತ್ವದ ಕುರಿತು ಬಾಕಿ ಇರುವ ಪ್ರಕರಣಗಳ ಜೊತೆಗೆ ಈ ಅರ್ಜಿ ವಿಚಾರಣೆ ನಡೆಸಬೇಕು ಎಂದು ಪೀಠ ನಿರ್ದೇಶಿಸಿದೆ.</p>.<p>ವೀರೇಂದ್ರ ಪರ ವಾದ ಮಂಡಿಸಿದ ಹಿರಿಯ ವಕೀಲರಾದ ಮುಕುಲ್ ರೋಹಟಗಿ ಹಾಗೂ ರಂಜಿತ್ ಕುಮಾರ್, ‘ಈ ಕಾನೂನಿನ ನಿಯಮಗಳು ಹೊಣೆಗಾರಿಕೆಯಿಲ್ಲದೆ ವರ್ತಿಸಲು ಇ.ಡಿ.ಗೆ ಅವಕಾಶ ನೀಡುತ್ತವೆ. ಇದರಿಂದ ವ್ಯಾಪಕ ಅಧಿಕಾರ ದುರುಪಯೋಗ ಆಗುತ್ತಿದೆ’ ಎಂದು ದೂರಿದರು. </p>.<p>‘ಪಿಎಂಎಲ್ಎಯ ಸೆಕ್ಷನ್ 20 ಮತ್ತು 21 ಅಡಿಯಲ್ಲಿ ಇ.ಡಿಗೆ 180 ದಿನ ಯಾವುದೇ ಕಾರಣ ನೀಡದೆ ಸ್ವತ್ತು ಮತ್ತು ದಾಖಲೆಗಳನ್ನು ಜಪ್ತಿಯಲ್ಲಿರಿಸಿಕೊಳ್ಳಲು ಅಧಿಕಾರ ಇದೆ. ಪಿಎಂಎಲ್ಎನ ತೀರ್ಪು ನೀಡುವ ಪ್ರಾಧಿಕಾರದಲ್ಲಿ ಸದ್ಯ ಏಕಸದಸ್ಯರಿದ್ದಾರೆ ಮತ್ತು ಅವರಿಗೆ ನ್ಯಾಯಾಂಗದ ಹಿನ್ನೆಲೆಯಿಲ್ಲ. ಇಡೀ ದೇಶಕ್ಕೆ ಒಬ್ಬ ವೆಚ್ಚ ಪರಿಶೋಧಕರು ತೀರ್ಪು ನೀಡುವ ಪ್ರಾಧಿಕಾರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇ.ಡಿ. ಅಧಿಕಾರಿಗಳು ಇದುವರೆಗೆ ಮಾಡಿರುವ ಜಪ್ತಿಗಳ ಪೈಕಿ ಶೇ 99 ಪ್ರತಿಶತವನ್ನು ಅವರೇ ದೃಢೀಕರಿಸಿದ್ದಾರೆ’ ಎಂದು ಪೀಠದ ಗಮನಕ್ಕೆ ತಂದರು. </p>.<p>ಈ ಅಂಕಿ ಅಂಶಗಳನ್ನು ಜಾರಿ ನಿರ್ದೇಶನಾಲಯದ ವೆಬ್ಸೈಟ್ನಿಂದಲೇ ಪಡೆಯಲಾಗಿದೆ. ಪ್ರಾಧಿಕಾರವು ವಿವೇಚನೆ ಬಳಸದೆ ಕೇವಲ ಅನುಮೋದಿಸುವ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬುದಕ್ಕೆ ಇದು ಸಾಕ್ಷಿ ಎಂದರು. </p>.<p>2016ರಲ್ಲಿ ವೀರೇಂದ್ರ (ಪಪ್ಪಿ) ಅವರ ಚಳ್ಳಕೆರೆ ಮನೆಯಲ್ಲಿ ಶೋಧ ನಡೆಸಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು, ಅಪಾರ ಪ್ರಮಾಣದ ನಗದು ಮತ್ತು ಚಿನ್ನಾಭರಣ ಪತ್ತೆ ಮಾಡಿದ್ದರು. ಘೋಷಿತ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಆರೋಪದಲ್ಲಿ ಪ್ರಕರಣ ದಾಖಲಾಗಿತ್ತು. ಇದೇ ಪ್ರಕರಣ ಮತ್ತು ಪೂರಕ ದೂರುಗಳ ಆಧಾರದಲ್ಲಿ ಜಾರಿ ನಿರ್ದೇಶನಾಲಯವು, ವೀರೇಂದ್ರ ಅವರಿಗೆ ಸೇರಿದ ಮನೆ ಮತ್ತು ದೇಶದ ವಿವಿಧೆಡೆ ಇರುವ ಕ್ಯಾಸಿನೊಗಳಲ್ಲಿ ಈ ವರ್ಷ ಶೋಧ ನಡೆಸಿತ್ತು. ಆನ್ಲೈನ್ ಮತ್ತು ಆಫ್ಲೈನ್ನಲ್ಲಿ ಬೆಟ್ಟಿಂಗ್ ನಡೆಸಿದ ಆರೋಪದಲ್ಲಿ ವೀರೇಂದ್ರ ಅವರನ್ನು ಬಂಧಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ನ್ಯಾಯಾಂಗ ಪರಿಶೀಲನೆಯಿಲ್ಲದೆ ಆಸ್ತಿ ವಶಪಡಿಸಿಕೊಳ್ಳುವ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರ ಪ್ರಶ್ನಿಸಿ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಯ ಕುರಿತು ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ಸೂಚಿಸಿದೆ.</p>.<p>ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಎ.ಎಸ್. ಚಂದೂರ್ಕರ್ ಅವರ ಪೀಠವು ನೋಟಿಸ್ ಜಾರಿಗೊಳಿಸಿದೆ. ಪಿಎಂಎಲ್ಎಯ ತೀರ್ಪಿನ ಸಾಂವಿಧಾನಿಕತೆ ಪ್ರಶ್ನಿಸಿ ಸಲ್ಲಿಕೆಯಾಗಿರುವ ಇತರ ಅರ್ಜಿಗಳ ಜತೆಗೆ ಈ ಅರ್ಜಿಯನ್ನು ಒಟ್ಟಿಗೆ ವಿಚಾರಣೆ ನಡೆಸಲಾಗುವುದು ಎಂದೂ ತಿಳಿಸಿದೆ. </p>.<p>ನ್ಯಾಯಮೂರ್ತಿ ನರಸಿಂಹ, ‘ಕಾಯ್ದೆಯಲ್ಲಿ (ಪಿಎಂಎಲ್ಎ) ದೋಷವಿದೆ ಎಂಬುದು ಕಂಡುಬಂದಿದೆ. ನ್ಯಾಯಾಂಗೇತರ ಸದಸ್ಯರು ಆಸ್ತಿ ಹಕ್ಕುಗಳು ಮತ್ತು ಸಾಂವಿಧಾನಿಕ ರಕ್ಷಣೆಗಳನ್ನು ಒಳಗೊಂಡ ಸಂಕೀರ್ಣ ವಿಷಯಗಳ ಬಗ್ಗೆ ಹೇಗೆ ನಿರ್ಣಯ ತೆಗೆದುಕೊಳ್ಳಲು ಸಾಧ್ಯ’ ಎಂದು ಪ್ರಶ್ನಿಸಿದರು. </p>.<p>ಪಿಎಂಎಲ್ಎಯ ಸೆಕ್ಷನ್ 20 ಮತ್ತು 21ರ ಸಿಂಧುತ್ವ ಪ್ರಶ್ನಿಸಿ ಅರ್ಜಿದಾರರು ಮಾಡಿದ ಎಲ್ಲ ಅರ್ಜಿಗಳ ಕುರಿತು ಪೀಠವು ನೋಟಿಸ್ ಜಾರಿ ಮಾಡಿತು. ಪಿಎಂಎಲ್ಎಯ ಸೆಕ್ಷನ್ 6ರ ಸಿಂಧುತ್ವದ ಕುರಿತು ಬಾಕಿ ಇರುವ ಪ್ರಕರಣಗಳ ಜೊತೆಗೆ ಈ ಅರ್ಜಿ ವಿಚಾರಣೆ ನಡೆಸಬೇಕು ಎಂದು ಪೀಠ ನಿರ್ದೇಶಿಸಿದೆ.</p>.<p>ವೀರೇಂದ್ರ ಪರ ವಾದ ಮಂಡಿಸಿದ ಹಿರಿಯ ವಕೀಲರಾದ ಮುಕುಲ್ ರೋಹಟಗಿ ಹಾಗೂ ರಂಜಿತ್ ಕುಮಾರ್, ‘ಈ ಕಾನೂನಿನ ನಿಯಮಗಳು ಹೊಣೆಗಾರಿಕೆಯಿಲ್ಲದೆ ವರ್ತಿಸಲು ಇ.