ನಾಗರಹೊಳೆ ರಾಷ್ಟ್ರೀಯ ಉದ್ಯಾನದಿಂದ ನಾಗಾಪುರ ಗಿರಿಜನ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಗೊಂಡು ಎರಡು ದಶಕಗಳಾಗಿವೆ. ಅರಣ್ಯದಿಂದ ಹೊರಬಂದ 1,880 ಗಿರಿಜನ ಕುಟುಂಬಗಳಿಗೆ ಸಾಮಾಜಿಕ ಭದ್ರತೆ ನೀಡಿ ಸಮಾಜಮುಖಿಯಾಗಲು ಕೋಟ್ಯಂತರ ರೂಪಾಯಿ ವಿನಿಯೋಗಿಸಿದ್ದರೂ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಿದವರ ಸಂಖ್ಯೆ ಕಡಿಮೆ.