<p><strong>ನವದೆಹಲಿ</strong>: ವಿವಿಧೆಡೆ ಕೈಗಾರಿಕಾ ಪ್ರದೇಶಗಳ ನಿರ್ಮಾಣಕ್ಕೆ ಸ್ವಾಧೀನಪಡಿಸಿಕೊಂಡ ಜಮೀನುಗಳಿಗೆ ರೈತರ ಹೆಸರಿನಲ್ಲಿ ಅನ್ಯರಿಗೆ ಪರಿಹಾರ ವಿತರಿಸಿ, ವಂಚಿಸಿರುವ ಪ್ರಕರಣದ ಸಂಬಂಧ ತನಿಖೆ ನಡೆಸಿರುವ ಜಾರಿ ನಿರ್ದೇಶನಾಲಯವು ಡಿಜಿಟಲ್ ಸಾಧನ, ₹1.5 ಕೋಟಿ ನಗದು ಹಾಗೂ ದಾಖಲೆಗಳನ್ನು ವಶಪಡಿಸಿಕೊಂಡಿದೆ. </p>.<p>ಇ.ಡಿ.ಅಧಿಕಾರಿಗಳ ತಂಡವು ಕೆಐಎಡಿಬಿ ಪ್ರಧಾನ ಕಚೇರಿ, ಧಾರವಾಡ ವಲಯ ಕಚೇರಿ ಮೇಲೆ ಶುಕ್ರವಾರ ದಾಳಿ ಮಾಡಿ, ಶೋಧ ನಡೆಸಿತ್ತು.</p>.<p>ಧಾರವಾಡದ ಗಾಮನಗಟ್ಟಿ ಕೈಗಾರಿಕಾ ಪ್ರದೇಶದಲ್ಲಿ 2012ರಲ್ಲಿ ಭೂಸ್ವಾಧೀನಪಡಿಸಿಕೊಂಡ ಜಮೀನುಗಳಿಗೆ ಒಮ್ಮೆ ಪರಿಹಾರ ನೀಡಲಾಗಿತ್ತು. 2021ರಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ 14 ಮಂದಿಗೆ ₹ 19.9 ಕೋಟಿ ಪರಿಹಾರ ವಿತರಿಸಲಾಗಿತ್ತು. ಈ ಕುರಿತು ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿ, ತನಿಖೆ ನಡೆಸಲಾಗಿತ್ತು. ಪೊಲೀಸರು ದಾಖಲಿಸಿರುವ ಎಫ್ಐಆರ್ಗಳ ಆಧಾರದಲ್ಲಿ ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿರುವ ಇ.ಡಿ. ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. </p>.<p>ಕೆಐಎಡಿಬಿಯ ಧಾರವಾಡ ವಲಯದ ಮಾಜಿ ವಿಶೇಷ ಭೂಸ್ವಾಧೀನ ಅಧಿಕಾರಿ ವಿ.ಡಿ.ಸಜ್ಜನ್ ಹಾಗೂ ಇತರರ ವಿರುದ್ಧ ಪೊಲೀಸರು ಈ ಹಿಂದೆಯೇ ಎಫ್ಐಆರ್ ದಾಖಲಿಸಿದ್ದಾರೆ. ಸಜ್ಜನ್ ಹಾಗೂ ಇತರ ಅಧಿಕಾರಿಗಳು ದಲ್ಲಾಳಿಗಳೊಂದಿಗೆ ಕೈಜೋಡಿಸಿ ₹19.9 ಕೋಟಿ ಪರಿಹಾರ ವಿತರಿಸಿದ್ದಾರೆ. ಇದರಿಂದಾಗಿ, ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟಾಗಿದೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ. ಇದೇ ವಿಧಾನ ಬಳಸಿ ಅಧಿಕಾರಿಗಳು ಈ ಹಿಂದೆ ₹72.55 ಕೋಟಿ ಪರಿಹಾರ ನೀಡಿರುವ ಬಗ್ಗೆಯೂ ನಿರ್ದೇಶನಾಲಯ ಮಾಹಿತಿ ಕಲೆ ಹಾಕಿದೆ. </p>.<p>ಮೂಲ ಪಾವತಿ ರಿಜಿಸ್ಟರ್, ಭೂಸ್ವಾಧೀನಕ್ಕೆ ಕೆಐಎಡಿಬಿ ಹೊರಡಿಸಿದ ಅಂತಿಮ ಅಧಿಸೂಚನೆ, ನಕಲಿ ಭೂ ಮಾಲೀಕರ ಹೆಸರಿನಲ್ಲಿ ಸಿದ್ಧಪಡಿಸಲಾದ ಆರ್ಟಿಜಿಎಸ್ ಪಾವತಿ ನಮೂನೆಗಳು ಇತ್ಯಾದಿ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. </p>.