<p><strong>ಬೆಂಗಳೂರು</strong>: ‘ಹಣ ಅಕ್ರಮ ವರ್ಗಾವಣೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಬಂಧಿತರಾಗಿದ್ದ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಜೂರು ಮಾಡಿರುವ ಜಾಮೀನು ರದ್ದುಪಡಿಸಬೇಕು’ ಎಂದು ಕೋರಿ ಜಾರಿ ನಿರ್ದೇಶನಾಲಯ (ಇ.ಡಿ) ಹೈಕೋರ್ಟ್ ಮೆಟ್ಟಿಲೇರಿದೆ.</p>.<p>ಈ ಕುರಿತಂತೆ ಬೆಂಗಳೂರು ಇ.ಡಿ ವಲಯದ ಸಹಾಯಕ ನಿರ್ದೇಶಕ ಅಜಯ ವೈದ್ಯ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಇ.ಡಿ ಪರ ವಕೀಲರು, ‘ಪ್ರತಿವಾದಿ ವಿರೇಂದ್ರ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಜೂರು ಮಾಡಿರುವ ಜಾಮೀನು ರದ್ದುಪಡಿಸಬೇಕು’ ಎಂದು ಕೋರಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ಪ್ರತಿವಾದಿ ವೀರೇಂದ್ರ ಅವರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಇದೇ 26ಕ್ಕೆ ಮುಂದೂಡಿತು.</p>.<p>‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು 2025ರ ಡಿಸೆಂಬರ್ 3ರಂದು ಆರೋಪಿ ವೀರೇಂದ್ರ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದರು. ಪಿಎಂಎಲ್ಎ ಕಾಯ್ದೆ–2002ರ ಕಲಂ 3 ಮತ್ತು 4ರ ಅಡಿಯಲ್ಲಿ ವೀರೇಂದ್ರ ವಿರುದ್ಧ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಹಣ ಅಕ್ರಮ ವರ್ಗಾವಣೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಬಂಧಿತರಾಗಿದ್ದ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಜೂರು ಮಾಡಿರುವ ಜಾಮೀನು ರದ್ದುಪಡಿಸಬೇಕು’ ಎಂದು ಕೋರಿ ಜಾರಿ ನಿರ್ದೇಶನಾಲಯ (ಇ.ಡಿ) ಹೈಕೋರ್ಟ್ ಮೆಟ್ಟಿಲೇರಿದೆ.</p>.<p>ಈ ಕುರಿತಂತೆ ಬೆಂಗಳೂರು ಇ.ಡಿ ವಲಯದ ಸಹಾಯಕ ನಿರ್ದೇಶಕ ಅಜಯ ವೈದ್ಯ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಇ.ಡಿ ಪರ ವಕೀಲರು, ‘ಪ್ರತಿವಾದಿ ವಿರೇಂದ್ರ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಜೂರು ಮಾಡಿರುವ ಜಾಮೀನು ರದ್ದುಪಡಿಸಬೇಕು’ ಎಂದು ಕೋರಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ಪ್ರತಿವಾದಿ ವೀರೇಂದ್ರ ಅವರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಇದೇ 26ಕ್ಕೆ ಮುಂದೂಡಿತು.</p>.<p>‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು 2025ರ ಡಿಸೆಂಬರ್ 3ರಂದು ಆರೋಪಿ ವೀರೇಂದ್ರ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದರು. ಪಿಎಂಎಲ್ಎ ಕಾಯ್ದೆ–2002ರ ಕಲಂ 3 ಮತ್ತು 4ರ ಅಡಿಯಲ್ಲಿ ವೀರೇಂದ್ರ ವಿರುದ್ಧ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>