ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ 10 ಸಾವಿರಕ್ಕೂ ಅಧಿಕ ಶಿಕ್ಷಕರನ್ನು ನೇಮಿಸಿಕೊಳ್ಳಲು ಮುಂದಾಗಿದೆ. ಡಿಇಡಿ, ಬಿಇಡಿ ಜತೆಗೆ ಟಿಇಟಿ ಅರ್ಹತೆ ಪಡೆದವರನ್ನು ನೇಮಕಾತಿಯಿಂದ ವಂಚಿಸಲಾಗುತ್ತಿದೆ. ಈ ನೇಮಕಾತಿ ತಡೆಹಿಡಿಯಬೇಕು ಎಂದು ಆಗ್ರಹಿಸಿ ಅವಕಾಶ ವಂಚಿತ ಶಿಕ್ಷಕರು ಇದೇ 14ರಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ.
ನಗರದ ಫ್ರೀಡಂ ಪಾರ್ಕ್ನಲ್ಲಿ ಈ ಸತ್ಯಾಗ್ರಹ ನಡೆಯಲಿದ್ದು, ರಾಜ್ಯದ ಎಲ್ಲ ಭಾಗಗಳಿಂದ ಶಿಕ್ಷಕರು ಪಾಲ್ಗೊಳ್ಳಲಿದ್ದಾರೆ. ಕಾನೂನಿನ ಎಲ್ಲ ಅಡೆತಡೆಗಳನ್ನು ದೂರ ಮಾಡಿ, ಪ್ರತಿಯೊಬ್ಬರಿಗೂ ಅವಕಾಶ ಸಿಗುವಂತೆ ಮಾಡಬೇಕು ಎಂದು ಒತ್ತಾಯಿಸಲಾಗುವುದು ಎಂದು ನೊಂದ ಶಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.