<p>ಸಜ್ಜನ್ ಹೆಸರಿನಲ್ಲಿರುವ ₹55 ಲಕ್ಷಗಳ ಬ್ಯಾಂಕ್ ಠೇವಣಿಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ತನಿಖಾ ತಂಡ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ವಿವಿಧೆಡೆ ಕೈಗಾರಿಕಾ ಪ್ರದೇಶಗಳ ನಿರ್ಮಾಣಕ್ಕೆ ಸ್ವಾಧೀನಪಡಿಸಿಕೊಂಡ ಜಮೀನುಗಳಿಗೆ ರೈತರ ಹೆಸರಿನಲ್ಲಿ ಅನ್ಯರಿಗೆ ಪರಿಹಾರ ವಿತರಿಸಿ, ವಂಚಿಸಿರುವ ಪ್ರಕರಣದ ಸಂಬಂಧ ತನಿಖೆ ನಡೆಸಿರುವ ಜಾರಿ ನಿರ್ದೇಶನಾಲಯವು ಡಿಜಿಟಲ್ ಸಾಧನ, ₹1.5 ಕೋಟಿ ನಗದು ಹಾಗೂ ದಾಖಲೆಗಳನ್ನು ವಶಪಡಿಸಿಕೊಂಡಿದೆ. </p>.<p>ಇ.ಡಿ.ಅಧಿಕಾರಿಗಳ ತಂಡವು ಕೆಐಎಡಿಬಿ ಪ್ರಧಾನ ಕಚೇರಿ, ಧಾರವಾಡ ವಲಯ ಕಚೇರಿ ಮೇಲೆ ಶುಕ್ರವಾರ ದಾಳಿ ಮಾಡಿ, ಶೋಧ ನಡೆಸಿತ್ತು.</p>.<p>ಧಾರವಾಡದ ಗಾಮನಗಟ್ಟಿ ಕೈಗಾರಿಕಾ ಪ್ರದೇಶದಲ್ಲಿ 2012ರಲ್ಲಿ ಭೂಸ್ವಾಧೀನಪಡಿಸಿಕೊಂಡ ಜಮೀನುಗಳಿಗೆ ಒಮ್ಮೆ ಪರಿಹಾರ ನೀಡಲಾಗಿತ್ತು. 2021ರಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ 14 ಮಂದಿಗೆ ₹ 19.9 ಕೋಟಿ ಪರಿಹಾರ ವಿತರಿಸಲಾಗಿತ್ತು. ಈ ಕುರಿತು ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿ, ತನಿಖೆ ನಡೆಸಲಾಗಿತ್ತು. ಪೊಲೀಸರು ದಾಖಲಿಸಿರುವ ಎಫ್ಐಆರ್ಗಳ ಆಧಾರದಲ್ಲಿ ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿರುವ ಇ.ಡಿ. ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. </p>.<p>ಕೆಐಎಡಿಬಿಯ ಧಾರವಾಡ ವಲಯದ ಮಾಜಿ ವಿಶೇಷ ಭೂಸ್ವಾಧೀನ ಅಧಿಕಾರಿ ವಿ.ಡಿ.ಸಜ್ಜನ್ ಹಾಗೂ ಇತರರ ವಿರುದ್ಧ ಪೊಲೀಸರು ಈ ಹಿಂದೆಯೇ ಎಫ್ಐಆರ್ ದಾಖಲಿಸಿದ್ದಾರೆ. ಸಜ್ಜನ್ ಹಾಗೂ ಇತರ ಅಧಿಕಾರಿಗಳು ದಲ್ಲಾಳಿಗಳೊಂದಿಗೆ ಕೈಜೋಡಿಸಿ ₹19.9 ಕೋಟಿ ಪರಿಹಾರ ವಿತರಿಸಿದ್ದಾರೆ. ಇದರಿಂದಾಗಿ, ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟಾಗಿದೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ. ಇದೇ ವಿಧಾನ ಬಳಸಿ ಅಧಿಕಾರಿಗಳು ಈ ಹಿಂದೆ ₹72.55 ಕೋಟಿ ಪರಿಹಾರ ನೀಡಿರುವ ಬಗ್ಗೆಯೂ ನಿರ್ದೇಶನಾಲಯ ಮಾಹಿತಿ ಕಲೆ ಹಾಕಿದೆ. </p>.<p>ಮೂಲ ಪಾವತಿ ರಿಜಿಸ್ಟರ್, ಭೂಸ್ವಾಧೀನಕ್ಕೆ ಕೆಐಎಡಿಬಿ ಹೊರಡಿಸಿದ ಅಂತಿಮ ಅಧಿಸೂಚನೆ, ನಕಲಿ ಭೂ ಮಾಲೀಕರ ಹೆಸರಿನಲ್ಲಿ ಸಿದ್ಧಪಡಿಸಲಾದ ಆರ್ಟಿಜಿಎಸ್ ಪಾವತಿ ನಮೂನೆಗಳು ಇತ್ಯಾದಿ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. </p>.<p>ಸಜ್ಜನ್ ಹೆಸರಿನಲ್ಲಿರುವ ₹55 ಲಕ್ಷಗಳ ಬ್ಯಾಂಕ್ ಠೇವಣಿಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ತನಿಖಾ ತಂಡ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>