ಡಿ.ಗೆ ಅವಕಾಶ ನೀಡುತ್ತವೆ. ಇದರಿಂದ ವ್ಯಾಪಕ ಅಧಿಕಾರ ದುರುಪಯೋಗ ಆಗುತ್ತಿದೆ’ ಎಂದು ದೂರಿದರು. </p>.<p>‘ಪಿಎಂಎಲ್ಎಯ ಸೆಕ್ಷನ್ 20 ಮತ್ತು 21 ಅಡಿಯಲ್ಲಿ ಇ.ಡಿಗೆ 180 ದಿನ ಯಾವುದೇ ಕಾರಣ ನೀಡದೆ ಸ್ವತ್ತು ಮತ್ತು ದಾಖಲೆಗಳನ್ನು ಜಪ್ತಿಯಲ್ಲಿರಿಸಿಕೊಳ್ಳಲು ಅಧಿಕಾರ ಇದೆ. ಪಿಎಂಎಲ್ಎನ ತೀರ್ಪು ನೀಡುವ ಪ್ರಾಧಿಕಾರದಲ್ಲಿ ಸದ್ಯ ಏಕಸದಸ್ಯರಿದ್ದಾರೆ ಮತ್ತು ಅವರಿಗೆ ನ್ಯಾಯಾಂಗದ ಹಿನ್ನೆಲೆಯಿಲ್ಲ. ಇಡೀ ದೇಶಕ್ಕೆ ಒಬ್ಬ ವೆಚ್ಚ ಪರಿಶೋಧಕರು ತೀರ್ಪು ನೀಡುವ ಪ್ರಾಧಿಕಾರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇ.ಡಿ. ಅಧಿಕಾರಿಗಳು ಇದುವರೆಗೆ ಮಾಡಿರುವ ಜಪ್ತಿಗಳ ಪೈಕಿ ಶೇ 99 ಪ್ರತಿಶತವನ್ನು ಅವರೇ ದೃಢೀಕರಿಸಿದ್ದಾರೆ’ ಎಂದು ಪೀಠದ ಗಮನಕ್ಕೆ ತಂದರು. </p>.<p>ಈ ಅಂಕಿ ಅಂಶಗಳನ್ನು ಜಾರಿ ನಿರ್ದೇಶನಾಲಯದ ವೆಬ್ಸೈಟ್ನಿಂದಲೇ ಪಡೆಯಲಾಗಿದೆ. ಪ್ರಾಧಿಕಾರವು ವಿವೇಚನೆ ಬಳಸದೆ ಕೇವಲ ಅನುಮೋದಿಸುವ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬುದಕ್ಕೆ ಇದು ಸಾಕ್ಷಿ ಎಂದರು. </p>.<p>2016ರಲ್ಲಿ ವೀರೇಂದ್ರ (ಪಪ್ಪಿ) ಅವರ ಚಳ್ಳಕೆರೆ ಮನೆಯಲ್ಲಿ ಶೋಧ ನಡೆಸಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು, ಅಪಾರ ಪ್ರಮಾಣದ ನಗದು ಮತ್ತು ಚಿನ್ನಾಭರಣ ಪತ್ತೆ ಮಾಡಿದ್ದರು. ಘೋಷಿತ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಆರೋಪದಲ್ಲಿ ಪ್ರಕರಣ ದಾಖಲಾಗಿತ್ತು. ಇದೇ ಪ್ರಕರಣ ಮತ್ತು ಪೂರಕ ದೂರುಗಳ ಆಧಾರದಲ್ಲಿ ಜಾರಿ ನಿರ್ದೇಶನಾಲಯವು, ವೀರೇಂದ್ರ ಅವರಿಗೆ ಸೇರಿದ ಮನೆ ಮತ್ತು ದೇಶದ ವಿವಿಧೆಡೆ ಇರುವ ಕ್ಯಾಸಿನೊಗಳಲ್ಲಿ ಈ ವರ್ಷ ಶೋಧ ನಡೆಸಿತ್ತು. ಆನ್ಲೈನ್ ಮತ್ತು ಆಫ್ಲೈನ್ನಲ್ಲಿ ಬೆಟ್ಟಿಂಗ್ ನಡೆಸಿದ ಆರೋಪದಲ್ಲಿ ವೀರೇಂದ್ರ ಅವರನ್ನು ಬಂಧಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>