<p><strong>ಬೆಂಗಳೂರು:</strong> ರಸ್ತೆ ವಿಸ್ತರಣೆಗಾಗಿ ಸ್ವಾಧೀನಪಡಿಸಿಕೊಂಡ ಸ್ವತ್ತುಗಳಿಗೆ ಪ್ರತಿಯಾಗಿ ನೀಡಲಾಗಿದ್ದ ಅಭಿವೃದ್ಧಿ ಹಕ್ಕು ವರ್ಗಾವಣೆ ಪ್ರಮಾಣ ಪತ್ರ (ಟಿಡಿಆರ್ ಪ್ರಮಾಣ ಪತ್ರ) ವಂಚನೆ ಪ್ರಕರಣದಲ್ಲಿ ಬಿಬಿಎಂಪಿಯ ಉನ್ನತ ಅಧಿಕಾರಿಗಳು ನೇರವಾಗಿ ಭಾಗಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಹೇಳಿದೆ.</p>.<p>ಈ ಸಂಬಂಧ ವಾಲ್ಮಾರ್ಕ್ ರಿಯಾಲ್ಟಿ ಹೋಲ್ಡಿಂಗ್ಸ್ ಕಂಪನಿಗೆ ಸೇರಿದ ಒಂಬತ್ತು ಸ್ಥಳಗಳಲ್ಲಿ ಇ.ಡಿ ಅಧಿಕಾರಿಗಳು ಗುರುವಾರ ಮತ್ತು ಶುಕ್ರವಾರ ಶೋಧ ನಡೆಸಿದ್ದರು.</p>.<p>2009–2015ರ ಅವಧಿಯಲ್ಲಿ ಹೊರಮಾವು ಮತ್ತು ಟಿ.ಸಿ.ಪಾಳ್ಯ ರಸ್ತೆ ವಿಸ್ತರಣೆಗಾಗಿ ಬಿಬಿಎಂಪಿಯು ಜಮೀನು ಮತ್ತು ವಸತಿ ಕಟ್ಟಡಗಳನ್ನು ಸ್ವಾಧೀನಕ್ಕೆ ಪಡೆದುಕೊಂಡಿತ್ತು. ಆದರೆ 1989ರಲ್ಲೇ ಈ ಜಮೀನುಗಳನ್ನು ನಿವೇಶನಗಳಾಗಿ ಪರಿವರ್ತಿಸಿ ಮಾರಾಟ ಮಾಡಲಾಗಿತ್ತು ಎಂದು ಇ.ಡಿ ಮೂಲಗಳು ತಿಳಿಸಿವೆ.</p>.<p>ಈ ಸಂಗತಿಯನ್ನು ಮರೆಮಾಚಿ, ವಾಲ್ಮಾರ್ಕ್ ರಿಯಾಲ್ಟಿ ಹೋಲ್ಡಿಂಗ್ಸ್ ಮತ್ತು ಕೆಲ ಮಧ್ಯವರ್ತಿಗಳು ಜಮೀನಿನ ಮೂಲ ಮಾಲೀಕರಿಂದ ಟಿಡಿಆರ್ ಕೋರಿ ಬಿಬಿಎಂಪಿಗೆ ಅರ್ಜಿ ಹಾಕಿಸಿದ್ದರು. ಬಿಬಿಎಂಪಿ ಅಧಿಕಾರಿಗಳಿಗೆ ಇದು ಗೊತ್ತಿದ್ದೂ, ₹27.68 ಕೋಟಿ ಮೊತ್ತದ ಟಿಡಿಆರ್ ನೀಡಿದ್ದರು ಎಂದು ಇ.ಡಿ ವಿವರಿಸಿದೆ.</p>.<p>ಮೂಲ ಮಾಲೀಕರಿಂದ ಟಿಡಿಆರ್ ಅನ್ನು ಜಿಪಿಎ ಮಾಡಿಸಿಕೊಂಡಿದ್ದ ವಾಲ್ಮಾರ್ಕ್ ಕಂಪನಿಯು, ಮಧ್ಯವರ್ತಿಗಳ ಮೂಲಕ ಅವನ್ನು 12 ಬೇರೆ ಬೇರೆ ಕಂಪನಿಗಳಿಗೆ ಮಾರಾಟ ಮಾಡಿತ್ತು. ಇದರಲ್ಲಿ ಬಿಬಿಎಂಪಿ ಅಧಿಕಾರಿಗಳೂ ನೇರವಾಗಿ ಭಾಗಿಯಾಗಿದ್ದರು. ಈ ಮೂಲಕ ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡಿದ್ದಾರೆ ಎಂದು ತಿಳಿಸಿದೆ.</p>.<p>ಈ ಸಂಬಂಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ), ರಾಜ್ಯ ಪೊಲೀಸ್ ಇಲಾಖೆಗಳು ಹಲವು ಪ್ರಕರಣಗಳು ದಾಖಲಿಸಿಕೊಂಡು ತನಿಖೆ ನಡೆಸುತ್ತಿವೆ. ಆ ವಿವರಗಳನ್ನೂ ಕಲೆಹಾಕಿದ್ದು, ತನಿಖೆ ಮುಂದುವರೆಸಲಾಗಿದೆ ಎಂದು ಮಾಹಿತಿ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಸ್ತೆ ವಿಸ್ತರಣೆಗಾಗಿ ಸ್ವಾಧೀನಪಡಿಸಿಕೊಂಡ ಸ್ವತ್ತುಗಳಿಗೆ ಪ್ರತಿಯಾಗಿ ನೀಡಲಾಗಿದ್ದ ಅಭಿವೃದ್ಧಿ ಹಕ್ಕು ವರ್ಗಾವಣೆ ಪ್ರಮಾಣ ಪತ್ರ (ಟಿಡಿಆರ್ ಪ್ರಮಾಣ ಪತ್ರ) ವಂಚನೆ ಪ್ರಕರಣದಲ್ಲಿ ಬಿಬಿಎಂಪಿಯ ಉನ್ನತ ಅಧಿಕಾರಿಗಳು ನೇರವಾಗಿ ಭಾಗಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಹೇಳಿದೆ.</p>.<p>ಈ ಸಂಬಂಧ ವಾಲ್ಮಾರ್ಕ್ ರಿಯಾಲ್ಟಿ ಹೋಲ್ಡಿಂಗ್ಸ್ ಕಂಪನಿಗೆ ಸೇರಿದ ಒಂಬತ್ತು ಸ್ಥಳಗಳಲ್ಲಿ ಇ.ಡಿ ಅಧಿಕಾರಿಗಳು ಗುರುವಾರ ಮತ್ತು ಶುಕ್ರವಾರ ಶೋಧ ನಡೆಸಿದ್ದರು.</p>.<p>2009–2015ರ ಅವಧಿಯಲ್ಲಿ ಹೊರಮಾವು ಮತ್ತು ಟಿ.ಸಿ.ಪಾಳ್ಯ ರಸ್ತೆ ವಿಸ್ತರಣೆಗಾಗಿ ಬಿಬಿಎಂಪಿಯು ಜಮೀನು ಮತ್ತು ವಸತಿ ಕಟ್ಟಡಗಳನ್ನು ಸ್ವಾಧೀನಕ್ಕೆ ಪಡೆದುಕೊಂಡಿತ್ತು. ಆದರೆ 1989ರಲ್ಲೇ ಈ ಜಮೀನುಗಳನ್ನು ನಿವೇಶನಗಳಾಗಿ ಪರಿವರ್ತಿಸಿ ಮಾರಾಟ ಮಾಡಲಾಗಿತ್ತು ಎಂದು ಇ.ಡಿ ಮೂಲಗಳು ತಿಳಿಸಿವೆ.</p>.<p>ಈ ಸಂಗತಿಯನ್ನು ಮರೆಮಾಚಿ, ವಾಲ್ಮಾರ್ಕ್ ರಿಯಾಲ್ಟಿ ಹೋಲ್ಡಿಂಗ್ಸ್ ಮತ್ತು ಕೆಲ ಮಧ್ಯವರ್ತಿಗಳು ಜಮೀನಿನ ಮೂಲ ಮಾಲೀಕರಿಂದ ಟಿಡಿಆರ್ ಕೋರಿ ಬಿಬಿಎಂಪಿಗೆ ಅರ್ಜಿ ಹಾಕಿಸಿದ್ದರು. ಬಿಬಿಎಂಪಿ ಅಧಿಕಾರಿಗಳಿಗೆ ಇದು ಗೊತ್ತಿದ್ದೂ, ₹27.68 ಕೋಟಿ ಮೊತ್ತದ ಟಿಡಿಆರ್ ನೀಡಿದ್ದರು ಎಂದು ಇ.ಡಿ ವಿವರಿಸಿದೆ.</p>.<p>ಮೂಲ ಮಾಲೀಕರಿಂದ ಟಿಡಿಆರ್ ಅನ್ನು ಜಿಪಿಎ ಮಾಡಿಸಿಕೊಂಡಿದ್ದ ವಾಲ್ಮಾರ್ಕ್ ಕಂಪನಿಯು, ಮಧ್ಯವರ್ತಿಗಳ ಮೂಲಕ ಅವನ್ನು 12 ಬೇರೆ ಬೇರೆ ಕಂಪನಿಗಳಿಗೆ ಮಾರಾಟ ಮಾಡಿತ್ತು. ಇದರಲ್ಲಿ ಬಿಬಿಎಂಪಿ ಅಧಿಕಾರಿಗಳೂ ನೇರವಾಗಿ ಭಾಗಿಯಾಗಿದ್ದರು. ಈ ಮೂಲಕ ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡಿದ್ದಾರೆ ಎಂದು ತಿಳಿಸಿದೆ.</p>.<p>ಈ ಸಂಬಂಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ), ರಾಜ್ಯ ಪೊಲೀಸ್ ಇಲಾಖೆಗಳು ಹಲವು ಪ್ರಕರಣಗಳು ದಾಖಲಿಸಿಕೊಂಡು ತನಿಖೆ ನಡೆಸುತ್ತಿವೆ. ಆ ವಿವರಗಳನ್ನೂ ಕಲೆಹಾಕಿದ್ದು, ತನಿಖೆ ಮುಂದುವರೆಸಲಾಗಿದೆ ಎಂದು ಮಾಹಿತಿ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>