<p><strong>ಬೆಂಗಳೂರು</strong>: ವೈದ್ಯಕೀಯ ಪದವಿ ವಿದ್ಯಾರ್ಥಿಗಳ ₹33.34 ಕೋಟಿ ಮೊತ್ತದಷ್ಟು ಸ್ಟೈಫಂಡ್ ಕಬಳಿಸಿದ್ದ ಪ್ರಕರಣದಲ್ಲಿ ಹೈದರಾಬಾದ್ ಎಜುಕೇಶನ್ ಸೊಸೈಟಿಯ ಭೀಮಾಶಂಕರ್ ಬಿಳಗುಂಡಿ, ಮಲ್ಲಣ್ಣ ಎಸ್.ಮದ್ದಾರ್ಕಿ ವಿರುದ್ಧ ಜಾರಿ ನಿರ್ದೇಶನಾಲಯವು ಪ್ರಾಸಿಕ್ಯೂಷನ್ ದೂರು ದಾಖಲಿಸಿದೆ.</p>.<p>ಮಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದಲ್ಲಿ ಜಾರಿ ನಿರ್ದೇಶನಾಲಯವು (ಇ.ಡಿ) ಮಂಗಳವಾರ ಪ್ರಾಸಿಕ್ಯೂಷನ್ ದೂರು ದಾಖಲಿಸಿದೆ.</p>.<p>ಹೈದರಾಬಾದ್ ಎಜುಕೇಶನ್ ಸೊಸೈಟಿಯ ‘ಮಹದೇವಪ್ಪ ರಾಂಪುರೆ ವೈದ್ಯಕೀಯ ಕಾಲೇಜ್’ನ ವಿದ್ಯಾರ್ಥಿಗಳಿಗೆ ಸಿಗಬೇಕಾಗಿದ್ದ ಸ್ಟೈಫಂಡ್ ಅನ್ನು ಆರೋಪಿಗಳು ಕಬಳಿಸಿದ್ದರು. 2018ರಿಂದ 2024ರ ಅವಧಿಯಲ್ಲಿ ತಮ್ಮ ಕಾಲೇಜಿಗೆ ದಾಖಲಾದ ವಿದ್ಯಾರ್ಥಿಗಳಿಂದ, ಪ್ರವೇಶಾತಿ ಸಂದರ್ಭದಲ್ಲಿಯೇ ಖಾಲಿ ಚೆಕ್ಗಳಿಗೆ ಸಹಿ ಮಾಡಿಸಿಕೊಂಡಿದ್ದರು. ವಿದ್ಯಾರ್ಥಿಗಳಿಗೆ ಸ್ಟೈಫಂಡ್ ಬಂದಾಗ, ಆ ಚೆಕ್ಗಳನ್ನು ಬಳಸಿಕೊಂಡು ತಾವೇ ಹಣ ಪಡೆದುಕೊಂಡಿದ್ದರು ಎಂದು ಇ.ಡಿ ವಿವರಿಸಿದೆ.</p>.<p>ವಿದ್ಯಾರ್ಥಿಗಳ ಹಣವನ್ನು ಅಕ್ರಮವಾಗಿ ಡ್ರಾ ಮಾಡಿಕೊಳ್ಳುವಲ್ಲಿ ಕೆನರಾ ಬ್ಯಾಂಕ್ನ ನೌಕರ ಎಸ್.ಎಂ.ಪಾಟೀಲ ಸಹಕರಿಸಿದ್ದರು. ಮೂವರು ಸೇರಿಯೇ ಈ ಅಕ್ರಮ ಎಸಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ, ಮೂವರು ಆರೋಪಿಗಳಿಗೆ ಸೇರಿದ ₹6.72 ಕೋಟಿ ಮೌಲ್ಯದ ಸ್ವತ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವೈದ್ಯಕೀಯ ಪದವಿ ವಿದ್ಯಾರ್ಥಿಗಳ ₹33.34 ಕೋಟಿ ಮೊತ್ತದಷ್ಟು ಸ್ಟೈಫಂಡ್ ಕಬಳಿಸಿದ್ದ ಪ್ರಕರಣದಲ್ಲಿ ಹೈದರಾಬಾದ್ ಎಜುಕೇಶನ್ ಸೊಸೈಟಿಯ ಭೀಮಾಶಂಕರ್ ಬಿಳಗುಂಡಿ, ಮಲ್ಲಣ್ಣ ಎಸ್.ಮದ್ದಾರ್ಕಿ ವಿರುದ್ಧ ಜಾರಿ ನಿರ್ದೇಶನಾಲಯವು ಪ್ರಾಸಿಕ್ಯೂಷನ್ ದೂರು ದಾಖಲಿಸಿದೆ.</p>.<p>ಮಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದಲ್ಲಿ ಜಾರಿ ನಿರ್ದೇಶನಾಲಯವು (ಇ.ಡಿ) ಮಂಗಳವಾರ ಪ್ರಾಸಿಕ್ಯೂಷನ್ ದೂರು ದಾಖಲಿಸಿದೆ.</p>.<p>ಹೈದರಾಬಾದ್ ಎಜುಕೇಶನ್ ಸೊಸೈಟಿಯ ‘ಮಹದೇವಪ್ಪ ರಾಂಪುರೆ ವೈದ್ಯಕೀಯ ಕಾಲೇಜ್’ನ ವಿದ್ಯಾರ್ಥಿಗಳಿಗೆ ಸಿಗಬೇಕಾಗಿದ್ದ ಸ್ಟೈಫಂಡ್ ಅನ್ನು ಆರೋಪಿಗಳು ಕಬಳಿಸಿದ್ದರು. 2018ರಿಂದ 2024ರ ಅವಧಿಯಲ್ಲಿ ತಮ್ಮ ಕಾಲೇಜಿಗೆ ದಾಖಲಾದ ವಿದ್ಯಾರ್ಥಿಗಳಿಂದ, ಪ್ರವೇಶಾತಿ ಸಂದರ್ಭದಲ್ಲಿಯೇ ಖಾಲಿ ಚೆಕ್ಗಳಿಗೆ ಸಹಿ ಮಾಡಿಸಿಕೊಂಡಿದ್ದರು. ವಿದ್ಯಾರ್ಥಿಗಳಿಗೆ ಸ್ಟೈಫಂಡ್ ಬಂದಾಗ, ಆ ಚೆಕ್ಗಳನ್ನು ಬಳಸಿಕೊಂಡು ತಾವೇ ಹಣ ಪಡೆದುಕೊಂಡಿದ್ದರು ಎಂದು ಇ.ಡಿ ವಿವರಿಸಿದೆ.</p>.<p>ವಿದ್ಯಾರ್ಥಿಗಳ ಹಣವನ್ನು ಅಕ್ರಮವಾಗಿ ಡ್ರಾ ಮಾಡಿಕೊಳ್ಳುವಲ್ಲಿ ಕೆನರಾ ಬ್ಯಾಂಕ್ನ ನೌಕರ ಎಸ್.ಎಂ.ಪಾಟೀಲ ಸಹಕರಿಸಿದ್ದರು. ಮೂವರು ಸೇರಿಯೇ ಈ ಅಕ್ರಮ ಎಸಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ, ಮೂವರು ಆರೋಪಿಗಳಿಗೆ ಸೇರಿದ ₹6.72 ಕೋಟಿ ಮೌಲ್ಯದ ಸ್ವತ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>